ಬ್ರೇಕಿಂಗ್ ನ್ಯೂಸ್
26-08-25 05:24 pm HK News Desk ಕ್ರೈಂ
ನವದೆಹಲಿ, ಆ. 26 : ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯಾಮಾರಿಸಿ ಪಂಜಾಬ್ ಮೂಲದ ಸೈಬರ್ ವಂಚಕರು ಸುಮಾರು 350 ಕೋಟಿಗೂ ಹೆಚ್ಚಿನ ಮೊತ್ತದ ಹಣವನ್ನು ಕಿತ್ತುಕೊಂಡ ಘಟನೆ ನಡೆದಿದ್ದು ಮೂವರು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಪಂಜಾಬಿನಲ್ಲಿ ಬಂಧಿಸಿದ್ದಾರೆ.
ಅಮೃತಸರದಲ್ಲಿ ‘ಡಿಜಿಕಾಪ್ಸ್ ದಿ ಫ್ಯೂಚರ್ ಆಫ್ ಡಿಜಿಟಲ್’ ಹೆಸರಿನಲ್ಲಿ ಆರೋಪಿಗಳು ಕಾಲ್ ಸೆಂಟರ್ ಮಾಡಿಕೊಂಡಿದ್ದರು. 2023ರಿಂದ ಅಮೆರಿಕದ ನಾಗರಿಕರನ್ನು ಗುರಿಯಾಗಿಸಿ, ಅವರ ಕಂಪ್ಯೂಟರ್, ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ಹಣವನ್ನು ಪೀಕಿಸಿದ್ದಾರೆ. ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಮಾಹಿತಿ ಆಧರಿಸಿ ಸಿಬಿಐ ವಂಚಕರ ಜಾಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಜಿಗರ್ ಅಹ್ಮದ್, ಯಶ್ ಖುರಾನಾ ಮತ್ತು ಇಂದರ್ ಜೀತ್ ಸಿಂಗ್ ಬಾಲಿ ಎಂದು ಗುರುತಿಸಲಾಗಿದೆ.
ಆರೋಪಿಗಳು ಮಾಲ್ ಸಾಫ್ಟ್ವೇರ್ ಬಳಸಿಕೊಂಡು ಅಮೆರಿಕದ ಪ್ರಜೆಗಳ ಕಂಪ್ಯೂಟರ್ ಮತ್ತು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದರು. ಬಳಿಕ, ಬ್ಯಾಂಕ್ನಲ್ಲಿರೋ ನಿಮ್ಮ ಹಣಕ್ಕೆ ತೊಂದರೆ ಇದೆ, ಕ್ರಿಪ್ಟೋ ಕರೆನ್ಸಿಗೆ ವರ್ಗಾಯಿಸಿ ಎಂದು ಹೇಳುತ್ತಿದ್ದರು. ಇವರದ್ದೇ ನಿಯಂತ್ರಣದಲ್ಲಿರುವ ಕ್ರಿಪ್ಟೋ ಕರೆನ್ಸಿಗೆ ಬ್ಯಾಂಕ್ ಖಾತೆಯಿಂದ ಹಣವನ್ನು ವರ್ಗಾಯಿಸುತ್ತಿದ್ದಂತೆ ವಂಚಕರು ಅವನ್ನು ಎಗರಿಸುತ್ತಿದ್ದರು. ಅಮೆರಿಕದಿಂದ 40 ಮಿಲಿಯನ್ ಯುಎಸ್ ಡಾಲರ್ (350 ಕೋಟಿ ರು.) ಮೊತ್ತವನ್ನು ಕಿತ್ತುಕೊಂಡಿರುವ ಆರೋಪ ಇದೆ.
ಬಂಧಿತರಿಂದ 54 ಲಕ್ಷ ರೂ., ಎಂಟು ಮೊಬೈಲ್ಗಳು ಮತ್ತು ಲ್ಯಾಪ್ಟಾಪ್ಗಳು ಸೇರಿದಂತೆ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಲಾಗಿದೆ. ಆ.18 ರಂದು ಈ ಸಂಬಂಧ ಎಫ್ಐಆರ್ ದಾಖಲಿಸಲಾಗಿತ್ತು. ಬಳಿಕ ಸಿಬಿಐ ಅಧಿಕಾರಿಗಳು ಅಮೃತಸರ ಮತ್ತು ದೆಹಲಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಅಮೃತಸರದ ಕಾಲ್ ಸೆಂಟರ್ ನಲ್ಲಿ 30 ಜನರು ಇದೇ ರೀತಿಯ ವಂಚನೆ ಕೆಲಸದಲ್ಲಿ ತೊಡಗಿದ್ದರು ಎಂಬ ಮಾಹಿತಿಯಿದ್ದು ಸಿಬಿಐ ಕಾರ್ಯಾಚರಣೆ ಮುಂದುವರಿಸಿದೆ.
In a major international cybercrime bust, the Central Bureau of Investigation (CBI) has arrested three individuals from Punjab for allegedly scamming American citizens out of over ₹350 crore (approximately USD 40 million) over a span of two years
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm