ಬ್ರೇಕಿಂಗ್ ನ್ಯೂಸ್
            
                        08-08-25 12:21 pm Mangalore Correspondent ಕ್ರೈಂ
            ಮಂಗಳೂರು, ಆ.8 : ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ರಾಮ್ ಪುರ ನಿವಾಸಿ ಶಾಹನಾಜ್ ಬಂಧಿತ ಅರೋಪಿ.
2014ರಲ್ಲಿ ಕುಳಾಯಿ ಬಳಿ ಕೋರಬ್ಬು ಕಲ ಎಂಬಲ್ಲಿ ನಡೆದಿದ್ದ ಸುಮತಿ ಪ್ರಭು ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳು ಸುಮತಿ ಪ್ರಭು ಅವರ ಕತ್ತು ಸೀಳಿ 24 ಪವನ್ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದರು. ಈ ಬಗ್ಗೆ ಅವರ ಪುತ್ರ ಗುರುದಾಸ್ ಪ್ರಭು ಸುರತ್ಕಲ್ ಠಾಣೆಗೆ ದೂರು ನೀಡಿದ್ದು ಅಂದಿನ ಪಿಐ ಎಂ.ಎ. ನಟರಾಜ್ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳು ಸುರತ್ಕಲ್ ಬಳಿಯ ಕೈಗಾರಿಕೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿದ್ದು ಸುಮತಿ ಪ್ರಭು ಅವರ ಮನೆಯಲ್ಲಿ ಬಾಡಿಗೆ ವಾಸವಿದ್ದರು. ಹಾಗಾಗಿ ಈ ಪ್ರಕರಣ ಅಂದಿನ ದಿನಗಳಲ್ಲಿ ಸಂಚಲನ ಮೂಡಿಸಿತ್ತು. ಕೃತ್ಯದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು.
ಪ್ರಕರಣ ಭೇದಿಸಿದ್ದ ಪೊಲೀಸರು ರಾಜಸ್ಥಾನದ ನಿವಾಸಿಗಳಾದ ಶಿವರಾಮ್ ಹಾಗೂ ಬಹದ್ದೂರ್ ಸಿಂಗ್, ಉತ್ತರ ಪ್ರದೇಶದ ಶಹನಾಜ್ ಎಂಬವರನ್ನು ಬಂಧಿಸಿದ್ದರು. ಇಬ್ಬರು ಆರೋಪಿಗಳು ಬಳಿಕ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದರು. ರಾಜಸ್ಥಾನದ ಬಯಾನ ನಿವಾಸಿ ಶಿವರಾಮ್ ನನ್ನು ಮಾರ್ಚ್ 6ರಂದು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಶಹನಾಜ್ನನ್ನು ಮಧ್ಯಪ್ರದೇಶದ ಭೋಪಾಲ್ನಲ್ಲಿ ಬುಧವಾರ ಬಂಧಿಸಿದ್ದು ಮಂಗಳೂರಿಗೆ ಕರೆತರಲಾಗಿದೆ.
            
            
            The Surathkal police have arrested an accused who had been absconding for over four years in connection with the 2014 murder and gold theft case of Sumathi Prabhu in Kulai.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm