ಬ್ರೇಕಿಂಗ್ ನ್ಯೂಸ್
12-08-25 12:36 pm Bangalore Correspondent ಕ್ರೈಂ
ಬೆಂಗಳೂರು, ಆ.12 : ತುಮಕೂರು ತಾಲೂಕಿನ ಕೊರಟಗೆರೆಯಲ್ಲಿ ಅತ್ತೆಯನ್ನು ಅಳಿಯನೇ ಕೊಲೆಗೈದು ಶವ ಕತ್ತರಿಸಿ 19 ಕಡೆಗಳಲ್ಲಿ ಎಸೆದಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ದಂತ ವೈದ್ಯ ಡಾ.ರಾಮಚಂದ್ರ ಸೇರಿ ಮೂವರನ್ನು ಬಂಧಿಸಿದ್ದಾರೆ. ಡಾ.ರಾಮಚಂದ್ರನೇ ತನ್ನ ಅತ್ತೆ ಲಕ್ಷ್ಮೀದೇವಮ್ಮ ಅವರನ್ನು ಹತ್ಯೆಗೈದು 19 ತುಂಡುಗಳನ್ನಾಗಿಸಿ ಎಸೆದಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ಪ್ರಮುಖ ಆರೋಪಿ ಡಾ.ರಾಮಚಂದ್ರನಿಗೆ ಸಹಕರಿಸಿದ್ದ ಕಲ್ಲಹಳ್ಳಿಯ ಸತೀಶ್ ಕೆ.ಎನ್. ಮತ್ತು ಕಿರಣ್ ಕೆ.ಎಸ್. ಎಂಬವರನ್ನು ಬಂಧಿಸಲಾಗಿದೆ ಎಂದು ತುಮಕೂರು ಜಿಲ್ಲೆಯ ಎಸ್ಪಿ ಅಶೋಕ್ ಕೆ.ವಿ. ಮಾಹಿತಿ ನೀಡಿದರು. ''ಬೆಳ್ಳಾವಿಯ ಲಕ್ಷ್ಮೀದೇವಮ್ಮ ಆಗಸ್ಟ್ 3ರಂದು ತುಮಕೂರಿನ ಕುವೆಂಪುನಗರದ ತನ್ನ ಮಗಳ ಮನೆಗೆ ಬಂದಿದ್ದರು. ವಾಪಸ್ ಹೊರಟಾಗ ಅಳಿಯ ಡಾ.ರಾಮಚಂದ್ರ ತಾನೇ ಬಿಟ್ಟು ಬರುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದಿದ್ದ. ಮಾರ್ಗಮಧ್ಯೆ ಅತ್ತೆಯನ್ನು ಬಟ್ಟೆಯಿಂದ ಉರುಳು ಬಿಗಿದು ಕೊಲೆ ಮಾಡಿ ಊರ್ಡಿಗೆರೆ ಹೋಬಳಿ ಹೊಸಪಾಳ್ಯದ ಬಳಿಯ ಸ್ನೇಹಿತ ಸತೀಶ್ನ ತೋಟಕ್ಕೆ ಶವ ಸಹಿತ ಕಾರಿನಲ್ಲಿ ತೆರಳಿದ್ದ. ಶವವನ್ನು ಎಲ್ಲಿಯಾದರೂ ಎಸೆದರೆ ಅಥವಾ ಕೆರೆಗೆ ಹಾಕಿದರೆ ತೇಲುವುದರಿಂದ ಪೊಲೀಸರಿಗೆ ಸುಲಭದಲ್ಲಿ ಪತ್ತೆಯಾಗುತ್ತದೆಂದು ದೇಹವನ್ನು ತುಂಡರಿಸಲು ಪ್ಲಾನ್ ಮಾಡಿದ್ದಾರೆ.
ಶವ ಕೊಳೆಯುವ ಸ್ಥಿತಿ ತಲುಪಿದಾಗ ಆ.6ರಂದು ತುಂಡು ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್ನಲ್ಲಿ ಕಟ್ಟಿ ಕೊರಟಗೆರೆಯ 19 ಕಡೆಗಳಲ್ಲಿ ಎಸೆದಿದ್ದಾರೆ. ಕೃತ್ಯಕ್ಕೆ ಇನ್ನೊಬ್ಬ ಸ್ನೇಹಿತ ಕಿರಣ್ ಕೂಡ ಸಾಥ್ ನೀಡಿದ್ದ. ಕೆರೆಗೆ ಬಿಸಾಕಿದರೆ ಶವದ ತುಂಡುಗಳು ತೇಲುತ್ತವೆಂದು ಪೀಸ್ಗಳನ್ನು ಕಟ್ಟಿ ಕರೆಗೆ ಹಾಕಿದ್ದರು.
ಅನೈತಿಕ ಸಂಬಂಧ ಶಂಕೆಯಿಂದ ಹತ್ಯೆ
ಲಕ್ಷ್ಮೀದೇವಮ್ಮ ಆಗಾಗ್ಗೆ ಅಳಿಯ ಡಾ.ರಾಮಚಂದ್ರನ ಮನೆಗೆ ಬರುತ್ತಿದ್ದರು. ಅಲ್ಲದೆ ಪದೇ ಪದೇ ಮಗಳನ್ನು ತನ್ನೂರು ಬೆಳ್ಳಾವಿಗೆ ಕರೆದುಕೊಂಡು ಹೋಗುತ್ತಿದ್ದರು. ಅತ್ತೆ ಅನೈತಿಕ ಚಟುವಟಿಕೆಗಾಗಿಯೇ ತನ್ನ ಪತ್ನಿಯನ್ನು ಕರೆದುಕೊಂಡು ಹೋಗುತ್ತಿದ್ದಾರೆಂದು ಶಂಕಿಸಿದ್ದ ರಾಮಚಂದ್ರ, ಅತ್ತೆಯ ಕೊಲೆಗೆ 6 ತಿಂಗಳ ಹಿಂದೆಯೇ ನಿರ್ಧರಿಸಿದ್ದ. ಅಲ್ಲದೆ, ಇದಕ್ಕಾಗಿ ಹೊಸ ಕಾರನ್ನು ಖರೀದಿಸಿದ್ದ.
ಆ.3ರಂದು ಲಕ್ಷ್ಮೀದೇವಮ್ಮ ಮಗಳ ಮನೆಗೆ ಹೋಗಿ ಬರುವುದಾಗಿ ಹೇಳಿದ್ದವರು ವಾಪಸ್ ಬಂದಿಲ್ಲವೆಂದು ಇತ್ತ ಪತಿ ಬಸವರಾಜು ಬೆಳ್ಳಾವಿ ಠಾಣೆಗೆ ದೂರು ನೀಡಿದ್ದರು. ಇದೇ ವೇಳೆ, ಲಕ್ಷ್ಮೀದೇವಮ್ಮನ ತಲೆಯ ಭಾಗ ಪತ್ತೆಯಾದಾಗ ಕೊಲೆಯಾಗಿರುವುದು ಆಕೆಯೇ ಎಂಬುದು ಖಚಿತವಾಗಿತ್ತು. ಶವದ ಭಾಗಗಳು ಪತ್ತೆಯಾದ ಸ್ಥಳದ ಸಿಸಿಟಿವಿ ಪರಿಶೀಲಿಸಿದಾಗ ಒಂದೇ ಕಾರು ಅಲ್ಲಿ ಸಂಚರಿಸಿದ್ದು ಪತ್ತೆಯಾಗಿದೆ. ಆ ಕಾರು ಸತೀಶನ ಹೆಸರಲ್ಲಿದ್ದುದರಿಂದ ತನಿಖೆಗಾಗಿ ಪೊಲೀಸರು ಆತನ ಮೊಬೈಲ್ ನಂಬರ್ ಟ್ರೇಸ್ ಮಾಡಿದ್ದಾರೆ. ಸತೀಶ್ ಮತ್ತು ಕಿರಣ್ ಹೊರನಾಡಲ್ಲಿರುವುದು ತಿಳಿದು ಅಲ್ಲಿಂದ ಅವರನ್ನು ಕರೆ ತಂದಿದ್ದಾರೆ. ಈ ವೇಳೆ ಡಾ.ರಾಮಚಂದ್ರ ಕೊಲೆ ಮಾಡಿರುವುದು ತಿಳಿದು ಆತನನನ್ನು ಬಂಧಿಸಿ ವಿಚಾರಿಸಿದಾಗ ಸತ್ಯ ಬಯಲಾಗಿದೆ.
Tumakuru police have cracked a gruesome murder case in Koratagere, where a dentist allegedly killed his mother-in-law, dismembered her body into 19 pieces, and scattered them across different locations. Three people, including the prime accused Dr. Ramachandra, have been arrested.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm