ಬ್ರೇಕಿಂಗ್ ನ್ಯೂಸ್
07-07-25 10:31 pm Mangalore Correspondent ಕ್ರೈಂ
ಮಂಗಳೂರು, ಜುಲೈ 7 : ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬರು 6.50 ಲಕ್ಷ ರೂ. ಕಳಕೊಂಡ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 25ರಂದು ವಾಟ್ಸಪ್ ನಲ್ಲಿ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತು. ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ಟೆಲಿಗ್ರಾಮ್ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಆನಂತರ ಮತ್ತೆರಡು ಲಿಂಕ್ ಕಳುಹಿಸಿದ್ದು, ಅದರ ಮೂಲಕ 20 ವರ್ಕ್ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದ್ದರು. ಇದಕ್ಕೂ ಮೊದಲು ವರ್ಕಿಂಗ್ ಐಡಿ ನಂಬರ್ ಕೊಡುವುದಕ್ಕಾಗಿ ಬ್ಯಾಂಕ್ ಖಾತೆ ವಿವರಗಳನ್ನು ನೀಡುವಂತೆ ಸೂಚಿಸಿದ್ದರು.
ಪ್ರತಿ ಟಾಸ್ಕ್ ಮುಗಿಸಿದಾಗ ಖಾತೆಗೆ 180 ರೂ. ಹಣ ಹಾಕುವುದಾಗಿ ಹೇಳಿದ್ದರು. ಆನಂತರ, ಇಂತಿಷ್ಟು ಹಣ ಕಟ್ಟಿ ಟಾಸ್ಕ್ ಪೂರೈಸಿದರೆ ದುಪ್ಪಟ್ಟು ಹಣ ಸಿಗುವುದಾಗಿ ನಂಬಿಸಿದ್ದಾರೆ. ಅದರಂತೆ, ಈ ವ್ಯಕ್ತಿ ಅಪರಿಚಿರು ಹೇಳಿದ ರೀತಿಯಲ್ಲೇ ಹಣ ಪಾವತಿಸಿದ್ದರು. ಮತ್ತಷ್ಟು ಹಣ ಹಾಕಿದರೆ ಡಬಲ್ ಆಗುವುದಾಗಿ ನಂಬಿಸಿದ್ದು ಮತ್ತು ಅದರ ತೆರಿಗೆಯೆಂದು ಹೇಳಿ ಇನ್ನಷ್ಟು ಹಣ ಕೇಳಿದ್ದರು. ಅದೇ ಪ್ರಕಾರ ಹಂತ ಹಂತವಾಗಿ 6.50 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಅಲ್ಲಿ ವರೆಗೂ ಈ ವ್ಯಕ್ತಿಗೆ 380 ರೂ. ಮಾತ್ರ ಮರಳಿ ಸಿಕ್ಕಿತ್ತು. ಹಣವನ್ನು ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟುವಂತೆ ಹೇಳಿದ್ದು ಇದರಿಂದ ತಾನು ಮೋಸ ಹೋಗಿರುವುದಾಗಿ ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
A man from Mangaluru has reportedly lost ₹6.5 lakh after falling victim to an online scam that promised earnings through a work-from-home part-time job. The incident has been registered at the Mangaluru Rural Police Station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm