ಬ್ರೇಕಿಂಗ್ ನ್ಯೂಸ್
            
                        30-07-25 10:42 pm Bangalore Correspondent ಕ್ರೈಂ
            ಬೆಂಗಳೂರು, ಜುಲೈ 30 : ನಗರದ ಬೆಳ್ಳಂದೂರಿನಲ್ಲಿರುವ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಕಂಪನಿ ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ವ್ಯಾಲೆಟ್ ಹ್ಯಾಕ್ ಮಾಡಿರುವ ಸೈಬರ್ ವಂಚಕರು, 378 ಕೋಟಿ ರೂ ಅಂದ್ರೆ ಸುಮಾರು 44 ಮಿಲಿಯನ್ ಅಮೆರಿಕನ್ ಡಾಲರ್ ಲೂಟಿ ಮಾಡಿದ್ದಾರೆ. ಈ ಕುರಿತು ಕಂಪನಿಯ ಉಪಾಧ್ಯಕ್ಷ ಹರ್ದೀಪ್ ಸಿಂಗ್ ನೀಡಿರುವ ದೂರಿನ ಆಧಾರದಲ್ಲಿ ವೈಟ್ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮ್ಮ ಉದ್ಯೋಗಿರಾಹುಲ್ ಅಗರ್ವಾಲ್ ಎಂಬವರಿಗೆ ಕೆಲಸ ಮಾಡಲು ಕಂಪನಿ ಲ್ಯಾಪ್ಟಾಪ್ ನೀಡಿತ್ತು. ಸೈಬರ್ ಕಳ್ಳರು ಈ ಲ್ಯಾಪ್ಟಾಪ್ನ ವ್ಯಾಲೆಟ್ ಹ್ಯಾಕ್ ಮಾಡಿದ್ದಾರೆ.
ಇಷ್ಟು ದೊಡ್ಡ ಮೊತ್ತ ವಂಚನೆಯಾಗಿರುವುದು ಬೆಳಕಿಗೆ ಬಂದ ತಕ್ಷಣ ಕಂಪನಿ ಆಂತರಿಕ ತನಿಖೆ ನಡೆಸಿದೆ. ಈ ವೇಳೆ, ರಾಹುಲ್ ಅಗರ್ವಾಲ್ ಅವರು ಕಂಪನಿ ಲ್ಯಾಪ್ಟಾಪ್ ಅನ್ನು ಮತ್ತೊಂದು ಪಾರ್ಟ್ಟೈಂ ಉದ್ಯೋಗಕ್ಕೆ ಬಳಸಿರುವುದು ಗೊತ್ತಾಗಿದೆ. ಕಳೆದ ಒಂದು ವರ್ಷದಿಂದ ಪಾರ್ಟ್ಟೈಮ್ ಉದ್ಯೋಗದ ಮೂಲಕ ಅಗರ್ವಾಲ್ 15 ಲಕ್ಷ ರೂ ಸಂಪಾದಿಸಿರುವುದೂ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಈತನೇ ಬೇರೆ ವ್ಯಕ್ತಿಗಳೊಂದಿಗೆ ಸೇರಿ ಈ ವಂಚನೆ ಎಸಗಿರುವ ಸಾಧ್ಯತೆ ಇದೆ ಎಂದು ಕಂಪನಿ ದೂರಿನಲ್ಲಿ ತಿಳಿಸಿದೆ.
"ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ರಾಹುಲ್ ಅಗರ್ವಾಲ್ ಕಳೆದ ಐದಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಆತನ ಲ್ಯಾಪ್ಟಾಪ್ನಿಂದ ಕಂಪನಿಯ ಕ್ರಿಪ್ಟೋ ಕರೆನ್ಸಿ ವರ್ಗಾವಣೆಯಾಗಿರುವ ಕಾರಣ ಆತನನ್ನು ವಶಕ್ಕೆ ಪಡೆಯಲಾಗಿದೆ. ಸೈಬರ್ ವಂಚನೆ ಪ್ರಕರಣದಲ್ಲಿ ಆತನ ಕೈವಾಡವಿದೆಯೇ ಎಂಬ ಕುರಿತು ತನಿಖೆ ನಡೆಯುತ್ತಿದೆ" ಎಂದು ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ನೀಡಿದರು.
            
            
            In a shocking case of cyber fraud, Nebilo Technologies Private Limited, a cryptocurrency trading company based in Bellandur, Bengaluru, reported a theft of approximately ₹378 crore (around 44 million US dollars) from its crypto wallet. The fraud came to light following an internal investigation, and a formal complaint has been lodged at the Whitefield Cyber Crime Police Station based on a report filed by the company’s Vice President, Hardeep Singh.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm