ಬ್ರೇಕಿಂಗ್ ನ್ಯೂಸ್
01-07-25 02:22 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 1 : ಹಣಕ್ಕಾಗಿ ರಾಜಕಾರಣಿಗಳು ಮತ್ತು ತನ್ನ ಸ್ನೇಹಿತರ ಜೊತೆಗೆ ಮಲಗುವಂತೆ ಪತಿ ಒತ್ತಾಯಿಸುವುದು ಹಾಗೂ ಅತ್ತೆ, ಮಾವ ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಮಹಿಳೆಯೊಬ್ಬರು ಪತಿ, ಅತ್ತೆ, ಮಾವನ ವಿರುದ್ಧವೇ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪತಿ ಯೂನಿಸ್ ಪಾಷಾ ವಿಕೃತ ವರ್ತನೆಯಿಂದ ಬೇಸತ್ತು ದೂರು ದಾಖಲಿಸಿದ್ದಾರೆ. ರಾಜಕಾರಣಿಗಳು ಮತ್ತು ತನ್ನ ಸಹಚರರ ಜೊತೆ ಮಲಗುವಂತೆ ಒತ್ತಾಯಿಸುತ್ತಾನೆ. ಒಪ್ಪದೇ ಇದ್ದುದಕ್ಕೆ ಈಗಾಗಲೇ ಆರು ಬಾರಿ ತಲಾಖ್ ನೀಡಿದ್ದಾನೆ. ಜೊತೆಗೆ ಗರ್ಭಪಾತ ಮಾಡಿಸಿದ್ದಾನೆ. ಅಷ್ಟೇ ಅಲ್ಲದೆ, ತಲೆಗೆ ಗನ್ ಇಟ್ಟು ಬೆದರಿಕೆ ಹಾಕುತ್ತಾನೆ. ಪತ್ನಿ ಮನೆಯವರಿಗೆಲ್ಲ ಮಚ್ಚು, ಲಾಂಗ್ ತೋರಿಸಿ ಬೆದರಿಸುತ್ತಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಸಂತ್ರಸ್ತ ಯುವತಿ 25-6-2021 ರಂದು ಆರೋಪಿ ಯೂನಸ್ ಪಾಷಾನನ್ನು ವಿವಾಹವಾಗಿದ್ದರು. 4 ತಿಂಗಳ ನಂತರ ಆರೋಪಿಗಳಾದ ಯೂನಸ್ ಪಾಷಾ, ಆತನ ತಂದೆ ಚಿಂದ್ ಪಾಷಾ, ತಾಯಿ ಪಹೀನ್ ತಾಜ್ ಸೇರಿಕೊಂಡು ಸಂತ್ರಸ್ತೆಗೆ ಹಿಂಸೆ ನೀಡಲು ಆರಂಭಿಸಿದ್ದಾರೆ. ಈ ಮಧ್ಯೆ, ಸಂತ್ರಸ್ತೆ ಗರ್ಭವತಿಯಾಗಿದ್ದು, ಯೂನಸ್ ಪಾಷಾ ಆಕೆಯ ಹೊಟ್ಟೆಯ ಮೇಲೆ ಒದ್ದು ಹಲ್ಲೆ ಮಾಡಿದ್ದ. 17-12-2021 ರಂದು ಸಂತ್ರಸ್ತೆಯನ್ನು ಹೆದರಿಸಿ ಮತ್ತು ಒತ್ತಾಯಪಡಿಸಿ ಗರ್ಭಪಾತ ಮಾಡಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪತಿ ಯೂನಸ್ ಪಾಷಾಗೆ ರಾಜಕಾರಣಿಗಳು, ಸ್ಥಳೀಯ ರೌಡಿಗಳ ನಂಟು ಇದೆ. ಆರೋಪಿ ಸಂತ್ರಸ್ತೆಯನ್ನು ಆತನ ರಾಜಕಾರಣಿ ಸ್ನೇಹಿತನಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆ ಎಂಬುದು ಕೆಲವು ತಿಂಗಳ ಹಿಂದೆ ತಿಳಿದುಬಂದಿದೆ. ಇದರಿಂದ ಭಯಗೊಂಡ ಸಂತ್ರಸ್ತೆ ಎರಡು ತಿಂಗಳಿಂದ ಗಂಡನ ಮನೆ ಬಿಟ್ಟು ಬಂದು ತಾಯಿ ಮನೆಯಲ್ಲಿ ವಾಸವಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ
ಪತಿ ಮಾತ್ರವಲ್ಲ, ಅತ್ತೆ, ಮಾವ ಕೂಡ ವರದಕ್ಷಿಣೆಗಾಗಿ ನಿರಂತರ ಟಾರ್ಚರ್ ನೀಡುತ್ತಾರೆ. ಮಾವ ತನಗೆ ಮಸಾಜ್ ಮಾಡುವಂತೆ ಒತ್ತಾಯ ಮಾಡುತ್ತಾರೆ ಎಂದು ಪತಿ, ಅತ್ತೆ ಹಾಗೂ ಮಾವನ ಮೇಲೆ ಆರೋಪಗಳನ್ನು ಹೊರಿಸಿದ್ದಾರೆ. ದೂರು ಕೊಟ್ಟು ಹಿರಿಯ ಪೊಲೀಸ್ ಅಧಿಕಾರಿಗಳಲ್ಲಿ ತನಗೆ ನ್ಯಾಯ ಕೊಡಿಸಿ ಎಂದು ಮಹಿಳೆ ಕೇಳಿಕೊಂಡಿದ್ದಾರೆ. ಸದ್ಯ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಯೂನಿಸ್ ಮತ್ತು ಆತನ ತಂದೆ, ತಾಯಿ ವಿರುದ್ಧ ಎಫ್ಐಆರ್ ದಾಖಲಾಗಿದೆ
In a disturbing case of domestic abuse and exploitation, a woman from Bengaluru has filed a complaint at the Banashankari Police Station against her husband, mother-in-law, and father-in-law, accusing them of harassment, blackmail, and mental and physical torture.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm