ಬ್ರೇಕಿಂಗ್ ನ್ಯೂಸ್
19-08-25 09:27 pm Bangalore Correspondent ಕ್ರೈಂ
ಬೆಂಗಳೂರು, ಆ 19 : ವೈದ್ಯೆಯ ಮನೆಯಲ್ಲಿ ಚಿನ್ನಾಭರಣ ಹಾಗೂ ದುಬಾರಿ ವಸ್ತುಗಳನ್ನ ಕಳ್ಳತನ ಮಾಡಿದ್ದ ಮನೆ ಕೆಲಸದಾಕೆ ಸೇರಿದಂತೆ ಇಬ್ಬರನ್ನ ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಕಾಕಿನಾಡ ಮೂಲದ ದುರ್ಗಾ ಅನ್ನಾರೆಡ್ಡಿ ಬಂಧಿತ ಆರೋಪಿ. ಆಕೆಯಿಂದ ಡೈಮಂಡ್ ಮತ್ತು ಚಿನ್ನದ ಆಭರಣಗಳು, ಬೆಳ್ಳಿಯ ವಸ್ತು, ಮೊಬೈಲ್ ಫೋನ್ ಹಾಗೂ ಬೆಲೆ ಬಾಳುವ ವಾಚ್ಗಳು ಸೇರಿದಂತೆ 22 ಲಕ್ಷ ರೂ. ಮೌಲ್ಯದ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಯನಗರ 1ನೇ ಬ್ಲಾಕ್ನಲ್ಲಿ ವಾಸವಿದ್ದ ಖಾಸಗಿ ಆಸ್ಪತ್ರೆಯ ವೈದ್ಯೆಯೊಬ್ಬರು ಕಳೆದ ಒಂದೂವರೆ ವರ್ಷದ ಹಿಂದೆ ಆಂಧ್ರಪ್ರದೇಶ ಮೂಲದ ಏಜೆನ್ಸಿಯೊಂದರ ಮೂಲಕ ದುರ್ಗಾ ಅನ್ನಾರೆಡ್ಡಿಯನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಇತ್ತೀಚಿಗೆ ಅನಾರೋಗ್ಯಕ್ಕೀಡಾಗಿದ್ದ ಮನೆ ಮಾಲೀಕರಿಗೆ ಆಗಾಗ ವಿಶ್ರಾಂತಿಯ ಅಗತ್ಯ ಇರುತ್ತಿತ್ತು. ಜುಲೈ 28ರಂದು ಅದೇ ರೀತಿ ವಿಶ್ರಾಂತಿ ಪಡೆದು ಸಂಜೆ ಎದ್ದು ನೋಡಿದಾಗ ಮನೆ ಕೆಲಸದಾಕೆ ದುರ್ಗಾ ಕಾಣಿಸಿರಲಿಲ್ಲ. ಕರೆ ಮಾಡಿದಾಗ ಆಕೆಯ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಅನುಮಾನಗೊಂಡು ಮನೆಯಲ್ಲಿರುವ ಕಬೋರ್ಡ್ ನೋಡಿದಾಗ ಡೈಮಂಡ್, ಚಿನ್ನಾಭರಣ, ಬೆಳ್ಳಿಯ ವಸ್ತುಗಳು, ಮೊಬೈಲ್ ಫೋನ್ಗಳು, ಬೆಲೆಬಾಳುವ ವಾಚ್ಗಳು ಕಾಣೆಯಾಗಿದ್ದವು. ತಕ್ಷಣ ಅವರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ತನಿಖೆ ಕೈಗೊಂಡ ಸಿದ್ದಾಪುರ ಠಾಣೆ ಪೊಲೀಸರು ತೆಲಂಗಾಣದ ನ್ಯೂ ರಂಗಪುರ್ ಗ್ರಾಮದಲ್ಲಿದ್ದ ತನ್ನ ಸಹೋದರಿಯ ಮನೆಯಲ್ಲಿದ್ದ ದುರ್ಗಾಳನ್ನ ಬಂಧಿಸಿದ್ದರು. ವಿಚಾರಣೆಗೊಳಪಡಿಸಿದಾಗ ಕದ್ದ ಕೆಲ ವಸ್ತುಗಳನ್ನ ಆಕೆ ತನ್ನ ಸಹೋದರಿಯ ಗಂಡನ ಮೂಲಕ ಮಾರಾಟ ಮಾಡಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಳು. ಬಳಿಕ ಆರೋಪಿಯ ತಂಗಿಯ ಗಂಡನನ್ನ ಸಹ ಬಂಧಿಸಲಾಗಿದೆ. ಆರೋಪಿಗಳಿಬ್ಬರ ಬಂಧನದಿಂದ ಒಟ್ಟು 5.40 ಗ್ರಾಂ ಡೈಮಂಡ್ ರಿಂಗ್, 10.45 ಗ್ರಾಂ ಡೈಮಂಡ್ ಓಲೆ, 11.50 ಗ್ರಾಂ ಚಿನ್ನಾಭರಣ, 1 ಕೆ.ಜಿ 62 ಗ್ರಾಂ ಬೆಳ್ಳಿಯ ವಸ್ತುಗಳು, 4 ಮೊಬೈಲ್ ಫೋನ್ಗಳು, 5 ಬೆಲೆಬಾಳುವ ವಾಚ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A housemaid who robbed her employer — a doctor residing in Bengaluru — has been arrested by Siddapura Police along with an accomplice. The police have recovered valuables worth ₹22 lakh, including gold and diamond jewellery, silver items, mobile phones, and luxury watches.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am