ಬ್ರೇಕಿಂಗ್ ನ್ಯೂಸ್
16-07-25 09:48 pm Mangaluru Correspondent ಕ್ರೈಂ
ಉಳ್ಳಾಲ, ಜು.16: ಒಂಟಿ ಮಹಿಳೆಯನ್ನ ಪ್ರಜ್ಞಾಹೀನಗೊಳಿಸಿ ಅತ್ಯಾಚಾರ ನಡೆಸಿ ಕೊಲೆಗೈದು ಮೃತದೇಹಕ್ಕೆ ಕಲ್ಲು ಕಟ್ಟಿ ಕೆರೆಗೆಸೆದು ಬಿಹಾರಕ್ಕೆ ಪರಾರಿಯಾಗಿದ್ದ ವಲಸೆ ಕಾರ್ಮಿಕನನ್ನ ಕೊಣಾಜೆ ಪೊಲೀಸರು ಕಡೆಗೂ ಬಂಧಿಸಿ ಕರೆತಂದಿದ್ದಾರೆ.
ಬಿಹಾರ ಮೂಲದ ವಲಸೆ ಕಾರ್ಮಿಕ ಫಿರೋಝ್ ಅಲಂ (26) ಬಂಧಿತ ಕೊಲೆ ಆರೋಪಿ. ಫಿರೋಝ್ ವಲಸೆ ಕಾರ್ಮಿಕನಾಗಿದ್ದು ಮೊಂಟೆಪದವು ಪ್ರದೇಶದಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದನೆನ್ನಲಾಗಿದೆ.
ಕಳೆದ ಮೇ 29 ರಂದು ಮೊಂಟೆಪದವಿನ ಗುದ್ರು ಕೆರೆಯಲ್ಲಿ ಸೊಂಟಕ್ಕೆ ಕಲ್ಲುಗಳನ್ನು ಕಟ್ಟಿದ್ದ ಸ್ಥಿತಿಯಲ್ಲಿ ಸಕಲೇಶಪುರ ಮೂಲದ ಸುಂದರಿ(36) ಎಂಬ ಅವಿವಾಹಿತ ಮಹಿಳೆಯ ಮೃತದೇಹವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಒಂದೂವರೆ ವರ್ಷಗಳಿಂದ ಮೊಂಟೆಪದವು ಪ್ರದೇಶದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಸುಂದರಿ ಅವರು ಜೀವನೋಪಾಯಕ್ಕಾಗಿ ಸ್ಥಳೀಯ ಮನೆಗಳಿಗೆ ತೆರಳಿ ಸ್ವಚ್ಚತಾ ಕೆಲಸ ನಿರ್ವಹಿಸುತ್ತಿದ್ದರು.
ಸುಂದರಿಯವರ ಬಾಡಿಗೆ ಮನೆಯಲ್ಲಿ ಮತ್ತೋರ್ವ ವಲಸೆ ಕಾರ್ಮಿಕ ವಾಸವಿದ್ದು ಹತ್ಯೆಯ ಕೆಲ ದಿನಗಳ ಹಿಂದಷ್ಟೆ ಆತ ಊರಿಗೆ ತೆರಳಿದ್ದನೆನ್ನಲಾಗಿದೆ. ಇದೇ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸುಂದರಿ ಅವರು ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಪಿರೋಝ್ ನುಗ್ಗಿ ಗಲಾಟೆ ನಡೆಸಿದ್ದು ಏಟು ತಗುಲಿ ಸುಂದರಿ ಪ್ರಜ್ನೆ ತಪ್ಪಿದ್ದರೆನ್ನಲಾಗಿದೆ. ಆಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸುಂದರಿಯನ್ನ ಅತ್ಯಾಚಾರಗೈದು ಬಳಿಕ ಕತ್ತು ಹಿಸುಕಿ ಕೊಲೆಗೈದು, ಮೃತದೇಹಕ್ಕೆ ಕಲ್ಲು ಕಟ್ಟಿ ಕೆರೆಗೆ ಎಸೆದಿರೋದಾಗಿ ಆರೋಪಿ ಫಿರೋಝ್ ಪೊಲೀಸರ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾನೆ.
In a chilling crime, a 26-year-old migrant worker from Bihar, who allegedly raped and murdered a 36-year-old unmarried woman, has been arrested by Konaje Police after he fled to Bihar following the crime. The accused, Firoz Alam, was employed as a construction laborer in the Montepadavu area near Mangaluru. According to police, he entered the woman’s house when she was alone, assaulted her, and rendered her unconscious. He then allegedly raped her while she was unconscious, strangled her to death, and later tied stones to her body and dumped it in a nearby lake to hide the crime.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 12:10 pm
HK News Staffer
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm