ಬ್ರೇಕಿಂಗ್ ನ್ಯೂಸ್
10-07-25 12:04 pm HK News Desk ಕ್ರೈಂ
ಹಾಸನ, ಜು 10 : ಆಸ್ತಿ ವಿಚಾರಕ್ಕೆ ಮಗನೇ ತಂದೆ ಹಾಗೂ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.
ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರು. ಮೋಹನ್ (47) ಕೊಲೆಗೈದ ಆರೋಪಿ. ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು. ಮಂಜುನಾಥ್, ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದ.

ತಂದೆ ದೇವೇಗೌಡ, ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಾಟ ಮಾಡಿದ ಹಣ ನೀಡಿಲ್ಲ ಎಂದು ಮೋಹನ್ ಗಲಾಟೆ ಮಾಡಿದ್ದ. ಇದೇ ವಿಚಾರವಾಗಿ ಕೋಪಗೊಂಡಿದ್ದ ಮೋಹನ್, ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಮಲಗಿದ್ದ ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಈ ವೇಳೆ ತಂದೆ ದೇವೇಗೌಡ ಅವರು ಹಿರಿಯ ಮಗ ಮಂಜುನಾಥ್ ಮೇಲೆ ಹಲ್ಲೆಯಾಗುತ್ತಿರುವುದನ್ನು ತಡೆಯಲು ಬಂದಿದ್ದರು. ಈ ವೇಳೆ ಮೋಹನ್, ತಂದೆಯ ಮೇಲೆಯೂ ಮಚ್ಚಿನಿಂದ ಹಲ್ಲೆ ಮಾಡಿದ್ದ. ಮಗನನ್ನ ತಡೆಯಲು ಬಂದ ತಾಯಿ ಜಯಮ್ಮನ ಮೇಲೂ ಮೋಹನ್ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಜಯಮ್ಮ, ಮನೆಯಿಂದ ಹೊರಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡು, ರಾತ್ರಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು.
ತಂದೆ ಹಾಗೂ ಸಹೋದರ ಕೊಲೆ ಮಾಡಿ ಮನೆಯ ಮತ್ತೊಂದು ಭಾಗದಲ್ಲಿ ಮಲಗಿದ್ದ. ನನಗೆ ಏಟಾಗಿದೆ ಬಂದು ಆಸ್ಪತ್ರೆಗೆ ಸೇರಿಸು ಎಂದು ಅಕ್ಕನಿಗೆ ಫೋನ್ ಮಾಡಿದ್ದಾನೆ. ಇದರಿಂದ ಗಾಬರಿಗೊಂಡ ಅಕ್ಕ ಮನೆಗೆ ಬಂದು ನೋಡಿದಾಗ ತಂದೆ ಮತ್ತು ಅಣ್ಣನ ಹೆಣ ಬಿದ್ದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೇತಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೊಲೆ ಮಾಡಿ ಮನೆಯಲ್ಲೇ ಮಲಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a shocking incident stemming from a property dispute, a man brutally murdered his father and elder brother in Ganguru village of Holenarasipura taluk, Hassan district.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm