ಬ್ರೇಕಿಂಗ್ ನ್ಯೂಸ್
03-07-25 07:09 pm HK News Desk ಕ್ರೈಂ
ಜೈಪುರ, ಜು.03: ಅದ್ಧೂರಿಯಾಗಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ ಪರಿಣಾಮ ಮಂಟಪದಿಂದಲೇ ವರ ಓಡಿಹೋಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ರಾಜಸ್ಥಾನದ ಪ್ರಸಿದ್ಧ ಫೇರ್ಮಾಂಟ್ ಹೋಟೆಲ್ನಲ್ಲಿ ಅದ್ಧೂರಿ ವಿವಾಹ ನಡೆಯುತ್ತಿತ್ತು. ಇದು ಸೌರಭ್ ಅಹುಜಾ ಎಂಬವನ ಅದ್ದೂರಿ ವಿವಾಹವಾಗಿತ್ತು. ಈ ಸೌರಭ್ ಅಹುಜಾ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಮುಖ್ಯ ಆರೋಪಿಯಾಗಿದ್ದಾನೆ.
15,000 ಕೋಟಿ ರೂಪಾಯಿಗಳ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿತ್ತು. ಸೌರಭ್ ಅಹುಜಾ ಪ್ರಕರಣದಲ್ಲಿ ಮೋಸ್ಟ್ ವಾಂಟೆಡ್ ಆಗಿದ್ದಾನೆ.
ಮದುವೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಇ.ಡಿ ಅಧಿಕಾರಿಗಳು ಮಂಟಪಕ್ಕೆ ದಾಳಿ ಮಾಡಿದ್ದಾರೆ. ಆದರೆ 'ಸಪ್ತಪದಿ' ತುಳಿಯುವ ಮುನ್ನ ಇ.ಡಿ ತನ್ನ ಬಂಧನಕ್ಕೆ ಬರುತ್ತಿರುವ ಬಗ್ಗೆ ಅರಿತ ಸೌರಭ್ ಮಂಟಪದಿಂದಲೇ ಪರಾರಿ ಆಗಿದ್ದಾನೆ.
ಮಂಟಪಕ್ಕೆ ಸೌರಭ್ ಬಂಧನಕ್ಕೆ ಬಂದಿದ್ದ ಅಧಿಕಾರಿಗಳು, ಹಗರಣಕ್ಕೆ ಸಂಬಂಧಿಸಿ ಪ್ರಣವೇಂದ್ರ ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ. ಇದಲ್ಲದೆ ಸೌರಭ್ ಎಲ್ಲಿದ್ದಾನೆ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲು ವಧು, ಅವರ ಕುಟುಂಬ ಸದಸ್ಯರು ಮತ್ತು ಇತರ ನಿಕಟ ಸಂಬಂಧಿಗಳನ್ನು ಪ್ರಶ್ನಿಸಿದ್ದಾರೆ.
ಜೈಪುರಕ್ಕೆ ಬಂದಿದ್ದ ಇ.ಡಿ:
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಸ್ವಲ್ಪ ಸಮಯದಿಂದ ಸೌರಬ್ನನ್ನು ಟ್ರ್ಯಾಕ್ ಮಾಡುತ್ತಿತ್ತು. ಮದುವೆ ವೇಳೆಯೇ ಅವನನ್ನು ಬಂಧಿಸುವ ನಿಟ್ಟಿನಲ್ಲಿ ರಾಯ್ಪುರದಿಂದ ಜೈಪುರಕ್ಕೆ ಒಂದು ತಂಡವನ್ನು ಕಳುಹಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಮಹಾದೇವ್ ಬೆಟ್ಟಿಂಗ್ ಆ್ಯಪ್ ದೇಶದೆಲ್ಲೆಡೆ ಸಂಚಲನ ಸೃಷ್ಟಿಸಿದೆ. ಈ ಹಗರಣದಲ್ಲಿ ಖ್ಯಾತನಾಮರು ಸೇರಿ ಹಲವರ ಹೆಸರು ಕೂಡ ಹರಿದಾಡಿದೆ. ಬಾಲಿವುಡ್ನಲ್ಲೂ ಈ ಸಂಬಂಧ ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಈ ಹಿಂದೆ ನಟ ಮತ್ತು ಫಿಟೈಸ್ ಪ್ರಭಾವಿ ಸಾಹಿಲ್ ಖಾನ್ ನನ್ನು ಈ ಹಗರಣ ಸಂಬಂಧ ಬಂಧಿಸಲಾಗಿತ್ತು. ಸದ್ಯ ಜೈಪುರದಲ್ಲಿ ಬಂಧಿತರಾಗಿರುವ ಅರೋಪಿಗಳನ್ನು ವಿಚಾರಣೆ ನಡೆಸಿ, ಸೌರಭ್ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ವರದಿ ತಿಳಿಸಿದೆ.
The Enforcement Directorate (ED) team from Raipur, Chhattisgarh, conducted a raid at private hotel located in the Kukas area of Jaipur. The action was taken in connection with the ongoing investigation into the Mahadev Betting App case. According to ED sources, the agency had received a confidential tip-off that several individuals associated with the betting app were staying at the hotel to attend a wedding.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am