ಬ್ರೇಕಿಂಗ್ ನ್ಯೂಸ್
07-07-25 07:13 pm Mangalore Correspondent ಕ್ರೈಂ
ಉಳ್ಳಾಲ, ಜು.7 : ಹದಿನಾರರ ವಯಸ್ಸಿನ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗದೇ ಇದ್ದು, ಆಕೆಯನ್ನ ಆಮಿಷ ತೋರಿಸಿ ಯಾರೋ ಅಪಹರಿಸಿ ಹೋಗಿರುವ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನ ಅಪಹರಿಸಿದ ಆರೋಪಿ ಯುವಕ ಮತ್ತು ಆತನಿಗೆ ಸಹಕರಿಸಿದ ದಂಪತಿಯನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಬಾಲಕಿಯನ್ನ ಅಪಹರಿಸಿದ ಆರೋಪಿಯಾಗಿದ್ದು, ಅಪ್ರಾಪ್ತೆಯನ್ನ ಆಕೆಯ ಮನೆಯಿಂದ ಅಪಹರಿಸಲು ಶಹಬಾಝ್ ಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ಎಂಬ ದಂಪತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮುಸ್ಲಿಂ ವ್ಯಕ್ತಿಯೋರ್ವರ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ವ್ಯಕ್ತಿಯು ಉಳ್ಳಾಲ ಠಾಣೆಯಲ್ಲಿ ತನ್ನ ಮಗಳನ್ನ ಯಾರೋ ಅಪಹರಿಸಿರೋದಾಗಿ ದೂರು ನೀಡಿದ್ದರು. ಶಹಭಾಝ್ ಈ ಮೊದಲೂ ಬಾಲಕಿಯನ್ನ ಪುಸಲಾಯಿಸಿ ಆಕೆಯ ಮನೆಯಿಂದ ಕರಕೊಂಡು ಹೋಗಿದ್ದನಂತೆ. ಮತ್ತೆ ಮನೆಗೆ ಹಿಂತಿರುಗಿದ್ದ ಬಾಲಕಿಗೆ ಪೋಷಕರು ಗದರಿದ್ದರು. ಪೋಷಕರು ತನಗೆ ಗದರಿದ್ದ ವಿಚಾರವನ್ನ ಬಾಲಕಿ ಶಹಬಾಝ್ ಗೆ ತಿಳಿಸಿದ್ದಳಂತೆ.
ಇದೀಗ ಶಹಭಾಝ್ ತನ್ನ ಪರಿಚಯಸ್ಥರಾದ ಅಮೀರ್ ಸೊಹೈಲ್ ಮತ್ತು ನಿಶಾ ದಂಪತಿ ಮೂಲಕ ಬಾಲಕಿಯನ್ನ ಮತ್ತೆ ಅಪಹರಿಸಿದ್ದನೆನ್ನಲಾಗಿದೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನ ಅಪಹರಿಸಿದ್ದ ಆರೋಪಿಗಳನ್ನ ಪತ್ತೆಹಚ್ಚಿದ್ದಾರೆ.
ಸಂತ್ರಸ್ತ ಅಪ್ರಾಪ್ತ ಬಾಲಕಿಯನ್ನ ಉಳ್ಳಾಲ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿಗಳನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
A 16-year-old girl was allegedly kidnapped from her home in Ullal, leading to the arrest of a youth and a couple under the POCSO (Protection of Children from Sexual Offences) Act, police officials confirmed.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm