ಬ್ರೇಕಿಂಗ್ ನ್ಯೂಸ್
25-08-25 08:29 pm HK News Desk ಕ್ರೈಂ
ಮೈಸೂರು, ಆ.25: ದುಬೈನಲ್ಲಿ ಗಂಡ, ಇತ್ತ ಪತ್ನಿಯ ಲವ್ವಿ ಡವ್ವಿ. ಆದರೆ ಹಳೆ ಪ್ರೇಮಿ ತೆಕ್ಕೆಗೆ ಬಿದ್ದಾಕೆ ದುರಂತ ರೀತಿಯಲ್ಲಿ ಮಸಣ ಸೇರಿದ್ದಾಳೆ. ತಾಯಿ ಮನೆಗೆ ಬಂದಿದ್ದ ಮಹಿಳೆ ತನ್ನ ಮಗುವನ್ನು ಬಿಟ್ಟು ಅತ್ತೆ ಮನೆಗೆ ಹೋಗುತ್ತೇನೆಂದು ಹೇಳಿ ಪ್ರಿಯಕರನೊಂದಿಗೆ ಲಾಡ್ಜ್ ಹೋದವಳು, ಬಂಡೆ ಸಿಡಿಸುವ ಜಿಲೆಟ್ ಕಡ್ಡಿಯಿಂದ ಸಿಡಿದು ಭೀಕರವಾಗಿ ಹತ್ಯೆಯಾಗಿದ್ದಾಳೆ. ಹುಣಸೂರು ತಾಲೂಕಿನ ಗೆರಸನಹಳ್ಳಿ ನಿವಾಸಿ ರಕ್ಷಿತಾ (20) ಹತ್ಯೆಯಾದವಳು.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗೆರಸನಹಳ್ಳಿಯ ರಕ್ಷಿತಾಳನ್ನು ಕೇರಳದ ಸುಭಾಷ್ ಎಂಬಾತನಿಗೆ ಮೂರು ವರ್ಷಗಳ ಹಿಂದಷ್ಟೇ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ 2 ವರ್ಷದ ಮಗು ಕೂಡ ಇದೆ. ಆದರೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸಿದ್ದರಾಜು ಜೊತೆಗಿನ ವಿವಾಹಪೂರ್ವ ಪ್ರೇಮದ ಸಂಬಂಧ ಮದುವೆಯಾದ ಬಳಿಕವೂ ಮುಂದುವರೆದಿತ್ತು. ಕೇರಳದಿಂದ ತವರು ಮನೆಗೆ ಬರ್ತಿದ್ದ ರಕ್ಷಿತಾ ಪ್ರಿಯಕರನ ಜೊತೆ ಸುತ್ತಾಟ ನಡೆಸ್ತಿದ್ದಳು ಎನ್ನಲಾಗಿದೆ. ಕಳೆದ ಶುಕ್ರವಾರ ಕೇರಳದಿಂದ ಬಂದು ಮಗುವನ್ನು ತಾಯಿ ಮನೆಯಲ್ಲಿ ಬಿಟ್ಟು ಕೇರಳದಲ್ಲಿ ಅತ್ತೆಗೆ ಉಷಾರಿಲ್ಲ ಅಂತ ಸುಳ್ಳು ಹೇಳಿ ಮನೆಯಿಂದ ಹೋಗಿದ್ದಳು. ಬಳಿಕ ಪ್ರಿಯಕರ ಸಿದ್ದರಾಜು ಜೊತೆ ಸಾಲಿಗ್ರಾಮ ತಾಲೂಕಿನ ಬೇರ್ಯ ಗ್ರಾಮದ ಎಸ್ ಜಿ ಅರ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ರೂಂ ಪಡೆದಿದ್ದು ಅಲ್ಲಿಯೇ ದುರಂತ ಸಾವಿಗೀಡಾಗಿದ್ದಾಳೆ.

ಹತ್ತಿರದ ಸಂಬಂಧಿಯೂ ಆಗಿರುವ ಸಿದ್ದರಾಜು ಜೊತೆ ಲಾಡ್ಜ್ ನಲ್ಲಿ ಗಲಾಟೆಯಾಗಿದ್ದು ಮೊದಲೇ ಪ್ಲಾನ್ ಮಾಡಿದ್ದಂತೆ ಜಿಲೆಟಿನ್ ಕಡ್ಡಿಯನ್ನ ಆಕೆಯ ಬಾಯಿಗೆ ಇಟ್ಟು ಸ್ಫೋಟ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಸ್ಫೋಟದ ತೀವ್ರತೆಗೆ ರಕ್ಷಿತಾಳ ಮುಖ ಛಿದ್ರವಾಗಿದೆ. ಬಳಿಕ ಮೊಬೈಲ್ ಬ್ಲಾಸ್ಟ್ ಆಗಿದೆ ಎಂದು ಕಥೆ ಕಟ್ಟಿದ್ದ. ಲಾಡ್ಜ್ ಸಿಬ್ಬಂದಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು ಸಾಲಿಗ್ರಾಮ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ಮಾಡಿದ ಮೇಲೆ ಕೊಲೆ ರಹಸ್ಯ ಬೆಳಕಿಗೆ ಬಂದಿದೆ.
In a shocking case involving betrayal, a young woman whose husband is working in Dubai was brutally murdered in a Mysuru lodge using a gelatin explosive stick — typically used for blasting rocks. The gruesome killing was initially passed off as a mobile phone explosion, but police investigations have now uncovered a sinister plot linked to an extramarital affair.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm