ಬ್ರೇಕಿಂಗ್ ನ್ಯೂಸ್
30-07-25 08:48 pm Mangalore Correspondent ಕ್ರೈಂ
ಮಂಗಳೂರು, ಜುಲೈ 30 : ಮಂಗಳೂರು ಮಹಾನಗರ ಪಾಲಿಕೆಯ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಟಿಸಿ ಉದ್ಯಮಿಗಳಿಗೆ ಭಾರೀ ವಂಚನೆ ನಡೆಸಿದ್ದ ಪ್ರಕರಣದಲ್ಲಿ ಕಂಕನಾಡಿ ನಗರ ಠಾಣೆ ಪೊಲೀಸರು ಆರೋಪಿ ಪಂಪ್ವೆಲ್ ನಿವಾಸಿ ಪೃಥ್ವಿರಾಜ್ ಶೆಟ್ಟಿ ಅಲಿಯಾಸ್ ಮುನ್ನ ಎಂಬಾತನನ್ನು ಬಂಧಿಸಿದ್ದಾರೆ.
ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಶ್ರೀ ರಾಜ ದುರ್ಗಾ ಫರ್ನಿಚರ್ ವರ್ಕ್ಸ್” ಎಂಬ ಉದ್ದಿಮೆ ಹೊಂದಿರುವ ಬಾಲಕೃಷ್ಣ ಸುವರ್ಣ ಎಂಬವರು ನ್ಯಾಯಾಲಯದ ಪ್ರಕರಣದಲ್ಲಿ ವ್ಯವಹರಿಸಲು ದಾಖಲಾತಿಗಳನ್ನು ಪಡೆದುಕೊಳ್ಳುವ ಸಲುವಾಗಿ ಮಂಗಳೂರು ಮಹಾನಗರ ಪಾಲಿಕೆಗೆ ಭೇಟಿ ನೀಡಿದ್ದು, ಆ ಸಂದರ್ಭ ಅವರ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಅನೂರ್ಜಿತಗೊಂಡಿರುವುದು ತಿಳಿದುಬಂದಿರುತ್ತದೆ. ಆದರೆ ಬಾಲಕೃಷ್ಣ ಸುವರ್ಣ ಅವರಲ್ಲಿ ಉದ್ದಿಮೆ ಪರವಾನಗಿ ಹಾಗೂ ಆಸ್ತಿ ತೆರಿಗೆ ಇದ್ದು, ಪರಿಶೀಲಿಸಿದಾಗ ಅದು ನಕಲಿ ರಶೀದಿ ಎನ್ನುವುದು ಪತ್ತೆಯಾಗಿತ್ತು. ಪರಿಶೀಲನೆ ವೇಳೆ ಬಾಲಕೃಷ್ಣ ಸುವರ್ಣ ಅವರಿಂದ ಪೃಥ್ವಿರಾಜ್ ಶೆಟ್ಟ ಎಂಬಾತನು ವಾರ್ಷಿಕ ತೆರಿಗೆ ಮೊತ್ತ 27,990 ರೂ. ಹಣವನ್ನು ಪಡೆದು ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ರಶೀದಿಗಳನ್ನು ನಕಲಿಯಾಗಿ ಸೃಷ್ಟಿಸಿ ನೀಡಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಬಾಲಕೃಷ್ಣ ಸುವರ್ಣ ನಕಲಿ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ರಶೀದಿಯನ್ನು ನಕಲಿ ಸೃಷ್ಟಿಸಿ ವಂಚಿಸಿರುವ ಕುರಿತು ಪೃಥ್ವಿರಾಜ್ ಶೆಟ್ಟಿ ಎಂಬಾತನ ವಿರುದ್ದ ದೂರು ನೀಡಿದ್ದರು.
ಇದಲ್ಲದೇ ಪಂಪ್ವೆಲ್ ನಲ್ಲಿರುವ ಲಕ್ಷ್ಮಿ ಹಾರ್ಡ್ ವೇರ್ ವರ್ಕ್ ಶಾಪ್ ಮಾಲೀಕರಾದ ದೇವಾಂಗ ಕೆ. ಪಟೇಲ್ ಎಂಬವರು ಕೂಡ ಪೃಥ್ವಿರಾಜ್ ಶೆಟ್ಟಿ ನಕಲಿ ಉದ್ದಿಮೆ ಪರವಾನಿಗೆ ಹಾಗೂ ನಕಲಿ ಆಸ್ತಿ ತೆರಿಗೆ ಸೃಷ್ಟಿಸಿ ವಂಚಿಸಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಕಂಕನಾಡಿ ಪೊಲೀಸರು ಪಂಪ್ವೆಲ್ ಉಜ್ಜೋಡಿ ನಿವಾಸಿ ಪೃಥ್ವಿರಾಜ್ ಶೆಟ್ಟಿ(25) ಯನ್ನು ಬಂಧಿಸಿದ್ದಾರೆ.
ಪ್ರಕರಣ ದಾಖಲಾದ ಸಮಯ ಆರೋಪಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಕೇರಳದ ಹಲವು ಕಡೆಗಳಲ್ಲಿ ಅವಿತುಕೊಂಡು ನಂತರ ಕಿನ್ನಿಗೋಳಿಗೆ ಬರುತ್ತಿರುವ ಮಾಹಿತಿಯಂತೆ ಜುಲೈ 25ರಂದು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆತನನ್ನು ವಿಚಾರಣೆಗೆ ಒಳಪಡಿಸಿದಾಗ, ಆರೋಪಿಯ ತಂದೆ ದೇವಾಂಗ್ ಪಟೇಲ್ ಅವರಿಗೆ ಸೇರಿದ ಅಂಗಡಿಯಲ್ಲಿ ಈ ಹಿಂದೆ ಕಮರ್ಷಿಯಲ್ ಅಕೌಂಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದರು. ನಂತರ ತನ್ನ ತಂದೆಗೆ ಅನಾರೋಗ್ಯವಾದ ಕಾರಣ ಪುತ್ರ ಪೃಥ್ವಿರಾಜ್ ಅವರ ಪರವಾಗಿ ಕೆಲಸವನ್ನು ಮುಂದುವರಿಸಿದ್ದ. ದೇವಾಂಗ ಕೆ ಪಟೇಲ್ ಹಾಗೂ ಅವರ ಪರಿಚಯದ ಬಾಲಕೃಷ್ಣ ಅವರಿಗೆ ಸಂಬಂಧಿಸಿದ ಉದ್ದಿಮೆಯ 2025-26 ನೇ ಸಾಲಿನ ಪರವಾನಿಗೆ ನವೀಕರಣ ಹಾಗೂ ಕಟ್ಟಡಗಳ ಆಸ್ತಿ ತೆರಿಗೆ ಪಾವತಿ ಮಾಡುತ್ತೇನೆಂದು ಹಣ ಪಡೆದಿದ್ದ. ಆನಂತರ, ತನ್ನ ಮೊಬೈಲ್ ನಲ್ಲಿ ಮಂಗಳೂರು ಮಹಾನಗರ ಪಾಲಿಕೆಯ MCC Trade Licence ಹಾಗೂ MCC Property Tax ವೆಬ್ ಸೈಟ್ ಗೆ ಲಾಗಿನ್ ಆಗಿ, ಉದ್ದಿಮೆ ಮಾಲಿಕರ ಮೊಬೈಲ್ OTP ಪಡೆದು ಹಿಂದಿನ ಈ ವರ್ಷದ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ರಶೀದಿಯನ್ನು ಡೌನ್ ಲೋಡ್ ಮಾಡಿ, 3rd Party ಅಪ್ಲಿಕೇಶನ್ ಮುಖಾಂತರ ದಿನಾಂಕ ಹಾಗೂ ಇನ್ನಿತರ ಮಾಹಿತಿಗಳನ್ನು ಎಡಿಟ್ ಮಾಡಿ ಅದನ್ನು ಪ್ರಿಂಟ್ ಮಾಡಿಸಿ, ದೇವಾಂಗ್ ಕೆ ಪಟೇಲ್ ಹಾಗೂ ಬಾಲಕೃಷ್ಣ ಸುವರ್ಣ ಅವರಿಗೆ ನೀಡಿದ್ದ.
ಆರೋಪಿ ದೇವಾಂಗ್ ಪಟೇಲ್ ಹಾಗೂ ಬಾಲಕೃಷ್ಣ ಸುವರ್ಣ ಅವರಿಗೆ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ವಂಚಿಸಿದ್ದು, ನಕಲಿ ದಾಖಲಾತಿಗಳನ್ನು ಸೃಷ್ಟಿಸಲು ಉಪಯೋಗಿಸಿದ ಸಲಕರಣೆಗಳನ್ನು ವಶಡಿಸಲಾಗಿದೆ. ಆರೋಪಿತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಪ್ರಸ್ತುತ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಇತರ ಉದ್ದಿಮೆದಾರರಿಗೂ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ನೀಡಿರುತ್ತಾನೆಯೇ ಎಂಬ ಬಗ್ಗೆ ಕಂಕನಾಡಿ ಮತ್ತು ಬರ್ಕೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a major fraud case involving fake trade licenses and property tax receipts, the Mangaluru City Police have arrested a 25-year-old man, Prithviraj Shetty alias Munna, a resident of Pumpwell, for allegedly cheating multiple business owners by issuing forged municipal documents.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm