ಬ್ರೇಕಿಂಗ್ ನ್ಯೂಸ್
28-07-25 11:20 pm Mangalore Correspondent ಕ್ರೈಂ
ಮಂಗಳೂರು, ಜುಲೈ 28 : ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆದ್ದಿರುವುದಾಗಿ ಹೇಳಿ ಮಂಗಳೂರಿನ ಮಹಿಳೆಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿದ್ದು ಆಕೆಯಿಂದಲೇ 7 ಲಕ್ಷ ರೂಪಾಯಿ ಹಣವನ್ನು ಲಪಟಾಯಿಸಿದ್ದಾರೆ. ವಂಚನೆಗೀಡಾದ ಮಹಿಳೆ ಉರ್ವಾ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆ ಜುಲೈ 23ರಂದು ಫೇಸ್ಬುಕ್ ನೋಡುತ್ತಿದ್ದಾಗ ಕೌನ್ ಬನೇಗಾ ಕರೋಡ್ ಪತಿ ಹೆಸರಲ್ಲಿ ಲಿಂಕ್ ಇದ್ದುದನ್ನು ನೋಡಿ, ಅದರಲ್ಲಿನ ಪ್ರಶ್ನೆಗಳಿಗೆ ಸರಿ ಉತ್ತರಗಳನ್ನು ಹಾಕಿದ್ದರು. ಜುಲೈ 27ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಕರೆ ಮಾಡಿ 8 ಲಕ್ಷ ರೂ. ಗೆದ್ದಿರುವುದಾಗಿ ಹೇಳಿದ್ದಾನೆ. ಅಲ್ಲದೆ, ಹಣ ಪಡೆಯಲು ನಿಗದಿತ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದಿದ್ದಾನೆ.
ಆತನ ಸೂಚನೆಯಂತೆ, ಮಹಿಳೆ ತನ್ನ ಆಧಾರ್ ಕಾರ್ಡ್, ಪಾನ್ ಕಾರ್ಡ್, ತನ್ನ ಫೋಟೋವನ್ನೂ ಕಳುಹಿಸಿದ್ದಾರೆ. ಆನಂತರ, ನೋಂದಣಿ ಶುಲ್ಕವೆಂದು ಹೇಳಿ ಹಣ ಕಟ್ಟಲು ಹೇಳಿದ್ದು, ಹಂತ ಹಂತವಾಗಿ ಮಹಿಳೆ ಅದನ್ನು ಪಾವತಿಸುತ್ತ ಹೋಗಿದ್ದಾರೆ. ಒಟ್ಟು 7.76 ಲಕ್ಷ ರೂಪಾಯಿ ಮೊತ್ತವನ್ನು ಗೂಗಲ್ ಪೇ ಮೂಲಕ ವರ್ಗಾಯಿಸಿದ್ದಾರೆ. ಅಷ್ಟರಲ್ಲಿ ತಾನು ಮೋಸ ಹೋಗಿರುವುದಾಗಿ ತಿಳಿದು ಉರ್ವಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಸೈಬರ್ ವಂಚಕರು ವಾಟ್ಸಪ್ ಮೆಸೇಜ್ ಮಾಡಿ ಷೇರ್ ಮಾರ್ಕೆಟ್ ಸೇರಿದಂತೆ ಬೇರೆ ಬೇರೆ ವಿಚಾರಗಳನ್ನು ಮುಂದಿಟ್ಟು ಜನರನ್ನು ಯಾಮಾರಿಸುವುದನ್ನ ನೋಡಿದ್ದೇವೆ. ಆದರೆ ಈ ಕೇಸಿನಲ್ಲಿ ಜನಪ್ರಿಯ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲೂ ದೋಖಾ ಎಸಗಿದ್ದಾರೆ.
In a disturbing case of cyber fraud, a woman from Mangaluru was conned out of ₹7.76 lakh by cybercriminals who tricked her into believing she had won ₹8 lakh through the popular TV quiz show 'Kaun Banega Crorepati' (KBC). The incident has been reported at the Urwa Police Station.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm