ಬ್ರೇಕಿಂಗ್ ನ್ಯೂಸ್
30-07-25 10:42 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 30 : ನಗರದ ಬೆಳ್ಳಂದೂರಿನಲ್ಲಿರುವ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಕಂಪನಿ ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ವ್ಯಾಲೆಟ್ ಹ್ಯಾಕ್ ಮಾಡಿರುವ ಸೈಬರ್ ವಂಚಕರು, 378 ಕೋಟಿ ರೂ ಅಂದ್ರೆ ಸುಮಾರು 44 ಮಿಲಿಯನ್ ಅಮೆರಿಕನ್ ಡಾಲರ್ ಲೂಟಿ ಮಾಡಿದ್ದಾರೆ. ಈ ಕುರಿತು ಕಂಪನಿಯ ಉಪಾಧ್ಯಕ್ಷ ಹರ್ದೀಪ್ ಸಿಂಗ್ ನೀಡಿರುವ ದೂರಿನ ಆಧಾರದಲ್ಲಿ ವೈಟ್ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮ್ಮ ಉದ್ಯೋಗಿರಾಹುಲ್ ಅಗರ್ವಾಲ್ ಎಂಬವರಿಗೆ ಕೆಲಸ ಮಾಡಲು ಕಂಪನಿ ಲ್ಯಾಪ್ಟಾಪ್ ನೀಡಿತ್ತು. ಸೈಬರ್ ಕಳ್ಳರು ಈ ಲ್ಯಾಪ್ಟಾಪ್ನ ವ್ಯಾಲೆಟ್ ಹ್ಯಾಕ್ ಮಾಡಿದ್ದಾರೆ.
ಇಷ್ಟು ದೊಡ್ಡ ಮೊತ್ತ ವಂಚನೆಯಾಗಿರುವುದು ಬೆಳಕಿಗೆ ಬಂದ ತಕ್ಷಣ ಕಂಪನಿ ಆಂತರಿಕ ತನಿಖೆ ನಡೆಸಿದೆ. ಈ ವೇಳೆ, ರಾಹುಲ್ ಅಗರ್ವಾಲ್ ಅವರು ಕಂಪನಿ ಲ್ಯಾಪ್ಟಾಪ್ ಅನ್ನು ಮತ್ತೊಂದು ಪಾರ್ಟ್ಟೈಂ ಉದ್ಯೋಗಕ್ಕೆ ಬಳಸಿರುವುದು ಗೊತ್ತಾಗಿದೆ. ಕಳೆದ ಒಂದು ವರ್ಷದಿಂದ ಪಾರ್ಟ್ಟೈಮ್ ಉದ್ಯೋಗದ ಮೂಲಕ ಅಗರ್ವಾಲ್ 15 ಲಕ್ಷ ರೂ ಸಂಪಾದಿಸಿರುವುದೂ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಈತನೇ ಬೇರೆ ವ್ಯಕ್ತಿಗಳೊಂದಿಗೆ ಸೇರಿ ಈ ವಂಚನೆ ಎಸಗಿರುವ ಸಾಧ್ಯತೆ ಇದೆ ಎಂದು ಕಂಪನಿ ದೂರಿನಲ್ಲಿ ತಿಳಿಸಿದೆ.
"ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ರಾಹುಲ್ ಅಗರ್ವಾಲ್ ಕಳೆದ ಐದಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಆತನ ಲ್ಯಾಪ್ಟಾಪ್ನಿಂದ ಕಂಪನಿಯ ಕ್ರಿಪ್ಟೋ ಕರೆನ್ಸಿ ವರ್ಗಾವಣೆಯಾಗಿರುವ ಕಾರಣ ಆತನನ್ನು ವಶಕ್ಕೆ ಪಡೆಯಲಾಗಿದೆ. ಸೈಬರ್ ವಂಚನೆ ಪ್ರಕರಣದಲ್ಲಿ ಆತನ ಕೈವಾಡವಿದೆಯೇ ಎಂಬ ಕುರಿತು ತನಿಖೆ ನಡೆಯುತ್ತಿದೆ" ಎಂದು ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ನೀಡಿದರು.
In a shocking case of cyber fraud, Nebilo Technologies Private Limited, a cryptocurrency trading company based in Bellandur, Bengaluru, reported a theft of approximately ₹378 crore (around 44 million US dollars) from its crypto wallet. The fraud came to light following an internal investigation, and a formal complaint has been lodged at the Whitefield Cyber Crime Police Station based on a report filed by the company’s Vice President, Hardeep Singh.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am