ಬ್ರೇಕಿಂಗ್ ನ್ಯೂಸ್
23-07-25 04:49 pm Udupi Correspondent ಕ್ರೈಂ
ಉಡುಪಿ, ಜುಲೈ 23 : ಹೈದರಾಬಾದ್ನಲ್ಲಿ ಉಚ್ಚಿಲ ಮೂಲದ ಮಹಿಳೆಯೊಂದಿಗೆ ಎರಡು ವರ್ಷ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದ ವ್ಯಕ್ತಿಯೊಬ್ಬ ಮಂಗಳವಾರ ಪಡುಬಿದ್ರಿ ಠಾಣೆ ವ್ಯಾಪ್ತಿಯ ಉಚ್ಚಿಲದ ಆಕೆಯ ಮನೆಗೆ ನುಗ್ಗಿ ಕುತ್ತಿಗೆ ಹಿಸುಕಿ ಕೊಲೆಗೈಯಲು ಯತ್ನಿಸಿದ ಘಟನೆ ನಡೆದಿದೆ. ಅಷ್ಟರಲ್ಲಿ ಮಹಿಳೆಯ ಗಂಡ ಮತ್ತು ಸ್ಥಳೀಯರು ಸೇರಿದ್ದರಿಂದ ಆರೋಪಿ ಪರಾರಿಯಾಗಿದ್ದಾನೆ.
ವಿಷಯ ತಿಳಿಯುತ್ತಲೇ ಕಾರ್ಯಾಚರಣೆ ನಡೆಸಿದ ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್ಐ ಶಕ್ತಿವೇಲು ಮತ್ತು ಸಿಬಂದಿ ಆರೋಪಿ ಹೈದರಾಬಾದ್ ಮೂಲದ ವಿಶ್ವನಾಥ ನಾಯ್ಡು ಎಂಬಾತನನ್ನು ಉಚ್ಚಿಲದಲ್ಲೇ ಬಂಧಿಸಿದ್ದಾರೆ. ಪಡುಬಿದ್ರಿ ಮೂಲದ ಮಹಿಳೆ ಈ ಹಿಂದೆ ಹೈದರಾಬಾದ್ನ ವ್ಯಕ್ತಿಯ ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದು ಈ ವೇಳೆ ಪತಿಯನ್ನು ಬಿಟ್ಟು ತನ್ನನ್ನು ಮದುವೆಯಾಗುವಂತೆ ವಿಶ್ವನಾಥ ನಾಯ್ಡು ಒತ್ತಾಯಿಸಿದ್ದ.
ಮಹಿಳೆಯನ್ನು ಪ್ರೀತಿಸುವುದಾಗಿ ಹೇಳಿ ಪತಿಗೆ ವಿಚ್ಚೇದನ ನೀಡುವಂತೆ ಮತ್ತು ತನ್ನನ್ನು ಮದುವೆಯಾಗಿ ಜೊತೆಗೆ ಇರುವಂತೆ ಪೀಡಿಸುತ್ತಿದ್ದ. ಮಹಿಳೆ ಇದಕ್ಕೆ ವಿರೋಧಿಸಿದಾಗ ನಿನ್ನನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದ. ಇದರಿಂದ ಹೆದರಿದ್ದ ಮಹಿಳೆ ತನ್ನ ಗಂಡನೊಂದಿಗೆ ಉಡುಪಿ ಜಿಲ್ಲೆಯ ಉಚ್ಚಿಲಕ್ಕೆ ಬಂದು ನೆಲೆಸಿದ್ದರು. 2 ತಿಂಗಳ ಬಳಿಕ ಆತ ಹುಡುಕುತ್ತ ಬಂದಿದ್ದು ಮನೆಗೆ ನುಗ್ಗಿ ಮಹಿಳೆಯನ್ನು ಮದುವೆಯಾಗದಿದ್ದರೆ ಸಾಯಿಸುತ್ತೇನೆ ಎಂದು ಹೇಳಿ ಹಲ್ಲೆಗೆ ಯತ್ನಿಸಿದ್ದಾನೆ. ಪಡುಬಿದ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ.
A shocking incident unfolded on Tuesday in Ucchila, Padubidri, where a Hyderabad-based realtor allegedly attempted to strangle a woman with whom he had a past personal and professional relationship. The woman, originally from Ucchila, had recently returned to her hometown with her husband, refusing to continue ties with the accused.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
24-03-26 12:10 pm
HK News Staffer
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm