ಬ್ರೇಕಿಂಗ್ ನ್ಯೂಸ್
            
                        27-07-25 03:26 pm Bangalore Correspondent ಕ್ರೈಂ
            ಬೆಂಗಳೂರು, ಜುಲೈ.27: ಕೌಟುಂಬಿಕ ವಿಚಾರಕ್ಕೆ ಚಿಕ್ಕಪ್ಪನೇ ತನ್ನ ಸಹೋದರನ ಇಬ್ಬರು ಪುತ್ರರನ್ನು ಭೀಕರವಾಗಿ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ.
ಕಮ್ಮಸಂದ್ರ ನಿವಾಸಿಗಳಾದ ಮೊಹಮ್ಮದ್ ಇಶಾಕ್ (9), ಮೊಹಮ್ಮದ್ ಜುನೈದ್(6) ಮೃತಪ್ಪಟಿದ್ದು, ರೋಹನ್ (4) ಮಗು ಗಾಯಗೊಂಡಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೃತ್ಯ ಎಸಗಿದ ಖಾಸೀಂ (35) ಎಂಬಾತನನ್ನು ಬಂಧಿಸಲಾಗಿದೆ.
ಯಾದಗಿರಿ ಜಿಲ್ಲೆ ಮೂಲದ ಚಾಂದ್ಪಾಷಾ ತನ್ನ ಪತ್ನಿ ರೈನಾ ಮತ್ತು ಮೂವರು ಮಕ್ಕಳು ಹಾಗೂ ತಾಯಿ, ತಮ್ಮನ ಜತೆ ಕಮ್ಮಸಂದ್ರದಲ್ಲಿ ವಾಸವಾಗಿದ್ದ. ಚಾಂದ್ಪಾಷಾ ಗಾರೆ ಕೆಲಸ ಮಾಡಿಕೊಂಡಿದ್ದು, ಪತ್ನಿ ರೈನಾ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡಿಕೊಂಡಿದ್ಲು. ಈ ಮಧ್ಯೆ ಕುಡಿತ ಚಟಕ್ಕೆ ಬಿದಿದ್ದ ತಮ್ಮ ಖಾಸೀಂ ಸರಿಯಾಗಿ ಊಟ ಹಾಕುವುದಿಲ್ಲ ಎಂದು ಚಾಂದ್ಪಾಷಾ ಮತ್ತು ಅತ್ತಿಗೆ ರೈನಾಳನ್ನ ನಿಂದಿಸುತ್ತಿದ್ದ. ಇದೇ ವಿಚಾರಕ್ಕೆ ಮನೆಯಲ್ಲಿ ಆಗಾಗ್ಗೆ ಜಗಳ ನಡೆಯುತ್ತಿತ್ತು. ಶನಿವಾರ ಚಾಂದ್ಪಾಷಾ ದಂಪತಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಆರೋಪಿ ಮನೆಯಲ್ಲಿದ್ದ ಮೂವರು ಮಕ್ಕಳಿಗೆ ಕಬ್ಬಿಣದ ರಾಡ್ ಹಾಗೂ ಸುತ್ತಿಗೆಯಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ. ಕೂಗಾಟ ಹೊರಗಡೆ ಕೇಳಬಾರದು ಎಂದು ಮಕ್ಕಳ ಬಾಯಿಗೆ ಬಟ್ಟೆ ತುರುಕಿ ಕ್ರೌರ್ಯ ಮೆರೆದು ಪರಾರಿಯಾಗಿದ್ದ.
ಕೆಲ ಹೊತ್ತಿನ ಬಳಿಕ ಸ್ಥಳೀಯರು ಗಮನಿಸಿ ಚಾಂದ್ಪಾಷಾ ದಂಪತಿಗೆ ತಿಳಿಸಿದ್ದಾರೆ. ಬಳಿಕ ಸ್ಥಳೀಯರೇ ಮನೆಯ ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಮತ್ತೂಬ್ಬ ಬಾಲಕ ತೀವ್ರವಾಗಿ ಗಾಯಗೊಂಡಿದ್ದ. ಕೂಡಲೇ ಮೂವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ರೋಹನ್ನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಖಾಸೀಂನನ್ನು ಮಾನಸಿಕ ಅಸ್ವಸ್ಥ ಎನ್ನಲಾಗಿದ್ದು ಕಳೆದ ತಿಂಗಳು ಕಾಣೆಯಾಗಿದ್ದ. ತಮ್ಮನನ್ನು ಅಣ್ಣ ಚಾಂದ್ ಪಾಷಾ ಹುಡುಕಿ ಕರೆತಂದಿದ್ದ. ಘಟನಾ ಸ್ಥಳಕ್ಕೆ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿ ಎಂ.ನಾರಾಯಣ್, ಎಸಿಪಿ ಸತೀಶ್, ಇನ್ಸ್ಪೆಕ್ಟರ್ ಸೋಮಶೇಖರ್ ಭೇಟಿ ನೀಡಿ ಪರಿಶೀಲಿಸಿದರು.
ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಕ್ಕಳ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದಾನೆ. ಮಕ್ಕಳ ಬಾಯಿಗೆ ಬಟ್ಟೆ ತುರುಕಿ ಕಬ್ಬಿಣದ ರಾಡ್ನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ಘಟನೆಗೆ ಕಾರಣ ತಿಳಿಯುತ್ತಿಲ್ಲ ಎಂದು ಚಾಂದ್ ಪಾಷ, ಮೃತ ಮಕ್ಕಳ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ತನ್ನದಲ್ಲದ ತಪ್ಪಿಗೆ ಅಮಾಯಕ ಮಕ್ಕಳು ಅತ್ಯಂತ ಭೀಕರವಾಗಿ ಕೊಲೆಯಾಗಿದ್ದಾರೆ. ಕೊಲೆ ಮಾಡಿರುವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಮೇಲ್ನೋಟಕ್ಕೆ ಮಾನಸಿಕ ಅಸ್ವಸ್ಥ ಎನ್ನುತ್ತಿದ್ದು, ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮಾಡಲಾಗುತ್ತಿದೆ.
            
            
            In a gruesome case of domestic violence, a man brutally attacked and killed his two young nephews and seriously injured a third in the Kammasandra area under Hebbagodi Police Station limits. The horrific incident has sent shockwaves across the locality.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm