ಬ್ರೇಕಿಂಗ್ ನ್ಯೂಸ್
06-08-25 05:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 06 : ಹದಿಹರೆಯದ ಬಾಲಕ ನಿಶ್ಚಿತ್ ನನ್ನ ಅಪಹರಿಸಿ ಬನ್ನೇರುಘಟ್ಟ ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಈಗಾಗಲೇ ಇಬ್ಬರ ಬಂಧನವಾಗಿದ್ದು , ಇದೀಗ ಬಾಲಕನ ಕಿಡ್ನ್ಯಾಪ್ ಅಂಡ್ ಮರ್ಡರ್ ಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ತನಿಖೆ ವೇಳೆ ಆರೋಪಿ ಡ್ರೈವರ್ ಗುರುಮೂರ್ತಿಯ ಸೈಕೋ ಮನಸ್ಥಿತಿಯವನಾಗಿದ್ದು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ವಿಷಯ ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ. ಬಾಲಕನಿಗೆ ಲೈಂಗಿಕವಾಗಿ ಹಿಂಸೆ ನೀಡಿದ್ದಾರೆ, ಈ ಹುಡುಗನನ್ನ ಮನೆಗೆ ಹೋಗಲು ಬಿಟ್ರೆ ಮನೆ ಮಂದಿಗೆ ವಿಷಯ ತಿಳಿಸುತ್ತಾನೆಂದು ಕೊಂದೇ ಬಿಟ್ಟಿದ್ದಾರೆ.

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ;
ಸೈಕೋ ಮನಸ್ಥಿತಿಯ ಆರೋಪಿ ಗುರುಮೂರ್ತಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕ ವಿರೋಧ ವ್ಯಕ್ತಪಡಿಸಿದಕ್ಕೆ ಗಂಟಲಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ ಮೃತದೇಹ ಸುಟ್ಟು ಹಾಕಿದ್ದ. ಬಳಿಕ ಕೊಲೆ ವಿಷಯ ಮರೆಮಾಚಲು ಕಿಡ್ನಾಪ್ ಕಥೆ ಕಟ್ಟಿದ್ದು, ಬಾಲಕನ ಮನೆಯವರಿಗೆ ಕರೆ ಮಾಡಿ 5 ಲಕ್ಷ ರೂ. ಗೆ ಡಿಮ್ಯಾಂಡ್ ಮಾಡಿದ್ದ.
ಇನ್ನು ಈ ಕಂತ್ರಿ ಕಾಮುಕ 13 ವರ್ಷದ ಬಾಲಕಿಯನ್ನು ಬಿಟ್ಟಿರಲಿಲ್ಲ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ. 2020 ರಲ್ಲಿ ಆರೋಪಿ ಮೇಲೆ ಪೋಕ್ಸೊ ಕೇಸ್ ದಾಖಲಾಗಿತ್ತು. ಕೋಣನಕುಂಟೆ ಪೊಲೀಸರಿಂದ ಬಂಧನಕ್ಕೆ ಒಳಗಾಗಿ, ಬಳಿಕ ಬೇಲ್ ಮೇಲೆ ಹೊರಬಂದಿದ್ದ.
ಇತ್ತೀಚೆಗೆ ಹುಳಿಮಾವು ಪೊಲೀಸರು ಆರೋಪಿಗಳಾದ ಗುರುಮೂರ್ತಿ ಮತ್ತು ವೇಣುಗೋಪಾಲ್ಗೆ ಗುಂಡು ಹಾರಿಸಿ ಬಂಧಿಸಿದ್ದರು. ಸದ್ಯ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ಅರಕೆರೆ ವೈಶ್ಯ ಬ್ಯಾಂಕ್ ಕಾಲೋನಿ ನಿವಾಸಿಯಾಗಿದ್ದ ಅಚ್ಯುತ್ ರೆಡ್ಡಿ ಮತ್ತು ಸವಿತಾ ಅವರ ಒಬ್ಬನೇ ಮಗ ಈ ನಿಶ್ಚಿತ್. ಅಚ್ಯುತ್ ರೆಡ್ಡಿ ಕಾಲೇಜೊಂದರಲ್ಲಿ ಪ್ರಾಧ್ಯಪಕಾರಾಗಿದರೆ, ತಾಯಿ ಸವಿತಾ ಸಾಫ್ಟವೇರ್ ಎಂಜಿನಿಯರ್. ಮಗನ ಭವಿಷ್ಯದ ಬಗ್ಗೆ ಸಾಕಷ್ಟು ಕನಸು ಕಂಡಿದ್ದ ಪೋಷಕರಿಗೆ ಬರ ಸಿಡಿಲೇ ಬಂದೆರಗಿದಂತಗಾಗಿತ್ತು. ನಿಶ್ಚಿತ್ನನ್ನ ಬನ್ನೇರುಘಟ್ಟದ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು.
ನಿಶ್ಚಿತ್ನನ್ನ ಕೊಂದಿದ್ದು ಬೇರಾರೂ ಅಚ್ಯುತ್ ರೆಡ್ಡಿ ಮನೆಯಲ್ಲಿ ಸ್ಪೇರ್ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ ಗುರುಮೂರ್ತಿ ಮತ್ತು ಅವನ ಸ್ನೇಹಿತ ಗೋಪಾಲಕೃಷ್ಣ. ಸ್ಪೇರ್ ಡ್ರೈವರ್ ಆಗಿದ್ರಿಂದ ಅಚ್ಯುತ್ ರೆಡ್ಡಿ ನಿವಾಸಕ್ಕೆ ಆಗಾಗ ಬಂದು ಹೋಗ್ತಿದ್ದ ಗುರುಮೂರ್ತಿ. ಹೀಗಾಗಿ ಬಾಲಕ ನಿಶ್ಚಿತ್ಗೆ ಗುರುಮೂರ್ತಿ ಪರಿಚಯ ಇತ್ತು. ಆಗಸ್ಟ್ ಒಂದನೇ ತಾರೀಕು ಟ್ಯೂಶನ್ಗೆ ಹೋಗಿದ್ದ ನಿಶ್ಚಿತ್ನನ್ನ ಪಾನಿಪುರಿ ಕೊಡಿಸೋದಾಗಿ ಹೇಳಿ ಗುರುಮೂರ್ತಿ ಕರೆದೊಯ್ದಿದ್ದಾನೆ. ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ವೆಸಗಿ, ಹೆಣವಣ್ಣ ಸುಟ್ಟು ಪರಾರಿಯಾಗಿದ್ದರು.
In a horrific twist to the abduction and murder case of teenage boy Nischith near Bannerghatta, Bengaluru police have now revealed that the boy was sexually assaulted before being brutally killed and his body set on fire. The chilling details emerged during the ongoing police investigation, leading to the arrest of two suspects.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am