ಬ್ರೇಕಿಂಗ್ ನ್ಯೂಸ್
12-08-25 12:36 pm Bangalore Correspondent ಕ್ರೈಂ
ಬೆಂಗಳೂರು, ಆ.12 : ತುಮಕೂರು ತಾಲೂಕಿನ ಕೊರಟಗೆರೆಯಲ್ಲಿ ಅತ್ತೆಯನ್ನು ಅಳಿಯನೇ ಕೊಲೆಗೈದು ಶವ ಕತ್ತರಿಸಿ 19 ಕಡೆಗಳಲ್ಲಿ ಎಸೆದಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ದಂತ ವೈದ್ಯ ಡಾ.ರಾಮಚಂದ್ರ ಸೇರಿ ಮೂವರನ್ನು ಬಂಧಿಸಿದ್ದಾರೆ. ಡಾ.ರಾಮಚಂದ್ರನೇ ತನ್ನ ಅತ್ತೆ ಲಕ್ಷ್ಮೀದೇವಮ್ಮ ಅವರನ್ನು ಹತ್ಯೆಗೈದು 19 ತುಂಡುಗಳನ್ನಾಗಿಸಿ ಎಸೆದಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ಪ್ರಮುಖ ಆರೋಪಿ ಡಾ.ರಾಮಚಂದ್ರನಿಗೆ ಸಹಕರಿಸಿದ್ದ ಕಲ್ಲಹಳ್ಳಿಯ ಸತೀಶ್ ಕೆ.ಎನ್. ಮತ್ತು ಕಿರಣ್ ಕೆ.ಎಸ್. ಎಂಬವರನ್ನು ಬಂಧಿಸಲಾಗಿದೆ ಎಂದು ತುಮಕೂರು ಜಿಲ್ಲೆಯ ಎಸ್ಪಿ ಅಶೋಕ್ ಕೆ.ವಿ. ಮಾಹಿತಿ ನೀಡಿದರು. ''ಬೆಳ್ಳಾವಿಯ ಲಕ್ಷ್ಮೀದೇವಮ್ಮ ಆಗಸ್ಟ್ 3ರಂದು ತುಮಕೂರಿನ ಕುವೆಂಪುನಗರದ ತನ್ನ ಮಗಳ ಮನೆಗೆ ಬಂದಿದ್ದರು. ವಾಪಸ್ ಹೊರಟಾಗ ಅಳಿಯ ಡಾ.ರಾಮಚಂದ್ರ ತಾನೇ ಬಿಟ್ಟು ಬರುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದಿದ್ದ. ಮಾರ್ಗಮಧ್ಯೆ ಅತ್ತೆಯನ್ನು ಬಟ್ಟೆಯಿಂದ ಉರುಳು ಬಿಗಿದು ಕೊಲೆ ಮಾಡಿ ಊರ್ಡಿಗೆರೆ ಹೋಬಳಿ ಹೊಸಪಾಳ್ಯದ ಬಳಿಯ ಸ್ನೇಹಿತ ಸತೀಶ್ನ ತೋಟಕ್ಕೆ ಶವ ಸಹಿತ ಕಾರಿನಲ್ಲಿ ತೆರಳಿದ್ದ. ಶವವನ್ನು ಎಲ್ಲಿಯಾದರೂ ಎಸೆದರೆ ಅಥವಾ ಕೆರೆಗೆ ಹಾಕಿದರೆ ತೇಲುವುದರಿಂದ ಪೊಲೀಸರಿಗೆ ಸುಲಭದಲ್ಲಿ ಪತ್ತೆಯಾಗುತ್ತದೆಂದು ದೇಹವನ್ನು ತುಂಡರಿಸಲು ಪ್ಲಾನ್ ಮಾಡಿದ್ದಾರೆ.
ಶವ ಕೊಳೆಯುವ ಸ್ಥಿತಿ ತಲುಪಿದಾಗ ಆ.6ರಂದು ತುಂಡು ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್ನಲ್ಲಿ ಕಟ್ಟಿ ಕೊರಟಗೆರೆಯ 19 ಕಡೆಗಳಲ್ಲಿ ಎಸೆದಿದ್ದಾರೆ. ಕೃತ್ಯಕ್ಕೆ ಇನ್ನೊಬ್ಬ ಸ್ನೇಹಿತ ಕಿರಣ್ ಕೂಡ ಸಾಥ್ ನೀಡಿದ್ದ. ಕೆರೆಗೆ ಬಿಸಾಕಿದರೆ ಶವದ ತುಂಡುಗಳು ತೇಲುತ್ತವೆಂದು ಪೀಸ್ಗಳನ್ನು ಕಟ್ಟಿ ಕರೆಗೆ ಹಾಕಿದ್ದರು.
ಅನೈತಿಕ ಸಂಬಂಧ ಶಂಕೆಯಿಂದ ಹತ್ಯೆ
ಲಕ್ಷ್ಮೀದೇವಮ್ಮ ಆಗಾಗ್ಗೆ ಅಳಿಯ ಡಾ.ರಾಮಚಂದ್ರನ ಮನೆಗೆ ಬರುತ್ತಿದ್ದರು. ಅಲ್ಲದೆ ಪದೇ ಪದೇ ಮಗಳನ್ನು ತನ್ನೂರು ಬೆಳ್ಳಾವಿಗೆ ಕರೆದುಕೊಂಡು ಹೋಗುತ್ತಿದ್ದರು. ಅತ್ತೆ ಅನೈತಿಕ ಚಟುವಟಿಕೆಗಾಗಿಯೇ ತನ್ನ ಪತ್ನಿಯನ್ನು ಕರೆದುಕೊಂಡು ಹೋಗುತ್ತಿದ್ದಾರೆಂದು ಶಂಕಿಸಿದ್ದ ರಾಮಚಂದ್ರ, ಅತ್ತೆಯ ಕೊಲೆಗೆ 6 ತಿಂಗಳ ಹಿಂದೆಯೇ ನಿರ್ಧರಿಸಿದ್ದ. ಅಲ್ಲದೆ, ಇದಕ್ಕಾಗಿ ಹೊಸ ಕಾರನ್ನು ಖರೀದಿಸಿದ್ದ.
ಆ.3ರಂದು ಲಕ್ಷ್ಮೀದೇವಮ್ಮ ಮಗಳ ಮನೆಗೆ ಹೋಗಿ ಬರುವುದಾಗಿ ಹೇಳಿದ್ದವರು ವಾಪಸ್ ಬಂದಿಲ್ಲವೆಂದು ಇತ್ತ ಪತಿ ಬಸವರಾಜು ಬೆಳ್ಳಾವಿ ಠಾಣೆಗೆ ದೂರು ನೀಡಿದ್ದರು. ಇದೇ ವೇಳೆ, ಲಕ್ಷ್ಮೀದೇವಮ್ಮನ ತಲೆಯ ಭಾಗ ಪತ್ತೆಯಾದಾಗ ಕೊಲೆಯಾಗಿರುವುದು ಆಕೆಯೇ ಎಂಬುದು ಖಚಿತವಾಗಿತ್ತು. ಶವದ ಭಾಗಗಳು ಪತ್ತೆಯಾದ ಸ್ಥಳದ ಸಿಸಿಟಿವಿ ಪರಿಶೀಲಿಸಿದಾಗ ಒಂದೇ ಕಾರು ಅಲ್ಲಿ ಸಂಚರಿಸಿದ್ದು ಪತ್ತೆಯಾಗಿದೆ. ಆ ಕಾರು ಸತೀಶನ ಹೆಸರಲ್ಲಿದ್ದುದರಿಂದ ತನಿಖೆಗಾಗಿ ಪೊಲೀಸರು ಆತನ ಮೊಬೈಲ್ ನಂಬರ್ ಟ್ರೇಸ್ ಮಾಡಿದ್ದಾರೆ. ಸತೀಶ್ ಮತ್ತು ಕಿರಣ್ ಹೊರನಾಡಲ್ಲಿರುವುದು ತಿಳಿದು ಅಲ್ಲಿಂದ ಅವರನ್ನು ಕರೆ ತಂದಿದ್ದಾರೆ. ಈ ವೇಳೆ ಡಾ.ರಾಮಚಂದ್ರ ಕೊಲೆ ಮಾಡಿರುವುದು ತಿಳಿದು ಆತನನನ್ನು ಬಂಧಿಸಿ ವಿಚಾರಿಸಿದಾಗ ಸತ್ಯ ಬಯಲಾಗಿದೆ.
Tumakuru police have cracked a gruesome murder case in Koratagere, where a dentist allegedly killed his mother-in-law, dismembered her body into 19 pieces, and scattered them across different locations. Three people, including the prime accused Dr. Ramachandra, have been arrested.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm