ಬ್ರೇಕಿಂಗ್ ನ್ಯೂಸ್
03-07-25 11:03 pm Mangalore Correspondent ಕ್ರೈಂ
ಪುತ್ತೂರು, ಜುಲೈ 3 : ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರನಿಂದ ಗರ್ಭಿಣಿಯಾಗಿ ಮಗುವಿಗೆ ಜನ್ಮವಿತ್ತ ಸಂತ್ರಸ್ತ ಯುವತಿಯ ಜೊತೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಫೋನಲ್ಲಿ ಮಾತನಾಡಿದ್ದು ನ್ಯಾಯ ದೊರಕಿಸಲು ಧ್ವನಿ ಎತ್ತುವುದಾಗಿ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಸಂತ್ರಸ್ತ ಯುವತಿಯ ಮನೆಗೆ ಭೇಟಿ ನೀಡಿದ್ದು ಇದೇ ವೇಳೆ ಮಹಿಳಾ ಆಯೋಗದ ಅಧ್ಯಕ್ಷರಿಗೆ ಫೋನಾಯಿಸಿ ದೂರು ಹೇಳಿದ್ದಾರೆ.

ಇದೇ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪ್ರತಿಭಾ ಕುಳಾಯಿ, ಎಷ್ಟೇ ಖರ್ಚಾಗಲಿ ಸಂತ್ರಸ್ತೆಯನ್ನು ಆಕೆಯ ಗಂಡನ ಮನೆಗೆ ಸೇರಿಸುವ ಜವಾಬ್ದಾರಿ ನನ್ನದು. ಇಲ್ಲೀವರೆಗೆ ಸಂತ್ರಸ್ತೆಗೆ ಒಬ್ಬರು ತಾಯಿ ಇದ್ದರು. ಇನ್ಮೇಲೆ ನಾನು ಕೂಡ ತಾಯಿ. ಸಂತ್ರಸ್ತೆ ಕುಟುಂಬದ ಖರ್ಚು ವೆಚ್ಚವನ್ನೆಲ್ಲ ನಾನು ಭರಿಸುತ್ತೇನೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತುಕತೆ ಮಾಡುತ್ತೇನೆ. ಸಂತ್ರಸ್ತೆ ಕುಟುಂಬದ ಜೊತೆ ನಿಂತು ನ್ಯಾಯ ಒದಗಿಸುವ ಕೆಲಸ ನನ್ನದು ಎಂದರು.
ಸಂತ್ರಸ್ತೆ ತಾಯಿ ಜೊತೆ ಮಾತನಾಡುವ ವೇಳೆ ನಿಮ್ಮ ಜೊತೆ ನಾನಿದ್ದೇನೆ, ಧೈರ್ಯ ಕಳೆದುಕೊಳ್ಳಬೇಡಿ, ಯಾವುದೇ ಕಾರಣಕ್ಕೂ ಮಾಸ್ಕ್ ಧರಿಸಿಕೊಂಡು ಜೀವನ ಮಾಡಬೇಡಿ, ‘ಅಂತಹ ದೊಡ್ಡ ತಪ್ಪು ನೀವೇನೂ ಮಾಡಿಲ್ಲ, ಇವತ್ತಿಂದ ಮಾಸ್ಕ್ ತೆಗೆದು ಧೈರ್ಯದಿಂದ ಇರಬೇಕು ಎಂದು ಹೇಳಿ ಸಂತ್ರಸ್ತೆ ತಾಯಿ ಮುಖಕ್ಕೆ ಹಾಕಿದ್ದ ಮಾಸ್ಕ್ ಅನ್ನು ಪ್ರತಿಭಾ ಕುಳಾಯಿ ತೆಗೆಸಿದರು. ಇಂತಹ ಘಟನೆಗಳು ನಡೆದಾಗ ಯಾವುದೇ ಕಾರಣಕ್ಕೂ ಮಹಿಳೆಯಾದವಳು ಧೈರ್ಯ ಕಳೆದುಕೊಳ್ಳಬಾರದು, ಬದಲಾಗಿ ಇಂತಹವರ ವಿರುದ್ಧ ಹೋರಾಟ ಮಾಡಬೇಕು ಎಂದರು.
ಇದೇ ವೇಳೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಜೊತೆ ಸಂತ್ರಸ್ತೆಯ ತಾಯಿ ನಮಿತಾ ಫೋನಲ್ಲಿ ಮಾತನಾಡಿದರು. ಈ ವೇಳೆ ನ್ಯಾಯ ದೊರಕಿಸಿ ಕೊಡುವಂತೆ ಸಂತ್ರಸ್ತೆಯ ತಾಯಿ ನಮಿತಾ ಕೇಳಿಕೊಂಡರು. ಫೋನ್ ಸಂಭಾಷಣೆಯಲ್ಲಿ ಧೈರ್ಯ ಹೇಳಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ, ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ.
The Karnataka State Women’s Commission chairperson Nagalakshmi Chaudhary personally intervened by calling the victim—who is pregnant after being abandoned by the son of BJP leader Jagannivas Rao—and assured her of support and justice.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm