ಬ್ರೇಕಿಂಗ್ ನ್ಯೂಸ್
13-08-25 04:14 pm HK News Desk ಕ್ರೈಂ
ಬೆಳಗಾವಿ, ಆ.13 : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹೆಸರಲ್ಲಿ ನಕಲಿ ಸಹಿ ಮಾಡಿರುವ ದಾಖಲೆ ಸೃಷ್ಟಿಸಿ ಉದ್ಯೋಗ ನೀಡುವುದಾಗಿ ಹೇಳಿ ಹಲವರಿಂದ ಕೋಟ್ಯಾಂತರ ರುಪಾಯಿ ಪಡೆದು ವಂಚಿಸಿರುವ ಬಗ್ಗೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖುದ್ದು ಸಚಿವೆ ಲಕ್ಷ್ಮೀ ಹೆಬ್ಬಾಳರ್ ಅವರೇ ತಮ್ಮ ಸಹ ನಕಲಿ ಮಾಡಿ ಸೃಷ್ಟಿಸಿರುವ ಸುಳ್ಳು ದಾಖಲೆಗಳ ಸಮೇತ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತನಿಖೆ ಕೈಗೊಳ್ಳುವಂತೆ ದೂರು ನೀಡಿ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಲಕ್ಷಾಂತರ ರು. ಹಣ ಕಳೆದುಕೊಂಡು ವಂಚನೆಗೆ ಒಳಗಾದವರು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಮಂಜುನಾಥ ಮಲ್ಲಸರ್ಜ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೈಲಹೊಂಗಲ ತಾಲೂಕಿನ ನೇಗಿನಾಳ ಗ್ರಾಮದ ವಿಠಲ ಪಡದಪ್ಪನವರ ಎಂಬಾತ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೆಳಗಾವಿಯ ದಾಸ್ತಿಕೊಪ್ಪ ಗ್ರಾಮದ ಮಂಜುನಾಥ ಮಲ್ಲಸರ್ಜ ಎಂಬಾತ ನೌಕರಿ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ್ದಾರೆ ಎಂದು ದೂರಿದ್ದಾರೆ. ಕಾವ್ಯಾ ಯಳ್ಳೂರು ಎಂಬವರು ಕೂಡ ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಮಂಜುನಾಥ ಮಲ್ಲಸರ್ಜ ಎಂವಾತ 15ಕ್ಕೂ ಅಧಿಕ ಜನರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಹುದ್ದೆ ಭರ್ತಿ ಮಾಡುವುದಾಗಿ ಹೇಳಿ ಸುಮಾರು 32 ಲಕ್ಷ ರು. ವಂಚನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ತನಿಖೆಗೆ ಸಚಿವೆ ಹೆಬ್ಬಾಳ್ಳರ್ ಆಗ್ರಹ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ತಮ್ಮ ಹಾಗೂ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಸಹಿ ಮಾಡಿ ಹಣ ವಸೂಲಿ ಮಾಡಿರುವ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ದಾಖಲೆ ಸಹಿತ ದೂರು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆಯಾದ ನನ್ನ ಹಾಗೂ ಇಲಾಖೆಯ ಅಧಿಕಾರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕೆಲ ವ್ಯಕ್ತಿಗಳು ಹಣ ವಸೂಲು ಮಾಡಿದ್ದು ಬೆಳಕಿಗೆ ಬಂದಿದೆ. ಈ ಕುರಿತು ಸಾಕ್ಷ್ಯಾಧಾರಗಳನ್ನು ನೀಡಿದ್ದೇನೆ. ನಕಲಿ ಸಹಿ ಮಾಡಿ ನೇಮಕಾತಿ ಆದೇಶ ವಿತರಿಸಿದ್ದು ಪ್ರಕರಣದ ಕುರಿತು ತನಿಖೆ ಕೈಗೊಳ್ಳುವಂತೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೆದ್ ಅವರಿಗೆ ಮನವಿ ಮಾಡಿದ್ದಾರೆ.
A major fraud case has been registered at Kittur Police Station, where miscreants allegedly forged documents using the name and fake signature of Women and Child Development Minister Laxmi Hebbalkar and Governor Thawar Chand Gehlot, promising government jobs and collecting crores of rupees from several individuals.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am