ಬ್ರೇಕಿಂಗ್ ನ್ಯೂಸ್
24-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.24 : ಡಿವೈಎಫ್ಐ ಕಾರ್ಯಕರ್ತನನ್ನು ದುಷ್ಕರ್ಮಿಗಳ ತಂಡವೊಂದು ಇರಿದು ಕೊಲೆಗೈದ ಘಟನೆ ಬುಧವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಮೃತರನ್ನು ಅಬ್ದುಲ್ ರಹ್ಮಾನ್ (29) ಎಂದು ಗುರುತಿಸಲಾಗಿದೆ. ಕಲ್ಲೂರಾವಿ ನಿವಾಸಿಯಾಗಿದ್ದ ರಹ್ಮಾನ್ ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ತೆರಳುತ್ತಿದ್ದಾಗ ಕಲ್ಲೂರಾವಿ-ಹಳೆ ಕಡಪ್ಪುರ ರಸ್ತೆಯಲ್ಲಿ ತಂಡ ಈ ಕೃತ್ಯ ನಡೆಸಿದೆ.
ಬೈಕನ್ನು ತಡೆದ ತಂಡವು ರಹ್ಮಾನ್ ಅವರಿಗೆ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಹ್ಮಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನ ಆಗಲಿಲ್ಲ. ರಹ್ಮಾನ್ ಜೊತೆಗಿದ್ದ ಶುಹೈಬ್ ಎಂಬವರು ಗಾಯಗೊಂಡಿದ್ದಾರೆ ಎಂದು ದೂರಲಾಗಿದೆ.

ಕೃತ್ಯದ ಸಂದರ್ಭ ಇನ್ನೋರ್ವ ಆರೋಪಿಗೂ ಗಾಯವಾಗಿದ್ದು, ಇರ್ಷಾದ್ ( 26) ಎಂಬಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಹಿಂದೆ ಮುಸ್ಲಿಂ ಲೀಗ್ ಕಾರ್ಯಕರ್ತರ ಕೈವಾಡ ಇದೆ ಎಂದು ಡಿವೈಎಫ್ಐ ಆರೋಪಿಸಿದೆ.
ಕೃತ್ಯ ಖಂಡಿಸಿ ಕಾಞಂಗಾಡ್ ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಹರತಾಳಕ್ಕೆ ಡಿವೈಎಫ್ಐ ಕರೆ ನೀಡಿದೆ. ರಾಜಕೀಯ ದ್ವೇಷ ಕೃತ್ಯ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ವಿಜಯೋತ್ಸವ ಸಂದರ್ಭ ಡಿವೈಎಫ್ಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದಕ್ಕೆ ಪ್ರತಿಕಾರ ಎಂಬಂತೆ ಈ ಕೃತ್ಯ ನಡೆದಿರಬಹುದು ಎಂದು ಸಂಶಯಿಸಲಾಗಿದೆ. ಕೃತ್ಯದಲ್ಲಿ ಆರು ಮಂದಿ ಶಾಮೀಲಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ.
An activist of DYFI was stabbed to death at Kanhangad in the district on the night of Wednesday December 23. The deceased is identified as Abdul Rahman (29).
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm