ಬ್ರೇಕಿಂಗ್ ನ್ಯೂಸ್
19-08-25 12:41 pm Mangalore Correspondent ಕ್ರೈಂ
ಉಳ್ಳಾಲ, ಆ.19: ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಬ್ರಾಂಡ್ ನ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸುತ್ತಿದ್ದ ತೊಕ್ಕೊಟ್ಟು ಹೃದಯಭಾಗದ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ "ಸ್ಪೋರ್ಟ್ಸ್ ವಿನ್ನರ್" ಮಳಿಗೆಗೆ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಸಿ ವಿಜಯಕ್ರಾಂತಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ನಕಲಿ ಉತ್ಪನ್ನಗಳನ್ನ ಜಪ್ತಿ ಮಾಡಿದೆ.
ಕ್ರೀಡೆಗೆ ಸಂಬಂಧಿತ ಉತ್ಪನ್ನಗಳನ್ನ ಮಾರಾಟ ಮಾಡುತ್ತಿರುವ ತೊಕ್ಕೊಟ್ಟಿನ ಸ್ಪೋರ್ಟ್ಸ್ ವಿನ್ನರ್ ಮಳಿಗೆಯಲ್ಲಿ ಪ್ರತಿಷ್ಟಿತ ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಕಂಪನಿಯ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸಲಾಗುತ್ತಿದೆ ಎಂದು ಹರ್ಯಾಣದ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ. ಲಿಮಿಟೆಡ್ನ ಸಿಬ್ಬಂದಿ ಸ್ಟೀಫನ್ ರಾಜ್ ಎಂಬವರು ಸೋಮವಾರ ಉಳ್ಳಾಲ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದರು. ಸ್ಟೀಫನ್ ರಾಜ್ ಅವರ ದೂರಿನ ಮೇರೆಗೆ ಖುದ್ದು ಎಸಿಪಿ ವಿಜಯಕ್ರಾಂತಿ ಅವರೇ ಸೋಮವಾರ ಸಂಜೆ ಪೊಲೀಸರ ತಂಡದೊಂದಿಗೆ ಮಳಿಗೆಗೆ ದಾಳಿ ನಡೆಸಿ ನಕಲಿ ಬ್ರಾಂಡ್ ಉತ್ಪನ್ನಗಳನ್ನ ಜಪ್ತಿಗೊಳಿಸಿದ್ದಾರೆ.




ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರು ಪ್ರತಿಷ್ಟಿತ ಕಂಪನಿಗಳ ಹೆಸರಿನ ನಕಲಿ ಉತ್ಪನ್ನಗಳನ್ನ ಮಾರಾಟ ಮಾಡಿ ಗ್ರಾಹಕರಿಗೆ ಮೋಸ ಮಾಡಿ ಹಣ ಸಂಪಾದಿಸುತ್ತಿರುವ ಬಗ್ಗೆ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ.(ಲಿ)ಗೆ ಮಾಹಿತಿ ಲಭಿಸಿತ್ತು ಎನ್ನಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯ ನಿರೀಕ್ಷಕರಾದ ವಿರೂಪಾಕ್ಷ ಸ್ವಾಮಿ ಮತ್ತು ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರ ವಿರುದ್ಧ ಕಾಪಿರೈಟ್ ಆಕ್ಟ್ 1957 (U/s-51(1)(b) 63 ಕಲಂನಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
In a major crackdown on counterfeit sports goods, the Mangaluru South police, led by ACP Vijayakranti, raided the "Sports Winners" store located in the Smart City building at the heart of Thokottu and seized fake products bearing the names of reputed brands—Nivia, Cosco, Yonex, and VIVA.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am