ಬ್ರೇಕಿಂಗ್ ನ್ಯೂಸ್
25-08-25 04:39 pm Mangalore Correspondent ಕ್ರೈಂ
ಬಂಟ್ವಾಳ, ಆ.25 : ಹೆಸರಾಂತ ರಸಗೊಬ್ಬರ ಉತ್ಪಾದಕ ಸಂಸ್ಥೆಯ ಡೀಲರ್ ಶಿಪ್ ನೀಡುವುದಾಗಿ ನಂಬಿಸಿ ಶುಲ್ಕ ರೂಪದಲ್ಲಿ ಹಂತ ಹಂತವಾಗಿ ಹಣ ಪಡೆದು ಬಂಟ್ವಾಳದ ವ್ಯಕ್ತಿಯೊಬ್ಬರಿಗೆ 17.60 ಲಕ್ಷ ರೂ. ವಂಚಿಸಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳದ ವಿಕ್ರಮ್ ಅವರು ಎಂಜಿನಿಯರಿಂಗ್ ಪದವಿ ಮುಗಿಸಿ ಮನೆಯಲ್ಲೇ ಇದ್ದರು. ಕಳೆದ ಜುಲೈ 4ರಂದು ಅವರ ಮೊಬೈಲ್ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ತಾನು ಹೆಸರಾಂತ ರಸಗೊಬ್ಬರ ಕಂಪೆನಿಯ ರಿಲೇಶನ್ಶಿಪ್ ಮ್ಯಾನೇಜರ್ ನಿಲೇಶ್ ಮಿಶ್ರಾ ಎಂದು ಪರಿಚಯಿಸಿದ್ದು, ಕಂಪನಿಯ ಡೀಲರ್ ಶಿಪ್ ನೀಡುವುದಾಗಿ ನಂಬಿಸಿದ್ದ. ವಿಕ್ರಮ್ ಅದಕ್ಕೆ ಒಪ್ಪಿಗೆ ಸೂಚಿಸಿದ್ದರು. ಬಳಿಕ ಸಂಬಂಧಪಟ್ಟ ಅರ್ಜಿಗಳನ್ನು ಇ-ಮೇಲ್ಗೆ ಕಳುಹಿಸಿದ್ದು ಅದನ್ನು ಭರ್ತಿ ಮಾಡಿ ಬ್ಯಾಂಕ್ ವಿವರ ಸೇರಿ ವೈಯಕ್ತಿಕ ದಾಖಲೆಗಳನ್ನು ನೀಡಿದ್ದರು.
ನೋಂದಣಿ ಶುಲ್ಕವಾಗಿ 35 ಸಾವಿರ ರೂ. ಕಳುಹಿಸಿದ್ದರು. ಆನಂತರ, ಶುಲ್ಕ ರೂಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 17,60,810 ರೂ. ಕಳುಹಿಸುವಂತೆ ಮಾಡಿದ್ದರು. ಕಂಪೆನಿಯ ಉತ್ಪನ್ನಗಳ ಸಾಗಾಟ ಸಮಯದಲ್ಲಿ ಏನಾದರೂ ಸಮಸ್ಯೆಯಾದರೆ ಕರೆ ಮಾಡಿ ಎಂದು ಹೇಳಿ, ರಸಗೊಬ್ಬರ ಕಳಿಸಿಕೊಡುವುದಾಗಿ ವಾಹನ ಚಾಲಕರ ಮೊಬೈಲ್ ಸಂಖ್ಯೆಯನ್ನೂ ವಂಚಕರು ನೀಡಿದ್ದರು. ಆ.8ರಂದು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ನಾವು ಬೆಂಗಳೂರಿಗೆ ಬಂದಿದ್ದು, 10ರಂದು ಮಡಂತ್ಯಾರಿನಲ್ಲಿರುವ ವಿಕ್ರಮ್ ಅವರ ಗೋದಾಮಿಗೆ ಬರುತ್ತೇವೆ ಎಂದು ತಿಳಿಸಿದ್ದರು. ಆದರೆ ಅವರು ಹೇಳಿದಂತೆ ಯಾವುದೇ ವಾಹನ ಬಂದಿರಲಿಲ್ಲ.
ಆ.11ರಂದು ವಿಕ್ರಮ್ ಅವರು ಕರೆ ಮಾಡಿದಾಗ ಎಲ್ಲವೂ ಸ್ವಿಚ್ ಆಫ್ ಆಗಿತ್ತು. ಅವರು ಕೊಟ್ಟಿದ್ದ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿದಾಗ 'ನಿಮ್ಮ ಉತ್ಪನ್ನ ಬರುತ್ತಿದ್ದು, ಅಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಕರೆ ಸಿಗದೇ ಇರಬಹುದು ನಾವು ಅವರಿಗೆ ತಿಳಿಸುತ್ತೇವೆ' ಎಂದು ಹೇಳಿದ್ದರು. ಮುಂದೆ ಯಾವುದೇ ಕರೆ ಬರಲಿಲ್ಲ. ಇವರು ಕರೆ ಮಾಡಿದರೆ ಸ್ವಿಚ್ ಆಫ್ ಎಂಬ ಸಂದೇಶ ಬರುತ್ತಿದೆ. ಈ ಕುರಿತು ಸಂಶಯಗೊಂಡು ಬೇರೆಯವರಲ್ಲಿ ವಿಚಾರಿಸಿದಾಗ ಇದೊಂದು ಮೋಸದ ಜಾಲ ಎಂದು ತಿಳಿದುಬಂದಿದೆ ಎಂದು ಅವರು ಸೆನ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
A young engineering graduate from Bantwal has reportedly been defrauded of ₹17.6 lakh by fraudsters who promised him a dealership with a reputed fertilizer manufacturing company. A case has been registered at the Bantwal Town Police Station.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 08:22 pm
Mangalore Correspondent
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm