ಬ್ರೇಕಿಂಗ್ ನ್ಯೂಸ್
05-07-25 11:04 pm HK News Desk ಕ್ರೈಂ
ಪಾಟ್ನಾ, ಜು.5 : ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಗುಂಡಿನ ಸದ್ದು ಕೇಳಿದೆ. ಪಾಟ್ನಾದ ಬಿಜೆಪಿಯ ಪ್ರಮುಖ ನಾಯಕ ಹಾಗೂ ಖ್ಯಾತ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಬಿಹಾರದ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ಅಪರಿಚಿತರು ಶೂಟ್ ಮಾಡಿ ಎಸ್ಕೇಪ್ ಆಗಿದ್ದಾರೆ.
ಗೋಪಾಲ್ ಖೇಮ್ಕಾ ಬಿಹಾರದ ಅತ್ಯಂತ ಹಳೆಯ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮಗಧ ಆಸ್ಪತ್ರೆಯ ಮಾಲೀಕ ಮತ್ತು ಬಿಜೆಪಿಯಲ್ಲೂ ಸಕ್ರಿಯರಾಗಿ ಗುರುತಿಸಿಕೊಂಡವರು. ಪನಾಚೆ ಹೋಟೆಲ್ ಪಕ್ಕದಲ್ಲಿರುವ 'ಟ್ವಿನ್ ಟವರ್' ಸೊಸೈಟಿಯಲ್ಲಿ ವಾಸಿಸುತ್ತಿದ್ದರು. ತಮ್ಮ ನಿವಾಸದ ಸಮೀಪದಲ್ಲೇ ಫ್ಲಾಟ್ ಒಂದನ್ನ ಖರೀದಿ ಮಾಡಿದ್ದರು. ಅದೇ ಫ್ಲಾಟ್ ಗೆ ಹೋಗಲು ಹೊರಟವರು ಕಾರಿನಿಂದ ಇಳಿಯುತ್ತಿದ್ದಂತೆ ಅಡಗಿ ಕುಳಿತ್ತಿದ್ದ ಹಂತಕರು ಗೋಪಾಲ್ ಮೇಲೆ ಗುಂಡು ಹಾರಿಸಿ ಕೊಂದಿದ್ದಾರೆ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವ ಪೊಲೀಸರು ಒಂದು ಗುಂಡು ಮತ್ತು ಶೆಲ್ ಕೇಸಿಂಗ್ ವಶಪಡಿಸಿಕೊಂಡಿದ್ದಾರೆ.


ಚುನಾವಣೆಗೆ ಕೆಲವೇ ತಿಂಗಳಿರುವಾಗ ಹತ್ಯೆ
ಬಿಹಾರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗಲೇ ಬಿಜೆಪಿ ನಾಯಕನೊಬ್ಬನನ್ನ ಹತ್ಯೆ ಮಾಡಿರುವುದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.
6 ವರ್ಷಗಳ ಹಿಂದೆ ಮಗನ ಹತ್ಯೆ
ವಿಚಿತ್ರವೆಂದರೆ 6 ವರ್ಷಗಳ ಹಿಂದೆ 2018ರಲ್ಲಿ ಗೋಪಾಲ್ ಖೇಮ್ಕಾ ಮಗ ಗುಂಜನ್ ಕೂಡ ಇದೇ ರೀತಿ ಗುಂಡಿನ ದಾಳಿಗೆ ಬಲಿಯಾಗಿದ್ದ. ಪಾಟ್ನಾದ ಹೊರವಲಯದ ವೈಶಾಲಿಯಲ್ಲಿರುವ ಹತ್ತಿ ಕಾರ್ಖಾನೆಯ ಮುಂದೆ ತನ್ನ ಕಾರಿನಿಂದ ಇಳಿಯುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಆತನನ್ನ ಹತ್ಯೆ ಮಾಡಿದ್ದರು. ಇದೀಗ ಅದೇ ರೀತಿಯಲ್ಲಿ ತಂದೆ ಗೋಪಾಲ್ ಕೂಡ ಪ್ರಾಣ ತೆತ್ತಿದ್ದಾರೆ.
Prominent businessman Gopal Khemka was shot dead by an unidentified bike-borne assailant in Patna, Bihar, six years after his son, Gunjan Khemka, was killed in a similar manner.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am