ಬ್ರೇಕಿಂಗ್ ನ್ಯೂಸ್
06-08-25 11:04 am Udupi Correspondent ಕ್ರೈಂ
ಉಡುಪಿ, ಆ.6 : ಮನೆಗಳ್ಳತನ ಸೇರಿದಂತೆ ಹಲವೆಡೆ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಕಳ್ಳರಿಗೆ ಸಹಾಯ ಮಾಡುತ್ತಿದ್ದ ಆರೋಪದಲ್ಲಿ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕಿನ ಉಪ್ಪಳ್ಳಿ ನಿವಾಸಿ ಕೆ.ಇ.ಮೊಹಮ್ಮದ್ ಬಂಧಿತ ಆರೋಪಿ. ಈತನಿಂದ ಒಟ್ಟು 182 ಗ್ರಾಂ ಚಿನ್ನದ ಗಟ್ಟಿಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜೂ.27 ರಂದು ರಾತ್ರಿ ವೇಳೆ ಶಿರ್ವ ಗ್ರಾಮದ ಮಟ್ಟಾರು ರಸ್ತೆಯ ಬಳಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಕುಖ್ಯಾತ ಕಳ್ಳತನ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಎಂಬಾತನನ್ನು ಬಂಧಿಸಲಾಗಿತ್ತು, ಬಂಧಿತ ಆರೋಪಿಯನ್ನು ಕಸ್ಟಡಿಗೆ ತೆಗೆದು ವಿಚಾರಣೆ ನಡೆಸಿದಾಗ ಕಳವು ಮಾಡಿರುವ ಚಿನ್ನ ಮತ್ತು ಈ ಹಿಂದೆಯೂ ಕೆಲವು ಪ್ರಕರಣಗಳಲ್ಲಿ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಉಪ್ಪಳ್ಳಿಯ ಕೆ.ಇ.ಮೊಹಮ್ಮದ್ಗೆ ನೀಡಿರುವುದಾಗಿ ಬಗ್ಗೆ ಮಾಹಿತಿ ನೀಡಿದ್ದ. ಇದರಂತೆ ಕೆ.ಇ.ಮೊಹಮ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಶಿರ್ವ, ಪಡುಬಿದ್ರಿ ಹಾಗೂ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿರುವ ಚಿನ್ನದ ಗಟ್ಟಿಗಳನ್ನು ಮೊಹಮ್ಮದ್ ತನ್ನ ಬಳಿ ಇರಿಸಿಕೊಂಡು ಅವನ್ನು ಕರಗಿಸಿ ಮಾರಾಟಕ್ಕೆ ವ್ಯವಸ್ಥೆ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
ಉಡುಪಿ ಪೊಲೀಸ್ ಜಿಲ್ಲಾ ಅಧೀಕ್ಷಕ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್.ನಾಯ್ಕ, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದ ನೇತೃತ್ವದಲ್ಲಿ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಎಸ್.ಮಾನೆ ನೇತೃತ್ವದ ತಂಡ ಪತ್ತೆ ಕಾರ್ಯಾಚರಣೆ ನಡೆಸಿದೆ. ಈ ಹಿಂದೆ ದಸ್ತಗಿರಿ ಮಾಡಿದ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಮತ್ತು ಸದ್ರಿ ಆರೋಪಿ ಕೆ.ಇ.ಮೊಹಮ್ಮದ್ ಅವರಿಂದ ಒಟ್ಟು 22.32 ಲಕ್ಷ ರೂ. ಮೌಲ್ಯದ 248.760 ಗ್ರಾಂ ತೂಕದ ಚಿನ್ನಾಭರಣ ಮತ್ತು ಚಿನ್ನದ ಗಟ್ಟಿಗಳನ್ನು ವಶಪಡಿಸಲಾಗಿದೆ.
Udupi police have arrested a man for aiding burglars in selling stolen gold by melting it and turning it into solid gold bars. The arrested individual has been identified as K.E. Mohammed, a resident of Uppalli in Udupi taluk.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm