ಬ್ರೇಕಿಂಗ್ ನ್ಯೂಸ್
24-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.24 : ಡಿವೈಎಫ್ಐ ಕಾರ್ಯಕರ್ತನನ್ನು ದುಷ್ಕರ್ಮಿಗಳ ತಂಡವೊಂದು ಇರಿದು ಕೊಲೆಗೈದ ಘಟನೆ ಬುಧವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಮೃತರನ್ನು ಅಬ್ದುಲ್ ರಹ್ಮಾನ್ (29) ಎಂದು ಗುರುತಿಸಲಾಗಿದೆ. ಕಲ್ಲೂರಾವಿ ನಿವಾಸಿಯಾಗಿದ್ದ ರಹ್ಮಾನ್ ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ತೆರಳುತ್ತಿದ್ದಾಗ ಕಲ್ಲೂರಾವಿ-ಹಳೆ ಕಡಪ್ಪುರ ರಸ್ತೆಯಲ್ಲಿ ತಂಡ ಈ ಕೃತ್ಯ ನಡೆಸಿದೆ.
ಬೈಕನ್ನು ತಡೆದ ತಂಡವು ರಹ್ಮಾನ್ ಅವರಿಗೆ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಹ್ಮಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನ ಆಗಲಿಲ್ಲ. ರಹ್ಮಾನ್ ಜೊತೆಗಿದ್ದ ಶುಹೈಬ್ ಎಂಬವರು ಗಾಯಗೊಂಡಿದ್ದಾರೆ ಎಂದು ದೂರಲಾಗಿದೆ.

ಕೃತ್ಯದ ಸಂದರ್ಭ ಇನ್ನೋರ್ವ ಆರೋಪಿಗೂ ಗಾಯವಾಗಿದ್ದು, ಇರ್ಷಾದ್ ( 26) ಎಂಬಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಹಿಂದೆ ಮುಸ್ಲಿಂ ಲೀಗ್ ಕಾರ್ಯಕರ್ತರ ಕೈವಾಡ ಇದೆ ಎಂದು ಡಿವೈಎಫ್ಐ ಆರೋಪಿಸಿದೆ.
ಕೃತ್ಯ ಖಂಡಿಸಿ ಕಾಞಂಗಾಡ್ ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಹರತಾಳಕ್ಕೆ ಡಿವೈಎಫ್ಐ ಕರೆ ನೀಡಿದೆ. ರಾಜಕೀಯ ದ್ವೇಷ ಕೃತ್ಯ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ವಿಜಯೋತ್ಸವ ಸಂದರ್ಭ ಡಿವೈಎಫ್ಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದಕ್ಕೆ ಪ್ರತಿಕಾರ ಎಂಬಂತೆ ಈ ಕೃತ್ಯ ನಡೆದಿರಬಹುದು ಎಂದು ಸಂಶಯಿಸಲಾಗಿದೆ. ಕೃತ್ಯದಲ್ಲಿ ಆರು ಮಂದಿ ಶಾಮೀಲಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ.
An activist of DYFI was stabbed to death at Kanhangad in the district on the night of Wednesday December 23. The deceased is identified as Abdul Rahman (29).
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am