ಬ್ರೇಕಿಂಗ್ ನ್ಯೂಸ್
11-07-25 07:13 pm Mangalore Correspondent ಕ್ರೈಂ
ಮಂಗಳೂರು, ಜುಲೈ 11 : ಡ್ರಗ್ಸ್ ವಿರುದ್ಧ ನಿರಂತರ ಬೇಟೆಗಿಳಿದಿರುವ ಮಂಗಳೂರು ಪೊಲೀಸರು ಮತ್ತೊಬ್ಬ ಯುವಕನನ್ನು ಅರೆಸ್ಟ್ ಮಾಡಿದ್ದಾರೆ. ಈ ಹಿಂದೆ ಮಂಗಳೂರಿನಲ್ಲಿ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ಪ್ರಜ್ವಲ್ ಪೀಣ್ಯಾಸ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ.
ಪ್ರಜ್ವಲ್ ಮೂಲತಃ ಬೀದರ್ ಜಿಲ್ಲೆಯ ಮಂಗಲಪೇಟ್ ನಿವಾಸಿಯಾಗಿದ್ದು ಹಾಲಿ ಬೆಂಗಳೂರಿನ ಕೆಂಗೇರಿಯ ಕೋಡಿಪಾಳ್ಯದಲ್ಲಿ ನೆಲೆಸಿದ್ದ. ಜುಲೈ 2ರಂದು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಮಾದಕ ವಸ್ತು ಸೇವನೆ ಮಾಡುವವರಿಂದ ಹಿಡಿದು ಮಾರಾಟ ಮಾಡೋ ವರೆಗೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಹಂತ ಹಂತವಾಗಿ ಮಾದಕ ವಸ್ತುಗಳನ್ನು ಮಂಗಳೂರು ನಗರದಲ್ಲಿ ಪೂರೈಕೆ ಮಾಡುವ 09 ಜನರನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಪ್ರಕರಣದ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತುಗಳನ್ನು ಪಡೆದುಕೊಂಡು ಮಂಗಳೂರು ನಗರಕ್ಕೆ ಪೂರೈಕೆ ಮಾಡುತ್ತಿದ್ದವರ ಪೈಕಿ ಪ್ರಮುಖ ಆರೋಪಿತನಾಗಿ ಪ್ರಜ್ವಲ್ ಪಾತ್ರ ಪತ್ತೆಯಾಗಿದೆ.
ಆತನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ವಶಪಡಿಸಲಾಗಿದೆ. ಸದ್ರಿ ಪ್ರಕರಣದ ಆರೋಪಿ ಈ ಹಿಂದೆ ಮಂಗಳೂರು ನಗರದ ಫಾದರ್ ಮುಲ್ಲರ್ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದು, ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ ಮೂರು ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿವೆ.
Continuing their crackdown on drug-related activities, Mangaluru police have arrested another youth involved in the drug supply chain. The arrested individual has been identified as Prajwal Peñas, a former medical student in Mangaluru.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm