ಬ್ರೇಕಿಂಗ್ ನ್ಯೂಸ್
27-07-25 03:26 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.27: ಕೌಟುಂಬಿಕ ವಿಚಾರಕ್ಕೆ ಚಿಕ್ಕಪ್ಪನೇ ತನ್ನ ಸಹೋದರನ ಇಬ್ಬರು ಪುತ್ರರನ್ನು ಭೀಕರವಾಗಿ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ.
ಕಮ್ಮಸಂದ್ರ ನಿವಾಸಿಗಳಾದ ಮೊಹಮ್ಮದ್ ಇಶಾಕ್ (9), ಮೊಹಮ್ಮದ್ ಜುನೈದ್(6) ಮೃತಪ್ಪಟಿದ್ದು, ರೋಹನ್ (4) ಮಗು ಗಾಯಗೊಂಡಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೃತ್ಯ ಎಸಗಿದ ಖಾಸೀಂ (35) ಎಂಬಾತನನ್ನು ಬಂಧಿಸಲಾಗಿದೆ.
ಯಾದಗಿರಿ ಜಿಲ್ಲೆ ಮೂಲದ ಚಾಂದ್ಪಾಷಾ ತನ್ನ ಪತ್ನಿ ರೈನಾ ಮತ್ತು ಮೂವರು ಮಕ್ಕಳು ಹಾಗೂ ತಾಯಿ, ತಮ್ಮನ ಜತೆ ಕಮ್ಮಸಂದ್ರದಲ್ಲಿ ವಾಸವಾಗಿದ್ದ. ಚಾಂದ್ಪಾಷಾ ಗಾರೆ ಕೆಲಸ ಮಾಡಿಕೊಂಡಿದ್ದು, ಪತ್ನಿ ರೈನಾ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡಿಕೊಂಡಿದ್ಲು. ಈ ಮಧ್ಯೆ ಕುಡಿತ ಚಟಕ್ಕೆ ಬಿದಿದ್ದ ತಮ್ಮ ಖಾಸೀಂ ಸರಿಯಾಗಿ ಊಟ ಹಾಕುವುದಿಲ್ಲ ಎಂದು ಚಾಂದ್ಪಾಷಾ ಮತ್ತು ಅತ್ತಿಗೆ ರೈನಾಳನ್ನ ನಿಂದಿಸುತ್ತಿದ್ದ. ಇದೇ ವಿಚಾರಕ್ಕೆ ಮನೆಯಲ್ಲಿ ಆಗಾಗ್ಗೆ ಜಗಳ ನಡೆಯುತ್ತಿತ್ತು. ಶನಿವಾರ ಚಾಂದ್ಪಾಷಾ ದಂಪತಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಆರೋಪಿ ಮನೆಯಲ್ಲಿದ್ದ ಮೂವರು ಮಕ್ಕಳಿಗೆ ಕಬ್ಬಿಣದ ರಾಡ್ ಹಾಗೂ ಸುತ್ತಿಗೆಯಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ. ಕೂಗಾಟ ಹೊರಗಡೆ ಕೇಳಬಾರದು ಎಂದು ಮಕ್ಕಳ ಬಾಯಿಗೆ ಬಟ್ಟೆ ತುರುಕಿ ಕ್ರೌರ್ಯ ಮೆರೆದು ಪರಾರಿಯಾಗಿದ್ದ.
ಕೆಲ ಹೊತ್ತಿನ ಬಳಿಕ ಸ್ಥಳೀಯರು ಗಮನಿಸಿ ಚಾಂದ್ಪಾಷಾ ದಂಪತಿಗೆ ತಿಳಿಸಿದ್ದಾರೆ. ಬಳಿಕ ಸ್ಥಳೀಯರೇ ಮನೆಯ ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಮತ್ತೂಬ್ಬ ಬಾಲಕ ತೀವ್ರವಾಗಿ ಗಾಯಗೊಂಡಿದ್ದ. ಕೂಡಲೇ ಮೂವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ರೋಹನ್ನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಖಾಸೀಂನನ್ನು ಮಾನಸಿಕ ಅಸ್ವಸ್ಥ ಎನ್ನಲಾಗಿದ್ದು ಕಳೆದ ತಿಂಗಳು ಕಾಣೆಯಾಗಿದ್ದ. ತಮ್ಮನನ್ನು ಅಣ್ಣ ಚಾಂದ್ ಪಾಷಾ ಹುಡುಕಿ ಕರೆತಂದಿದ್ದ. ಘಟನಾ ಸ್ಥಳಕ್ಕೆ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿ ಎಂ.ನಾರಾಯಣ್, ಎಸಿಪಿ ಸತೀಶ್, ಇನ್ಸ್ಪೆಕ್ಟರ್ ಸೋಮಶೇಖರ್ ಭೇಟಿ ನೀಡಿ ಪರಿಶೀಲಿಸಿದರು.
ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಕ್ಕಳ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದಾನೆ. ಮಕ್ಕಳ ಬಾಯಿಗೆ ಬಟ್ಟೆ ತುರುಕಿ ಕಬ್ಬಿಣದ ರಾಡ್ನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ಘಟನೆಗೆ ಕಾರಣ ತಿಳಿಯುತ್ತಿಲ್ಲ ಎಂದು ಚಾಂದ್ ಪಾಷ, ಮೃತ ಮಕ್ಕಳ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ತನ್ನದಲ್ಲದ ತಪ್ಪಿಗೆ ಅಮಾಯಕ ಮಕ್ಕಳು ಅತ್ಯಂತ ಭೀಕರವಾಗಿ ಕೊಲೆಯಾಗಿದ್ದಾರೆ. ಕೊಲೆ ಮಾಡಿರುವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಮೇಲ್ನೋಟಕ್ಕೆ ಮಾನಸಿಕ ಅಸ್ವಸ್ಥ ಎನ್ನುತ್ತಿದ್ದು, ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮಾಡಲಾಗುತ್ತಿದೆ.
In a gruesome case of domestic violence, a man brutally attacked and killed his two young nephews and seriously injured a third in the Kammasandra area under Hebbagodi Police Station limits. The horrific incident has sent shockwaves across the locality.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm