ಬ್ರೇಕಿಂಗ್ ನ್ಯೂಸ್
15-07-25 05:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 15 : ವ್ಯಕ್ತಿಯೊಬ್ಬರ ಬಗ್ಗೆ ಕೋಮು ದ್ವೇಷ ಮೂಡಿಸುವ ರೀತಿ ಬರಹಗಳನ್ನು ಬರೆದು ಹಿಂದು ಯುವತಿಯರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ವಾಟ್ಸಪ್ ನಲ್ಲಿ ಷೇರ್ ಮಾಡಿದ್ದು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸುರತ್ಕಲ್ ಹೊಸಬೆಟ್ಟುವಿನಲ್ಲಿ ಆರ್ ವಿ ಎಂಟರ್ ಪ್ರೈಸಸ್ ಎನ್ನುವ ಹೆಸರಿನಲ್ಲಿ ಉದ್ಯಮ ನಡೆಸುತ್ತಿರುವ ರಾಜೇಶ್ ಹೊನ್ನಕಟ್ಟೆ ಎಂಬವರ ಬಗ್ಗೆ ಹಿಂದುಗಳಲ್ಲಿ ಕೋಮು ಭಾವನೆ ಕೆರಳಿಸುವ ರೀತಿ ವಾಟ್ಸಪ್ ನಲ್ಲಿ ಬರಹಳಗಳನ್ನು ಬರೆದು ಷೇರ್ ಮಾಡಿದ್ದ ಬಗ್ಗೆ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ರಾಜೇಶ್ ಅವರು ಈವರೆಗೆ 20ಕ್ಕೂ ಹೆಚ್ಚು ಯುವತಿಯರನ್ನು ಮತಾಂತರ ಮಾಡಿದ್ದಾರೆ, ಅಲ್ಲದೆ, ಬ್ಲೂಫಿಲಂ ಸಿಡಿ ಮಾಡಿ ಮಾರಾಟ ಮಾಡುತ್ತಿದ್ದಾರೆ. 24 ವರ್ಷದ ಹಿಂದು ಯುವತಿಯನ್ನು ತನ್ನ ತಮ್ಮನಿಗೆ ಮದುವೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಆ ಹಿಂದು ಯುವತಿ ಹಣೆಗೆ ಕುಂಕುಮ ಹಾಕುವುದನ್ನು, ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿದ್ದು ಚರ್ಚ್ ನಲ್ಲಿ ಪ್ರಾರ್ಥನೆಗೆ ಹೋಗುತ್ತಿದ್ದಾಳೆ ಇತ್ಯಾದಿ ಸುಳ್ಳು ಆರೋಪಗಳನ್ನು ವಾಟ್ಸಪ್ ಗ್ರೂಪ್ ಗಳಲ್ಲಿ ಹರಿಯಬಿಟ್ಟಿದ್ದ.
ಪೊಲೀಸರು ತನಿಖೆ ನಡೆಸಿ ಕುಳಾಯಿ ನಿವಾಸಿ ರಾಮಪ್ರಸಾದ್ (42) ಎಂಬಾತನನ್ನು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ರೌಡಿ ಕೋಡಿಕೆರೆ ಲೋಕೇಶ್ ಕೂಡ ಭಾಗಿಯಾದ ಆರೋಪ ಹೊಂದಿದ್ದು, ಸದ್ಯಕ್ಕೆ ಬೇರೊಂದು ಪ್ರಕರಣದಲ್ಲಿ ಬಂಧಿತನಾಗಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿದ್ದಾನೆ. ಸದ್ರಿ ಪ್ರಕರಣ ಸಂಬಂಧಿಸಿ ಬಾಡಿ ವಾರೆಂಟ್ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Police have arrested a man for allegedly spreading communal hatred through WhatsApp messages by making false claims that a local businessman was involved in converting Hindu women to another religion. The case has been registered at the Surathkal Police Station.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am