ಬ್ರೇಕಿಂಗ್ ನ್ಯೂಸ್
13-08-25 04:14 pm HK News Desk ಕ್ರೈಂ
ಬೆಳಗಾವಿ, ಆ.13 : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹೆಸರಲ್ಲಿ ನಕಲಿ ಸಹಿ ಮಾಡಿರುವ ದಾಖಲೆ ಸೃಷ್ಟಿಸಿ ಉದ್ಯೋಗ ನೀಡುವುದಾಗಿ ಹೇಳಿ ಹಲವರಿಂದ ಕೋಟ್ಯಾಂತರ ರುಪಾಯಿ ಪಡೆದು ವಂಚಿಸಿರುವ ಬಗ್ಗೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖುದ್ದು ಸಚಿವೆ ಲಕ್ಷ್ಮೀ ಹೆಬ್ಬಾಳರ್ ಅವರೇ ತಮ್ಮ ಸಹ ನಕಲಿ ಮಾಡಿ ಸೃಷ್ಟಿಸಿರುವ ಸುಳ್ಳು ದಾಖಲೆಗಳ ಸಮೇತ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತನಿಖೆ ಕೈಗೊಳ್ಳುವಂತೆ ದೂರು ನೀಡಿ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಲಕ್ಷಾಂತರ ರು. ಹಣ ಕಳೆದುಕೊಂಡು ವಂಚನೆಗೆ ಒಳಗಾದವರು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಮಂಜುನಾಥ ಮಲ್ಲಸರ್ಜ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೈಲಹೊಂಗಲ ತಾಲೂಕಿನ ನೇಗಿನಾಳ ಗ್ರಾಮದ ವಿಠಲ ಪಡದಪ್ಪನವರ ಎಂಬಾತ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೆಳಗಾವಿಯ ದಾಸ್ತಿಕೊಪ್ಪ ಗ್ರಾಮದ ಮಂಜುನಾಥ ಮಲ್ಲಸರ್ಜ ಎಂಬಾತ ನೌಕರಿ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ್ದಾರೆ ಎಂದು ದೂರಿದ್ದಾರೆ. ಕಾವ್ಯಾ ಯಳ್ಳೂರು ಎಂಬವರು ಕೂಡ ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಮಂಜುನಾಥ ಮಲ್ಲಸರ್ಜ ಎಂವಾತ 15ಕ್ಕೂ ಅಧಿಕ ಜನರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಹುದ್ದೆ ಭರ್ತಿ ಮಾಡುವುದಾಗಿ ಹೇಳಿ ಸುಮಾರು 32 ಲಕ್ಷ ರು. ವಂಚನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ತನಿಖೆಗೆ ಸಚಿವೆ ಹೆಬ್ಬಾಳ್ಳರ್ ಆಗ್ರಹ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ತಮ್ಮ ಹಾಗೂ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಸಹಿ ಮಾಡಿ ಹಣ ವಸೂಲಿ ಮಾಡಿರುವ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ದಾಖಲೆ ಸಹಿತ ದೂರು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆಯಾದ ನನ್ನ ಹಾಗೂ ಇಲಾಖೆಯ ಅಧಿಕಾರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕೆಲ ವ್ಯಕ್ತಿಗಳು ಹಣ ವಸೂಲು ಮಾಡಿದ್ದು ಬೆಳಕಿಗೆ ಬಂದಿದೆ. ಈ ಕುರಿತು ಸಾಕ್ಷ್ಯಾಧಾರಗಳನ್ನು ನೀಡಿದ್ದೇನೆ. ನಕಲಿ ಸಹಿ ಮಾಡಿ ನೇಮಕಾತಿ ಆದೇಶ ವಿತರಿಸಿದ್ದು ಪ್ರಕರಣದ ಕುರಿತು ತನಿಖೆ ಕೈಗೊಳ್ಳುವಂತೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೆದ್ ಅವರಿಗೆ ಮನವಿ ಮಾಡಿದ್ದಾರೆ.
A major fraud case has been registered at Kittur Police Station, where miscreants allegedly forged documents using the name and fake signature of Women and Child Development Minister Laxmi Hebbalkar and Governor Thawar Chand Gehlot, promising government jobs and collecting crores of rupees from several individuals.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm