Puttur Rape, Jagannivas Rao: ಬಿಜೆಪಿ ಮುಖಂಡನ ಪುತ್ರನಿಂದ ಮಗು ಜನನ ಪ್ರಕರಣ ; ಫೋನ್ ಕರೆ ಮಾಡಿ ಧೈರ್ಯ ತುಂಬಿದ ಮಹಿಳಾ ಆಯೋಗದ ಅಧ್ಯಕ್ಷೆ, ಸಂತ್ರಸ್ತೆಯನ್ನು ಗಂಡನ ಮನೆಗೆ ಸೇರಿಸುವ ಜವಾಬ್ದಾರಿ ನನ್ನದು ಎಂದ ಪ್ರತಿಭಾ ಕುಳಾಯಿ 

03-07-25 11:03 pm       Mangalore Correspondent   ಕ್ರೈಂ

ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರನಿಂದ ಗರ್ಭಿಣಿಯಾಗಿ ಮಗುವಿಗೆ ಜನ್ಮವಿತ್ತ ಸಂತ್ರಸ್ತ ಯುವತಿಯ ಜೊತೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಫೋನಲ್ಲಿ ಮಾತನಾಡಿದ್ದು ನ್ಯಾಯ ದೊರಕಿಸಲು ಧ್ವನಿ ಎತ್ತುವುದಾಗಿ ಹೇಳಿದ್ದಾರೆ.

ಪುತ್ತೂರು, ಜುಲೈ 3 : ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರನಿಂದ ಗರ್ಭಿಣಿಯಾಗಿ ಮಗುವಿಗೆ ಜನ್ಮವಿತ್ತ ಸಂತ್ರಸ್ತ ಯುವತಿಯ ಜೊತೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಫೋನಲ್ಲಿ ಮಾತನಾಡಿದ್ದು ನ್ಯಾಯ ದೊರಕಿಸಲು ಧ್ವನಿ ಎತ್ತುವುದಾಗಿ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಸಂತ್ರಸ್ತ ಯುವತಿಯ ಮನೆಗೆ ಭೇಟಿ ನೀಡಿದ್ದು ಇದೇ ವೇಳೆ ಮಹಿಳಾ ಆಯೋಗದ ಅಧ್ಯಕ್ಷರಿಗೆ ಫೋನಾಯಿಸಿ ದೂರು ಹೇಳಿದ್ದಾರೆ. 

ಇದೇ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪ್ರತಿಭಾ ಕುಳಾಯಿ, ಎಷ್ಟೇ ಖರ್ಚಾಗಲಿ ಸಂತ್ರಸ್ತೆಯನ್ನು ಆಕೆಯ ಗಂಡನ ಮನೆಗೆ ಸೇರಿಸುವ ಜವಾಬ್ದಾರಿ ನನ್ನದು. ಇಲ್ಲೀವರೆಗೆ ಸಂತ್ರಸ್ತೆಗೆ ಒಬ್ಬರು ತಾಯಿ ಇದ್ದರು. ಇನ್ಮೇಲೆ ನಾನು ಕೂಡ ತಾಯಿ. ಸಂತ್ರಸ್ತೆ ಕುಟುಂಬದ ಖರ್ಚು ವೆಚ್ಚವನ್ನೆಲ್ಲ ನಾನು ಭರಿಸುತ್ತೇನೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತುಕತೆ ಮಾಡುತ್ತೇನೆ. ಸಂತ್ರಸ್ತೆ ಕುಟುಂಬದ ಜೊತೆ ನಿಂತು ನ್ಯಾಯ ಒದಗಿಸುವ ಕೆಲಸ ನನ್ನದು ಎಂದರು. 

ಸಂತ್ರಸ್ತೆ ತಾಯಿ ಜೊತೆ ಮಾತನಾಡುವ ವೇಳೆ ನಿಮ್ಮ‌ ಜೊತೆ ನಾನಿದ್ದೇನೆ, ಧೈರ್ಯ ಕಳೆದುಕೊಳ್ಳಬೇಡಿ, ಯಾವುದೇ ಕಾರಣಕ್ಕೂ ಮಾಸ್ಕ್ ಧರಿಸಿಕೊಂಡು ಜೀವನ ಮಾಡಬೇಡಿ, ‘ಅಂತಹ ದೊಡ್ಡ ತಪ್ಪು ನೀವೇನೂ ಮಾಡಿಲ್ಲ, ಇವತ್ತಿಂದ ಮಾಸ್ಕ್ ತೆಗೆದು ಧೈರ್ಯದಿಂದ ಇರಬೇಕು ಎಂದು ಹೇಳಿ ಸಂತ್ರಸ್ತೆ ತಾಯಿ ಮುಖಕ್ಕೆ ಹಾಕಿದ್ದ ಮಾಸ್ಕ್ ಅನ್ನು ಪ್ರತಿಭಾ ಕುಳಾಯಿ ತೆಗೆಸಿದರು. ಇಂತಹ ಘಟನೆಗಳು ನಡೆದಾಗ ಯಾವುದೇ ಕಾರಣಕ್ಕೂ ಮಹಿಳೆಯಾದವಳು ಧೈರ್ಯ ಕಳೆದುಕೊಳ್ಳಬಾರದು, ಬದಲಾಗಿ ಇಂತಹವರ ವಿರುದ್ಧ ಹೋರಾಟ ಮಾಡಬೇಕು ಎಂದರು.

ಇದೇ ವೇಳೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಜೊತೆ ಸಂತ್ರಸ್ತೆಯ ತಾಯಿ ನಮಿತಾ ಫೋನಲ್ಲಿ ಮಾತನಾಡಿದರು. ಈ ವೇಳೆ ನ್ಯಾಯ ದೊರಕಿಸಿ ಕೊಡುವಂತೆ ಸಂತ್ರಸ್ತೆಯ ತಾಯಿ ನಮಿತಾ ಕೇಳಿಕೊಂಡರು. ಫೋನ್ ಸಂಭಾಷಣೆಯಲ್ಲಿ ಧೈರ್ಯ ಹೇಳಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ, ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ.

The Karnataka State Women’s Commission chairperson Nagalakshmi Chaudhary personally intervened by calling the victim—who is pregnant after being abandoned by the son of BJP leader Jagannivas Rao—and assured her of support and justice.