ಬ್ರೇಕಿಂಗ್ ನ್ಯೂಸ್
15-07-25 05:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 15 : ವ್ಯಕ್ತಿಯೊಬ್ಬರ ಬಗ್ಗೆ ಕೋಮು ದ್ವೇಷ ಮೂಡಿಸುವ ರೀತಿ ಬರಹಗಳನ್ನು ಬರೆದು ಹಿಂದು ಯುವತಿಯರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ವಾಟ್ಸಪ್ ನಲ್ಲಿ ಷೇರ್ ಮಾಡಿದ್ದು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸುರತ್ಕಲ್ ಹೊಸಬೆಟ್ಟುವಿನಲ್ಲಿ ಆರ್ ವಿ ಎಂಟರ್ ಪ್ರೈಸಸ್ ಎನ್ನುವ ಹೆಸರಿನಲ್ಲಿ ಉದ್ಯಮ ನಡೆಸುತ್ತಿರುವ ರಾಜೇಶ್ ಹೊನ್ನಕಟ್ಟೆ ಎಂಬವರ ಬಗ್ಗೆ ಹಿಂದುಗಳಲ್ಲಿ ಕೋಮು ಭಾವನೆ ಕೆರಳಿಸುವ ರೀತಿ ವಾಟ್ಸಪ್ ನಲ್ಲಿ ಬರಹಳಗಳನ್ನು ಬರೆದು ಷೇರ್ ಮಾಡಿದ್ದ ಬಗ್ಗೆ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ರಾಜೇಶ್ ಅವರು ಈವರೆಗೆ 20ಕ್ಕೂ ಹೆಚ್ಚು ಯುವತಿಯರನ್ನು ಮತಾಂತರ ಮಾಡಿದ್ದಾರೆ, ಅಲ್ಲದೆ, ಬ್ಲೂಫಿಲಂ ಸಿಡಿ ಮಾಡಿ ಮಾರಾಟ ಮಾಡುತ್ತಿದ್ದಾರೆ. 24 ವರ್ಷದ ಹಿಂದು ಯುವತಿಯನ್ನು ತನ್ನ ತಮ್ಮನಿಗೆ ಮದುವೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಆ ಹಿಂದು ಯುವತಿ ಹಣೆಗೆ ಕುಂಕುಮ ಹಾಕುವುದನ್ನು, ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿದ್ದು ಚರ್ಚ್ ನಲ್ಲಿ ಪ್ರಾರ್ಥನೆಗೆ ಹೋಗುತ್ತಿದ್ದಾಳೆ ಇತ್ಯಾದಿ ಸುಳ್ಳು ಆರೋಪಗಳನ್ನು ವಾಟ್ಸಪ್ ಗ್ರೂಪ್ ಗಳಲ್ಲಿ ಹರಿಯಬಿಟ್ಟಿದ್ದ.
ಪೊಲೀಸರು ತನಿಖೆ ನಡೆಸಿ ಕುಳಾಯಿ ನಿವಾಸಿ ರಾಮಪ್ರಸಾದ್ (42) ಎಂಬಾತನನ್ನು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ರೌಡಿ ಕೋಡಿಕೆರೆ ಲೋಕೇಶ್ ಕೂಡ ಭಾಗಿಯಾದ ಆರೋಪ ಹೊಂದಿದ್ದು, ಸದ್ಯಕ್ಕೆ ಬೇರೊಂದು ಪ್ರಕರಣದಲ್ಲಿ ಬಂಧಿತನಾಗಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿದ್ದಾನೆ. ಸದ್ರಿ ಪ್ರಕರಣ ಸಂಬಂಧಿಸಿ ಬಾಡಿ ವಾರೆಂಟ್ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Police have arrested a man for allegedly spreading communal hatred through WhatsApp messages by making false claims that a local businessman was involved in converting Hindu women to another religion. The case has been registered at the Surathkal Police Station.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am