ಬ್ರೇಕಿಂಗ್ ನ್ಯೂಸ್
28-07-25 11:20 pm Mangalore Correspondent ಕ್ರೈಂ
ಮಂಗಳೂರು, ಜುಲೈ 28 : ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆದ್ದಿರುವುದಾಗಿ ಹೇಳಿ ಮಂಗಳೂರಿನ ಮಹಿಳೆಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿದ್ದು ಆಕೆಯಿಂದಲೇ 7 ಲಕ್ಷ ರೂಪಾಯಿ ಹಣವನ್ನು ಲಪಟಾಯಿಸಿದ್ದಾರೆ. ವಂಚನೆಗೀಡಾದ ಮಹಿಳೆ ಉರ್ವಾ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆ ಜುಲೈ 23ರಂದು ಫೇಸ್ಬುಕ್ ನೋಡುತ್ತಿದ್ದಾಗ ಕೌನ್ ಬನೇಗಾ ಕರೋಡ್ ಪತಿ ಹೆಸರಲ್ಲಿ ಲಿಂಕ್ ಇದ್ದುದನ್ನು ನೋಡಿ, ಅದರಲ್ಲಿನ ಪ್ರಶ್ನೆಗಳಿಗೆ ಸರಿ ಉತ್ತರಗಳನ್ನು ಹಾಕಿದ್ದರು. ಜುಲೈ 27ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಕರೆ ಮಾಡಿ 8 ಲಕ್ಷ ರೂ. ಗೆದ್ದಿರುವುದಾಗಿ ಹೇಳಿದ್ದಾನೆ. ಅಲ್ಲದೆ, ಹಣ ಪಡೆಯಲು ನಿಗದಿತ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದಿದ್ದಾನೆ.
ಆತನ ಸೂಚನೆಯಂತೆ, ಮಹಿಳೆ ತನ್ನ ಆಧಾರ್ ಕಾರ್ಡ್, ಪಾನ್ ಕಾರ್ಡ್, ತನ್ನ ಫೋಟೋವನ್ನೂ ಕಳುಹಿಸಿದ್ದಾರೆ. ಆನಂತರ, ನೋಂದಣಿ ಶುಲ್ಕವೆಂದು ಹೇಳಿ ಹಣ ಕಟ್ಟಲು ಹೇಳಿದ್ದು, ಹಂತ ಹಂತವಾಗಿ ಮಹಿಳೆ ಅದನ್ನು ಪಾವತಿಸುತ್ತ ಹೋಗಿದ್ದಾರೆ. ಒಟ್ಟು 7.76 ಲಕ್ಷ ರೂಪಾಯಿ ಮೊತ್ತವನ್ನು ಗೂಗಲ್ ಪೇ ಮೂಲಕ ವರ್ಗಾಯಿಸಿದ್ದಾರೆ. ಅಷ್ಟರಲ್ಲಿ ತಾನು ಮೋಸ ಹೋಗಿರುವುದಾಗಿ ತಿಳಿದು ಉರ್ವಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಸೈಬರ್ ವಂಚಕರು ವಾಟ್ಸಪ್ ಮೆಸೇಜ್ ಮಾಡಿ ಷೇರ್ ಮಾರ್ಕೆಟ್ ಸೇರಿದಂತೆ ಬೇರೆ ಬೇರೆ ವಿಚಾರಗಳನ್ನು ಮುಂದಿಟ್ಟು ಜನರನ್ನು ಯಾಮಾರಿಸುವುದನ್ನ ನೋಡಿದ್ದೇವೆ. ಆದರೆ ಈ ಕೇಸಿನಲ್ಲಿ ಜನಪ್ರಿಯ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲೂ ದೋಖಾ ಎಸಗಿದ್ದಾರೆ.
In a disturbing case of cyber fraud, a woman from Mangaluru was conned out of ₹7.76 lakh by cybercriminals who tricked her into believing she had won ₹8 lakh through the popular TV quiz show 'Kaun Banega Crorepati' (KBC). The incident has been reported at the Urwa Police Station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm