ಬ್ರೇಕಿಂಗ್ ನ್ಯೂಸ್
24-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.24 : ಡಿವೈಎಫ್ಐ ಕಾರ್ಯಕರ್ತನನ್ನು ದುಷ್ಕರ್ಮಿಗಳ ತಂಡವೊಂದು ಇರಿದು ಕೊಲೆಗೈದ ಘಟನೆ ಬುಧವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಮೃತರನ್ನು ಅಬ್ದುಲ್ ರಹ್ಮಾನ್ (29) ಎಂದು ಗುರುತಿಸಲಾಗಿದೆ. ಕಲ್ಲೂರಾವಿ ನಿವಾಸಿಯಾಗಿದ್ದ ರಹ್ಮಾನ್ ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ತೆರಳುತ್ತಿದ್ದಾಗ ಕಲ್ಲೂರಾವಿ-ಹಳೆ ಕಡಪ್ಪುರ ರಸ್ತೆಯಲ್ಲಿ ತಂಡ ಈ ಕೃತ್ಯ ನಡೆಸಿದೆ.
ಬೈಕನ್ನು ತಡೆದ ತಂಡವು ರಹ್ಮಾನ್ ಅವರಿಗೆ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಹ್ಮಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನ ಆಗಲಿಲ್ಲ. ರಹ್ಮಾನ್ ಜೊತೆಗಿದ್ದ ಶುಹೈಬ್ ಎಂಬವರು ಗಾಯಗೊಂಡಿದ್ದಾರೆ ಎಂದು ದೂರಲಾಗಿದೆ.

ಕೃತ್ಯದ ಸಂದರ್ಭ ಇನ್ನೋರ್ವ ಆರೋಪಿಗೂ ಗಾಯವಾಗಿದ್ದು, ಇರ್ಷಾದ್ ( 26) ಎಂಬಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಹಿಂದೆ ಮುಸ್ಲಿಂ ಲೀಗ್ ಕಾರ್ಯಕರ್ತರ ಕೈವಾಡ ಇದೆ ಎಂದು ಡಿವೈಎಫ್ಐ ಆರೋಪಿಸಿದೆ.
ಕೃತ್ಯ ಖಂಡಿಸಿ ಕಾಞಂಗಾಡ್ ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಹರತಾಳಕ್ಕೆ ಡಿವೈಎಫ್ಐ ಕರೆ ನೀಡಿದೆ. ರಾಜಕೀಯ ದ್ವೇಷ ಕೃತ್ಯ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ವಿಜಯೋತ್ಸವ ಸಂದರ್ಭ ಡಿವೈಎಫ್ಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದಕ್ಕೆ ಪ್ರತಿಕಾರ ಎಂಬಂತೆ ಈ ಕೃತ್ಯ ನಡೆದಿರಬಹುದು ಎಂದು ಸಂಶಯಿಸಲಾಗಿದೆ. ಕೃತ್ಯದಲ್ಲಿ ಆರು ಮಂದಿ ಶಾಮೀಲಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ.
An activist of DYFI was stabbed to death at Kanhangad in the district on the night of Wednesday December 23. The deceased is identified as Abdul Rahman (29).
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm