ಬ್ರೇಕಿಂಗ್ ನ್ಯೂಸ್
08-08-25 12:21 pm Mangalore Correspondent ಕ್ರೈಂ
ಮಂಗಳೂರು, ಆ.8 : ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ರಾಮ್ ಪುರ ನಿವಾಸಿ ಶಾಹನಾಜ್ ಬಂಧಿತ ಅರೋಪಿ.
2014ರಲ್ಲಿ ಕುಳಾಯಿ ಬಳಿ ಕೋರಬ್ಬು ಕಲ ಎಂಬಲ್ಲಿ ನಡೆದಿದ್ದ ಸುಮತಿ ಪ್ರಭು ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳು ಸುಮತಿ ಪ್ರಭು ಅವರ ಕತ್ತು ಸೀಳಿ 24 ಪವನ್ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದರು. ಈ ಬಗ್ಗೆ ಅವರ ಪುತ್ರ ಗುರುದಾಸ್ ಪ್ರಭು ಸುರತ್ಕಲ್ ಠಾಣೆಗೆ ದೂರು ನೀಡಿದ್ದು ಅಂದಿನ ಪಿಐ ಎಂ.ಎ. ನಟರಾಜ್ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳು ಸುರತ್ಕಲ್ ಬಳಿಯ ಕೈಗಾರಿಕೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿದ್ದು ಸುಮತಿ ಪ್ರಭು ಅವರ ಮನೆಯಲ್ಲಿ ಬಾಡಿಗೆ ವಾಸವಿದ್ದರು. ಹಾಗಾಗಿ ಈ ಪ್ರಕರಣ ಅಂದಿನ ದಿನಗಳಲ್ಲಿ ಸಂಚಲನ ಮೂಡಿಸಿತ್ತು. ಕೃತ್ಯದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು.
ಪ್ರಕರಣ ಭೇದಿಸಿದ್ದ ಪೊಲೀಸರು ರಾಜಸ್ಥಾನದ ನಿವಾಸಿಗಳಾದ ಶಿವರಾಮ್ ಹಾಗೂ ಬಹದ್ದೂರ್ ಸಿಂಗ್, ಉತ್ತರ ಪ್ರದೇಶದ ಶಹನಾಜ್ ಎಂಬವರನ್ನು ಬಂಧಿಸಿದ್ದರು. ಇಬ್ಬರು ಆರೋಪಿಗಳು ಬಳಿಕ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದರು. ರಾಜಸ್ಥಾನದ ಬಯಾನ ನಿವಾಸಿ ಶಿವರಾಮ್ ನನ್ನು ಮಾರ್ಚ್ 6ರಂದು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಶಹನಾಜ್ನನ್ನು ಮಧ್ಯಪ್ರದೇಶದ ಭೋಪಾಲ್ನಲ್ಲಿ ಬುಧವಾರ ಬಂಧಿಸಿದ್ದು ಮಂಗಳೂರಿಗೆ ಕರೆತರಲಾಗಿದೆ.
The Surathkal police have arrested an accused who had been absconding for over four years in connection with the 2014 murder and gold theft case of Sumathi Prabhu in Kulai.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am