ಬ್ರೇಕಿಂಗ್ ನ್ಯೂಸ್
10-07-25 12:04 pm HK News Desk ಕ್ರೈಂ
ಹಾಸನ, ಜು 10 : ಆಸ್ತಿ ವಿಚಾರಕ್ಕೆ ಮಗನೇ ತಂದೆ ಹಾಗೂ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.
ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರು. ಮೋಹನ್ (47) ಕೊಲೆಗೈದ ಆರೋಪಿ. ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು. ಮಂಜುನಾಥ್, ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದ.

ತಂದೆ ದೇವೇಗೌಡ, ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಾಟ ಮಾಡಿದ ಹಣ ನೀಡಿಲ್ಲ ಎಂದು ಮೋಹನ್ ಗಲಾಟೆ ಮಾಡಿದ್ದ. ಇದೇ ವಿಚಾರವಾಗಿ ಕೋಪಗೊಂಡಿದ್ದ ಮೋಹನ್, ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಮಲಗಿದ್ದ ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಈ ವೇಳೆ ತಂದೆ ದೇವೇಗೌಡ ಅವರು ಹಿರಿಯ ಮಗ ಮಂಜುನಾಥ್ ಮೇಲೆ ಹಲ್ಲೆಯಾಗುತ್ತಿರುವುದನ್ನು ತಡೆಯಲು ಬಂದಿದ್ದರು. ಈ ವೇಳೆ ಮೋಹನ್, ತಂದೆಯ ಮೇಲೆಯೂ ಮಚ್ಚಿನಿಂದ ಹಲ್ಲೆ ಮಾಡಿದ್ದ. ಮಗನನ್ನ ತಡೆಯಲು ಬಂದ ತಾಯಿ ಜಯಮ್ಮನ ಮೇಲೂ ಮೋಹನ್ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಜಯಮ್ಮ, ಮನೆಯಿಂದ ಹೊರಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡು, ರಾತ್ರಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು.
ತಂದೆ ಹಾಗೂ ಸಹೋದರ ಕೊಲೆ ಮಾಡಿ ಮನೆಯ ಮತ್ತೊಂದು ಭಾಗದಲ್ಲಿ ಮಲಗಿದ್ದ. ನನಗೆ ಏಟಾಗಿದೆ ಬಂದು ಆಸ್ಪತ್ರೆಗೆ ಸೇರಿಸು ಎಂದು ಅಕ್ಕನಿಗೆ ಫೋನ್ ಮಾಡಿದ್ದಾನೆ. ಇದರಿಂದ ಗಾಬರಿಗೊಂಡ ಅಕ್ಕ ಮನೆಗೆ ಬಂದು ನೋಡಿದಾಗ ತಂದೆ ಮತ್ತು ಅಣ್ಣನ ಹೆಣ ಬಿದ್ದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೇತಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೊಲೆ ಮಾಡಿ ಮನೆಯಲ್ಲೇ ಮಲಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a shocking incident stemming from a property dispute, a man brutally murdered his father and elder brother in Ganguru village of Holenarasipura taluk, Hassan district.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm