ಬ್ರೇಕಿಂಗ್ ನ್ಯೂಸ್
26-07-25 09:35 pm HK News Desk ಕ್ರೈಂ
ಬೆಳಗಾವಿ, ಜುಲೈ 26 : ಸೈಬರ್ ವಂಚಕರ ಜಾಲದ ಖದೀಮರಿಗಾಗಿ ನಕಲಿ ದಾಖಲೆಗಳನ್ನು ಮುಂದಿಟ್ಟು ಬ್ಯಾಂಕ್ ಖಾತೆಗಳನ್ನು ಮಾಡಿಕೊಡುತ್ತಿದ್ದ ಮೂವರು ಆರೋಪಿಗಳನ್ನು ಚೆನ್ನೈ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.
ಬೆಳಗಾವಿ ನಗರದ ಆರ್ಪಿಡಿ ಕ್ರಾಸ್ನ ಬಿಬಿಎ ಪದವೀಧರ ಸರ್ವೇಶ ಕಿಣಿ, ಕುವೆಂಪು ನಗರದ ಅನಿಲ್ ಕೊಲ್ಲಾಪುರ, ಗಣೇಶಪುರದ ರೋಹನ್ ಕಾಂಬಳೆ ಬಂಧಿತರು. ಕರ್ನಾಟಕದಲ್ಲಿ ಮೂರು ಸೇರಿ ಈ ಮೂವರ ವಿರುದ್ಧ ದೇಶದ ವಿವಿಧ ಠಾಣೆಗಳಲ್ಲಿ 27 ಕೇಸ್ ದಾಖಲಾಗಿದೆ. ಕಮಿಷನ್ ಆಸೆ ಹುಟ್ಟಿಸಿ ಬ್ಯಾಂಕ್ ನಲ್ಲಿ ಕರೆಂಟ್ ಅಕೌಂಟ್ ತೆರೆದು ಕೊಡುವಂತೆ ಇಬ್ಬರಿಗೂ ಸರ್ವೇಶ್ ಪ್ರಚೋದನೆ ಮಾಡುತ್ತಿದ್ದ.



ಕಂಪನಿಗಳ ಹೆಸರಿನಲ್ಲಿ ಬ್ಯಾಂಕ್ಗೆ ನಕಲಿ ದಾಖಲೆ ಕೊಟ್ಟು ಕರೆಂಟ್ ಅಕೌಂಟ್ ತೆರೆಯುತ್ತಿದ್ದ ರೋಹನ್ ಮತ್ತು ಅನಿಲ್ ಅವುಗಳನ್ನು ಸರ್ವೇಶ್ ಮೂಲಕ ಸೈಬರ್ ವಂಚಕರಿಗೆ ಪೂರೈಸುತ್ತಿದ್ದರು. ಈ ಬ್ಯಾಂಕ್ ಖಾತೆಗಳ ಪಾಸ್ ಬುಕ್, ಅಕೌಂಟ್ ನಂಬರ್, ಎಟಿಎಂ ಕಾರ್ಡ್ ಗಳನ್ನು ಸರ್ವೇಶ್ ಗೆ ನೀಡಿದ್ದರು. ಇವರು ಮಾಡಿಕೊಡುತ್ತಿದ್ದ ಬ್ಯಾಂಕ್ ಅಕೌಂಟ್ ಗಳನ್ನು ಸರ್ವೇಶ್ ಸೈಬರ್ ವಂಚಕರಿಗೆ ನೀಡಿದ್ದ.
ಸೈಬರ್ ವಂಚಕರು ಅಮಾಯಕರ ಖಾತೆಗಳನ್ನು ಹ್ಯಾಕ್ ಮಾಡಿ, ಅದರಲ್ಲಿರುವ ಹಣವನ್ನು ಇವರು ಕೊಡುತ್ತಿದ್ದ ಅಕೌಂಟ್ಗೆ ವರ್ಗಾಯಿಸಿಕೊಳ್ತಿದ್ದರು. ಬಳಿಕ ಈ ಹಣವನ್ನು ಬೇರೆ ಬೇರೆ ಅಕೌಂಟ್ಗೆ ವರ್ಗಾವಣೆ ಮಾಡುತ್ತಿದ್ದುದು, ಹಣವನ್ನು ವಿತ್ ಡ್ರಾ ಮಾಡುತ್ತಿದ್ದುದು ತನಿಖೆಯಲ್ಲಿ ಪತ್ತೆಯಾಗಿದೆ. ಇವರ ಖಾತೆಯಲ್ಲಿ ಒಂದು ಕೋಟಿ ಹಣ ವರ್ಗಾವಣೆಯಾದಲ್ಲಿ 60 ಸಾವಿರ ಕಮಿಷನ್ ನೀಡುವುದಾಗಿ ಅನಿಲ್ ಮತ್ತು ರೋಹನ್ಗೆ ಆಮಿಷ ಒಡ್ಡಲಾಗಿತ್ತು. 10 ಕೋಟಿಗೂ ಅಧಿಕ ಹಣ ಬೆಳಗಾವಿಯಲ್ಲಿದ್ದ ವಂಚಕರ ಖಾತೆಗೆ ಬಂದಿರುವ ಶಂಕೆಯಿದ್ದು ಮೂವರನ್ನೂ ಪೊಲೀಸರು ಬಂಧಿಸಿ ಚೆನ್ನೈಗೆ ಕರೆದೊಯ್ದಿದ್ದಾರೆ.
Three individuals have been arrested by Chennai police in Belagavi for providing fake bank accounts to cyber fraudsters. The accused allegedly facilitated fraudulent transactions running into crores by supplying fake documents to open bank accounts on behalf of cybercriminals.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm