ಬ್ರೇಕಿಂಗ್ ನ್ಯೂಸ್
            
                        26-07-25 09:35 pm HK News Desk ಕ್ರೈಂ
            ಬೆಳಗಾವಿ, ಜುಲೈ 26 : ಸೈಬರ್ ವಂಚಕರ ಜಾಲದ ಖದೀಮರಿಗಾಗಿ ನಕಲಿ ದಾಖಲೆಗಳನ್ನು ಮುಂದಿಟ್ಟು ಬ್ಯಾಂಕ್ ಖಾತೆಗಳನ್ನು ಮಾಡಿಕೊಡುತ್ತಿದ್ದ ಮೂವರು ಆರೋಪಿಗಳನ್ನು ಚೆನ್ನೈ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. 
ಬೆಳಗಾವಿ ನಗರದ ಆರ್ಪಿಡಿ ಕ್ರಾಸ್ನ ಬಿಬಿಎ ಪದವೀಧರ ಸರ್ವೇಶ ಕಿಣಿ, ಕುವೆಂಪು ನಗರದ ಅನಿಲ್ ಕೊಲ್ಲಾಪುರ, ಗಣೇಶಪುರದ ರೋಹನ್ ಕಾಂಬಳೆ ಬಂಧಿತರು. ಕರ್ನಾಟಕದಲ್ಲಿ ಮೂರು ಸೇರಿ ಈ ಮೂವರ ವಿರುದ್ಧ ದೇಶದ ವಿವಿಧ ಠಾಣೆಗಳಲ್ಲಿ 27 ಕೇಸ್ ದಾಖಲಾಗಿದೆ. ಕಮಿಷನ್ ಆಸೆ ಹುಟ್ಟಿಸಿ ಬ್ಯಾಂಕ್ ನಲ್ಲಿ ಕರೆಂಟ್ ಅಕೌಂಟ್ ತೆರೆದು ಕೊಡುವಂತೆ ಇಬ್ಬರಿಗೂ ಸರ್ವೇಶ್ ಪ್ರಚೋದನೆ ಮಾಡುತ್ತಿದ್ದ.



ಕಂಪನಿಗಳ ಹೆಸರಿನಲ್ಲಿ ಬ್ಯಾಂಕ್ಗೆ ನಕಲಿ ದಾಖಲೆ ಕೊಟ್ಟು ಕರೆಂಟ್ ಅಕೌಂಟ್ ತೆರೆಯುತ್ತಿದ್ದ ರೋಹನ್ ಮತ್ತು ಅನಿಲ್ ಅವುಗಳನ್ನು ಸರ್ವೇಶ್ ಮೂಲಕ ಸೈಬರ್ ವಂಚಕರಿಗೆ ಪೂರೈಸುತ್ತಿದ್ದರು. ಈ ಬ್ಯಾಂಕ್ ಖಾತೆಗಳ ಪಾಸ್ ಬುಕ್, ಅಕೌಂಟ್ ನಂಬರ್, ಎಟಿಎಂ ಕಾರ್ಡ್ ಗಳನ್ನು ಸರ್ವೇಶ್ ಗೆ ನೀಡಿದ್ದರು. ಇವರು ಮಾಡಿಕೊಡುತ್ತಿದ್ದ ಬ್ಯಾಂಕ್ ಅಕೌಂಟ್ ಗಳನ್ನು ಸರ್ವೇಶ್ ಸೈಬರ್ ವಂಚಕರಿಗೆ ನೀಡಿದ್ದ.
ಸೈಬರ್ ವಂಚಕರು ಅಮಾಯಕರ ಖಾತೆಗಳನ್ನು ಹ್ಯಾಕ್ ಮಾಡಿ, ಅದರಲ್ಲಿರುವ ಹಣವನ್ನು ಇವರು ಕೊಡುತ್ತಿದ್ದ ಅಕೌಂಟ್ಗೆ ವರ್ಗಾಯಿಸಿಕೊಳ್ತಿದ್ದರು. ಬಳಿಕ ಈ ಹಣವನ್ನು ಬೇರೆ ಬೇರೆ ಅಕೌಂಟ್ಗೆ ವರ್ಗಾವಣೆ ಮಾಡುತ್ತಿದ್ದುದು, ಹಣವನ್ನು ವಿತ್ ಡ್ರಾ ಮಾಡುತ್ತಿದ್ದುದು ತನಿಖೆಯಲ್ಲಿ ಪತ್ತೆಯಾಗಿದೆ. ಇವರ ಖಾತೆಯಲ್ಲಿ ಒಂದು ಕೋಟಿ ಹಣ ವರ್ಗಾವಣೆಯಾದಲ್ಲಿ 60 ಸಾವಿರ ಕಮಿಷನ್ ನೀಡುವುದಾಗಿ ಅನಿಲ್ ಮತ್ತು ರೋಹನ್ಗೆ ಆಮಿಷ ಒಡ್ಡಲಾಗಿತ್ತು. 10 ಕೋಟಿಗೂ ಅಧಿಕ ಹಣ ಬೆಳಗಾವಿಯಲ್ಲಿದ್ದ ವಂಚಕರ ಖಾತೆಗೆ ಬಂದಿರುವ ಶಂಕೆಯಿದ್ದು ಮೂವರನ್ನೂ ಪೊಲೀಸರು ಬಂಧಿಸಿ ಚೆನ್ನೈಗೆ ಕರೆದೊಯ್ದಿದ್ದಾರೆ.
            
            
            Three individuals have been arrested by Chennai police in Belagavi for providing fake bank accounts to cyber fraudsters. The accused allegedly facilitated fraudulent transactions running into crores by supplying fake documents to open bank accounts on behalf of cybercriminals.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm