ಬ್ರೇಕಿಂಗ್ ನ್ಯೂಸ್
16-08-25 10:20 am Mangalore Correspondent ಕ್ರೈಂ
ಮಂಗಳೂರು, ಆ.16 : ಕೇರಳದಲ್ಲಿ ಚಿನ್ನದ ಮಳಿಗೆ ಹೊಂದಿರುವ ಚಿನ್ನದ ವ್ಯಾಪಾರಿಯೊಬ್ಬರನ್ನು ತಂಡವೊಂದು ಮಂಗಳೂರಿನಲ್ಲಿ ಅಪಹರಿಸಿ ಅವರಿಂದ ಸುಮಾರು 350 ಗ್ರಾಂ ಚಿನ್ನವನ್ನು ದರೋಡೆಗೈದ ಘಟನೆ ನಡೆದಿದ್ದು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ಮೂಲದ ಚಿನ್ನದ ವ್ಯಾಪಾರಿ ಶ್ರೀಹರಿ ದರೋಡೆಗೊಳಗಾದವರು.
ಶ್ರೀಹರಿ ಅವರು ಆ.13ರ ಬುಧವಾರ ಬೆಳಗ್ಗೆ 7 ಗಂಟೆ ಸುಮಾರಿಗೆ 350 ಗ್ರಾಂ ಚಿನ್ನದ ಗಟ್ಟಿಯನ್ನು ಹಿಡಿದು ರೈಲಿನ ಮೂಲಕ ಕೇರಳದಿಂದ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದರು. ರೈಲು ನಿಲ್ದಾಣದಿಂದ ಹೊರಬಂದು ಕೈರಲಿ ಹೋಟೆಲ್ ಬಳಿ ಆಟೋವೊಂದಕ್ಕೆ ಕಾಯುತ್ತಿದ್ದಾಗ ಇನೋವಾ ಕಾರಿನಲ್ಲಿ ಆಗಮಿಸಿದ ತಂಡ ಶ್ರೀಹರಿ ಅವರ ಬಳಿ ನಾವು ಕಸ್ಟಮ್ಸ್ ಅಧಿಕಾರಿಗಳು, ನಿಮ್ಮನ್ನು ಪರಿಶೀಲನೆ ಮಾಡಲು ಬಂದಿದ್ದೇವೆ. ಕಾರಿನಲ್ಲಿ ಕುಳಿತುಕೊಳ್ಳಿ ಎಂದು ಗದರಿಸಿದ್ದಾರೆ.
ಇದಕ್ಕೆ ಚಿನ್ನದ ವ್ಯಾಪಾರಿ ಒಪ್ಪದಿದ್ದಾಗ ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿ ಕರೆದೊಯ್ದಿದ್ದಾರೆ. ಉಡುಪಿ ಮೂಲಕ ಕುಮಟಾ ಶಿರಸಿಗೆ ಕರೆದುಕೊಂಡು ಹೋಗಿದ್ದು ಸುಮಾರು 35 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನದ ಗಟ್ಟಿ ದರೋಡೆ ಮಾಡಿದ್ದಾರೆ. ಬಳಿಕ ಚಿನ್ನದ ವ್ಯಾಪಾರಿಯನ್ನು ಶಿರಸಿಯ ಅಂತ್ರವಳ್ಳಿ ಎಂಬ ಊರಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಘಟನೆಯಿಂದ ಆಘಾತಕ್ಕೊಳಗಾದ ಚಿನ್ನದ ವ್ಯಾಪಾರಿ ಬಳಿಕ ಮಂಗಳೂರಿಗೆ ಬಂದು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಚಿನ್ನದ ವ್ಯಾಪಾರಿ ದರೋಡೆಗೆ ಸಂಬಂಧಿಸಿ ತನಿಖೆ ಕೈಗೆತ್ತಿಕೊಂಡ ಪಾಂಡೇಶ್ವರ ಪೊಲೀಸರಿಗೆ ಆರೋಪಿಗಳ ಬಗ್ಗೆ ಬಲವಾದ ಸಾಕ್ಷ್ಯ ಲಭಿಸಿದ್ದು, ತಂಡವನ್ನು ಬಲೆಗೆ ಕೆಡಹುವ ಸಾಧ್ಯತೆಯಿದೆ. ಶ್ರೀಹರಿ ಅವರ ಚಲನಚಲನದ ಬಗ್ಗೆ ಗೊತ್ತಿರುವ ವ್ಯಕ್ತಿಗಳೇ ಈ ದರೋಡೆ ನಡೆಸಿರುವ ಸಾಧ್ಯತೆಯಿದ್ದು ಪೊಲೀಸರು ಸಿಸಿಟಿವಿ ಇನ್ನಿತರ ಮಾಹಿತಿ ಆಧರಿಸಿ ತನಿಖೆ ಕೈಗೊಂಡಿದ್ದಾರೆ.
ಬಿಎಚ್ ನೋಂದಣಿ ಕಾರು ಬಳಕೆ !
ದರೋಡೆಕೋರರು ಕೃತ್ಯದ ಸಂದರ್ಭದಲ್ಲಿ ಬಿಎಚ್ ನೋಂದಣಿ ಸಂಖ್ಯೆಯ ಕಾರು ಬಳಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಬಿಎಚ್ ನೋಂದಣಿ ಭಾರತ ಸರಕಾರವು ಹೊಸತಾಗಿ ಆರಂಭಿಸಿದ್ದ ವ್ಯವಸ್ಥೆಯಾಗಿದ್ದು, ವಾಹನ ಮಾಲೀಕರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ತೆರಳಿದಾಗ ವಾಹನ ಮರು ನೋಂದಣಿಯ ತೊಂದರೆ ತಪ್ಪಿಸಲು ಅನುಷ್ಠಾನ ಮಾಡಲಾಗಿದೆ. ಅಲ್ಲದೆ ರಾಷ್ಟ್ರ ಮಟ್ಟದಲ್ಲಿ ಕಾರಿನ ವಾರೀಸುದಾರರು, ಮೂಲವನ್ನು ಸುಲಭವಾಗಿ ಪತ್ತೆಹಚ್ಚಬಹುದು. ಕೇಂದ್ರ, ರಾಜ್ಯ ಸರಕಾರಿ ನೌಕರರು, ನಾನಾ ರಾಜ್ಯದಲ್ಲಿ ಉದ್ಯಮ ಕಚೇರಿಗಳನ್ನು ಹೊಂದಿರುವವರು ಬಿಎಚ್ ನಂಬರ್ ವಾಹನ ಪಡೆಯಲು ಅವಕಾಶವಿರುತ್ತದೆ. ಹೀಗಿರುವಾಗ ದರೋಡೆ ಬಳಸಿದ ಕಾರು ಯಾರದ್ದು? ನಂಬರ್ ನಕಲಿಯೇ ಎಂಬ ಅನುಮಾನ ಬಂದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A trader, who owns a gold shop in Kerala, was abducted from Mangaluru in a car by a gang and robbed of around 350 grams of gold on Wednesday. Srihari, a gold merchant and a native of Kerala, was the victim of the robbery. They were let off by the robbers after committing the robbery. Srihari has lodged a complaint with the police and the police are investigating.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am