ಬ್ರೇಕಿಂಗ್ ನ್ಯೂಸ್
01-08-25 04:27 pm HK News Desk ಕ್ರೈಂ
ಬೆಂಗಳೂರು, ಆ 2: ಟ್ಯೂಷನ್ಗೆ ಹೋಗ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ ಬಳಿ ನಡೆದಿದೆ. 13 ವರ್ಷದ ನಿಶ್ಚಿತ್ ಹತ್ಯೆಯಾದ ಬಾಲಕ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಅರಕೆರೆ ಶಾಂತಿನಿಕೇತನ ಬಡಾವಣೆ ಬಳಿ ಟ್ಯೂಷನ್ನಿಂದ ಬರುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದರು.
ಬಾಲಕನ ತಂದೆ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದರಿಂದ ಕಿಡ್ನ್ಯಾಪರ್ಸ್ ಕರೆ ಮಾಡಿ 5 ಲಕ್ಷ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಕಿಡ್ನ್ಯಾಪರ್ಸ್ ಕಡೆಯಿಂದ ಫೋನ್ ಬರ್ತಿದ್ದಂತೆ ಬಾಲಕ ಪೋಷಕರು ಹುಳಿಮಾವು ಠಾಣೆಗೆ ದೂರು ನೀಡಿದ್ದರು.

ಬೆಂಗಳೂರಲ್ಲಿ ಖಾಸಗಿ ಕಾಲೇಜ್ ಉಪನ್ಯಾಸಕನ ಪುತ್ರ ನಿಶ್ಚಿತ್ ಪೋಷಕರು 5 ಲಕ್ಷ ರೂ ತಯಾರು ಮಾಡಿ ಇಟ್ಟಿದ್ರೂ ಕೂಡಾ ಬಾಲಕನನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎಂದ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.
ಅಚ್ಯುತ್ ಮನೆಯಲ್ಲಿ ಹೆಚ್ಚುವರಿ ಡ್ರೈವರ್ ಆಗಿದ್ದ ಗುರುಮೂರ್ತಿಯೇ ಬಾಲಕನ ಕಿಡ್ನಾಪ್ ಗೆ ಪ್ಲ್ಯಾನ್ ಮಾಡಿದ್ದ ಎನ್ನಲಾಗಿದೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಗುರುಮೂರ್ತಿ ಪರಿಚಯದ ವ್ಯಕ್ತಿಯಿಂದಲೇ ಕಿಡ್ನಾಪ್ ನಡೆದಿದೆ. ಹೊರವಲಯದ ಅರಣ್ಯ ಪ್ರದೇಶದ ಬಳಿಗೆ ಕರೆದೊಯ್ದು ಕೊಲೆ ಮಾಡಿ, ನಂತರ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ನಂತರ ಪೆಟ್ರೋಲ್ ಸುರಿದು ಸುಟ್ಟುಹಾಕುವ ಕೆಲಸ ಮಾಡಿದ್ದಾರೆ.
ಇಬ್ಬರು ಆರೋಪಿಗಳು ಕಗ್ಗಲಿಪುರ ಅರಣ್ಯದಲ್ಲಿ ಅಡಗಿ ಕುಳಿತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಳ್ಳಲು ಯಶಸ್ವಿಯಾದರು.
ಮೃತ ಬಾಲಕ ನಿಶ್ಚಿತ್ ತಂದೆಗೆ ಪರಿಚಯವಿದ್ದ ಆರೋಪಿಗಳೇ ಕೃತ್ಯ ಎಸಗಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಸೈಕೋ ಮನಸ್ಥಿತಿ ಹೊಂದಿದ್ದ ಆರೋಪಿಗಳು;
ಆರೋಪಿಗಳು ಸೈಕೋ ಮನಸ್ಥಿತಿ ಹೊಂದಿದವರು ಎನ್ನಲಾಗಿದೆ. ಪ್ರಮುಖ ಆರೋಪಿ ಗುರುಮೂರ್ತಿಗೆ ಪೋಕ್ಸೊ ಅಪರಾಧ ಪ್ರಕರಣದ ಹಿನ್ನೆಲೆ ಇದೆ. ಆದಾಗ್ಯೂ, ಬಾಲಕ ನಿಶ್ಚಿತ್ ಅಪಹರಣ ಹಾಗೂ ಕೊಲೆಗೆ ನಿಖರ ಕಾರಣ ಏನೆಂಬುದು ಇನ್ನೂ ನನಿಗೂಢವಾಗಿಯೇ ಇದೆ. ಕೇವಲ ಹಣಕ್ಕಾಗಿ ಮಾತ್ರ ಆರೋಪಿ ಬಾಲಕನನ್ನು ಅಪಹರಿಸಿದ್ದನೇ ಅಥವಾ ಬೇರೆ ಕಾರಣ ಇದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರೋಪಿ ಹಿನ್ನಲೆ ಗಮನಿಸಿ ಎರಡು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿ ಎರಡ್ಮೂರು ಸ್ಥಳ ಹೇಳಿ ಹಣ ಪಡೆಯದೆ ಸತಾಯಿಸಿದ್ದ ಎನ್ನಲಾಗಿದೆ. ಒಂದೆಡೆ ನಿಶ್ಚಿತ್ ಪೋಷಕರು ಹಣ ಸಂಗ್ರಹಿಸಿಟ್ಟು, ಪೊಲೀಸರ ತನಿಖೆ ಸಹಕರಿಸಿದ್ದರು. ಆದರೆ, ಅಷ್ಟರಲ್ಲಾಗಲೇ ಬಾಲಕನ ಹತ್ಯೆ ಮಾಡಲಾಗಿದೆ.
A 13-year-old schoolboy was allegedly brutally murdered hours after being kidnapped while he was returning home from tuition classes in Hulimavu, on Thursday.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
24-03-26 12:10 pm
HK News Staffer
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm