ಬ್ರೇಕಿಂಗ್ ನ್ಯೂಸ್
            
                        20-07-25 12:16 pm HK News Desk ಕ್ರೈಂ
            ಲಕ್ನೋ, ಜುಲೈ 19 : ಮತಾಂತರಕ್ಕೆ ವಿದೇಶಿ ಫಂಡಿಂಗ್, ಹಿಂದು ಯುವತಿಯರೇ ಟಾರ್ಗೆಟ್.. ಚಾಂಗೂರ್ ಬಾಬಾನ ಮತಾಂತರ ಜಾಲ ಪತ್ತೆ ಬೆನ್ನಲ್ಲೇ ಉತ್ತರ ಪ್ರದೇಶ ಪೊಲೀಸರು ಅಲರ್ಟ್ ಆಗಿದ್ದಾರೆ. ಮತ್ತಷ್ಟು ವಿದೇಶಿ ಹಣಕಾಸಿನ ನೆರವು ಮತ್ತು ಐಸಿಸ್ ಉಗ್ರರ ಶೈಲಿಯ ಮತಾಂತರ ದಂಧೆಯನ್ನು ಭೇದಿಸಿರುವ ಉತ್ತರ ಪ್ರದೇಶ ಪೊಲೀಸರು, ಆರು ರಾಜ್ಯಗಳಲ್ಲಿ ಹತ್ತು ಜನರನ್ನು ಬಂಧಿಸಿದ್ದಾರೆ.
ಶನಿವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕೃಷ್ಣ, ಮತಾಂತರ ದಂಧೆ ತಡೆಯುವ ನಿಟ್ಟಿನಲ್ಲಿ ಪೊಲೀಸರು 'ಮಿಷನ್ ಅಸ್ಮಿತಾ' ಕಾರ್ಯಾಚರಣೆ ಆರಂಭಿಸಿದ್ದಾರೆ. ಮತಾಂತರ ಸಿಂಡಿಕೇಟ್ ನ ಪ್ರಮುಖರಾದ ಮೊಹಮ್ಮದ್ ಉಮರ್ ಗೌತಮ್ ಮತ್ತು ಮುಫ್ತಿ ಜಹಾಂಗೀರ್ ಆಲಂ ಖಾಸ್ಮಿ ಅವರನ್ನು ಎಟಿಎಸ್ ಬಂಧಿಸಿದೆ ಎಂದು ತಿಳಿಸಿದ್ದಾರೆ.
ಜಮಾಲುದ್ದೀನ್ ಎಂದು ಕರೆಯಲ್ಪಡುವ ಛಾಂಗೂರ್ ಬಾಬಾ ನೇತೃತ್ವದ ಮತಾಂತರ ಜಾಲದ ಆರೋಪಿಗಳ ವಿಚಾರಣೆಯನ್ನು ಎಸ್ ಐಟಿ ಮತ್ತು ವಿಶೇಷ ಕಾರ್ಯಪಡೆ ನಡೆಸಿದ್ದು ಭಯಾನಕ ವಿಚಾರಗಳು ಪತ್ತೆಯಾಗಿವೆ. ಲವ್ ಜಿಹಾದ್, ಮತಾಂತರ ದಂಧೆ ನಡೆಸುವವರು, ತೀವ್ರವಾದಿಗಳು ಮತ್ತು ಜಾಗತಿಕ ಮಟ್ಟದಲ್ಲಿರುವ ಜಿಹಾದಿಗಳ ಜೊತೆಗೆ ಸೇರಿಕೊಂಡು ರಾಷ್ಟ್ರದ ಭದ್ರತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಈ ಸಂಬಂಧ ಆರು ರಾಜ್ಯಗಳಲ್ಲಿ 10 ಜನರನ್ನು ಬಂಧಿಸಲಾಗಿದೆ ಎಂದು ಡಿಜಿಪಿ ತಿಳಿಸಿದರು.
ಆರೋಪಿಗಳು ಯುವತಿಯರನ್ನು ಗುರಿಯಾಗಿಸಿದ್ದು, ಮತಾಂತರಕ್ಕೆ ಅನುಕೂಲವಾಗುವಂತೆ ಆಮಿಷವೊಡ್ಡುವುದು, ಲವ್ ಜಿಹಾದ್ ಮತ್ತಿತರ ವಿಧಾನಗಳ ಮೂಲಕ ಪ್ರಭಾವ ಬೀರಿದ್ದಾರೆ. ISIS ಶೈಲಿಯಲ್ಲಿ ಮತಾಂತರ ನಡೆಸಲಾಗುತ್ತಿದೆ. ಈ ಗುಂಪುಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಎಸ್ಡಿಪಿಐ ಮತ್ತು ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಸಾಧ್ಯತೆಗಳಿವೆ. ಈ ಮತಾಂತರ ಕಾರ್ಯಕ್ಕೆ "ಕೆನಡಾ, ಅಮೇರಿಕಾ, ಲಂಡನ್ ಮತ್ತು ದುಬೈಯಿಂದ ಹಣ ಸಂದಾಯವಾಗಿರುವುದು ಪತ್ತೆಯಾಗಿದೆ. ಮತ್ತಷ್ಟು ಮಂದಿ ಈ ಜಾಲದಲ್ಲಿ ತೊಡಗಿಸಿದ್ದು ಅವರನ್ನು ಬಂಧಿಸಲಾಗುವುದು ಎಂದು ಡಿಜಿಪಿ ಹೇಳಿದರು.
            
            
            The Uttar Pradesh Police on Saturday said they have busted a large-scale illegal religious conversion racket and arrested 10 people from six states. The probe began in Agra in March after two sisters -- aged 33 and 18 -- were reported missing. Investigations revealed that they were allegedly coerced into religious conversion and were undergoing radicalization, the police said.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm