ಬ್ರೇಕಿಂಗ್ ನ್ಯೂಸ್
31-08-25 10:55 pm Mangalore Correspondent ಕ್ರೈಂ
ಮಂಗಳೂರು, ಆ.31 : ನಗರದ ಫಳ್ನೀರ್ ನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ನೀನು ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ ಎಂದು ಹೇಳಿ ದಬಾಯಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಚೂರಿ ಇರಿತವೆಂದು ವದಂತಿ ಸೃಷ್ಟಿಯಾಗಿದ್ದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಆಟೋ ಚಾಲಕ ಬಶೀರ್ ಎನ್ನುವಾತ ರಸ್ತೆ ಬದಿಯಲ್ಲಿ ಮೂತ್ರ ಮಾಡಲೆಂದು ಆಟೋ ನಿಲ್ಲಿಸಿದ್ದ. ಈ ವೇಳೆ, ಒಬ್ಬಾತ ಆಟೋ ಅಡ್ಡಗಟ್ಟಿ ಬ್ಯಾರಿ ಭಾಷೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ, ನಿನ್ನನ್ನು ಹಾಗೆಯೇ ಬಿಡಲ್ಲ ಎಂದು ಹೇಳಿ ಹಲ್ಲೆ ಮಾಡಿದ್ದಾನೆ. ಇಬ್ಬರೂ ಹೊಡೆದಾಡಿಕೊಂಡಿದ್ದು ಆಟೋ ಚಾಲಕ ಬಶೀರ್ ಹೊಟ್ಟೆಗೆ ಸಣ್ಣ ಗಾಯವಾಗಿದೆ. ಅದು ಯಾವುದರಿಂದ ಆಗಿದ್ದು, ಆಯುಧ ಬಳಸಿ ಹಲ್ಲೆ ನಡೆಸಿದ್ದಾ ಎಂದು ಗೊತ್ತಾಗಿಲ್ಲ.

ಹಲ್ಲೆ ಮಾಡಿದ ವ್ಯಕ್ತಿ ಬಳಿಕ ಪರಾರಿಯಾಗಿದ್ದು ಚೂರಿ ಇರಿತವೆಂದು ಸುದ್ದಿಯಾಗುತ್ತಲೇ ಪೊಲೀಸರು ಅಲ್ಲಿಗೆ ಧಾವಿಸಿ ಆಟೋ ಚಾಲಕನ ಹೇಳಿಕೆ ಪಡೆದು ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಪರಿಚಿತನೇ, ಪೂರ್ವ ದ್ವೇಷದಿಂದ ಮಾಡಿದ್ದಾನೆಯೇ ಎಂದು ತನಿಖೆ ಮಾಡುತ್ತಿದ್ದಾರೆ.
An autorickshaw driver was assaulted in Falnir on Sunday night after being accused of passing information to the police. The incident, which occurred around 9 p.m., sparked rumours of a stabbing, but Police Commissioner Sudheer Reddy later clarified that no such attack had taken place.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm