ಬ್ರೇಕಿಂಗ್ ನ್ಯೂಸ್
01-09-25 03:07 pm Udupi Correspondent ಕ್ರೈಂ
ಉಡುಪಿ, ಸೆ.1 : ಎಸ್ ಬಿಐ ಮಲ್ಪೆ ಶಾಖೆಯಲ್ಲಿ ಮ್ಯಾನೇಜರ್ ಮತ್ತು ಬ್ಯಾಂಕ್ ಸಿಬಂದಿಯೇ ನಕಲಿ ದಾಖಲೆ ಸೃಷ್ಟಿಸಿ 73 ಲಕ್ಷ ರೂಪಾಯಿ ಅಕ್ರಮವಾಗಿ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಹೌಸಿಂಗ್ ಫೈನಾನ್ಸ್ ಕಂಪನಿಯಿಂದ ಇ-ಮೇಲ್ ಸಂದೇಶ ಬಂದಿದೆ ಎಂದು ಬ್ಯಾಂಕಿನ ಮಲ್ಪೆ ಶಾಖೆಯಿಂದ ಅದರಲ್ಲಿ ಸೂಚಿಸಿದ ನಾಲ್ವರ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಸಮುದಾ ಸುವರ್ಣ ನಂತೂರು, ಶರ್ಮಿಳಾ ಎಸ್.ಮುಳೂರು, ಸುಶಾಂತ್ ತಿಂಗಳಾಯ ಕೋಡಿ, ಎಂ.ರಮಾನಾಥ ಬೊಂದೆಲ್ ಮಂಗಳೂರು, ಸದಾನಂದ ಜಿ.ರಾವ್ ಕುಂಜಾಲು ಎಂಬವರ ಹೆಸರಿನ ಐವರು ಖಾತೆದಾರರಿಗೆ ಒಟ್ಟು 73 ಲಕ್ಷ ರೂ. ವರ್ಗಾವಣೆ ಮಾಡಲಾಗಿತ್ತು.
ಈ ಬಗ್ಗೆ ಆ.25ರಂದು ಮಲ್ಪೆ ಶಾಖೆಯ ಪ್ರಸ್ತುತ ಮ್ಯಾನೇಜರ್ ರಾಜೇಶ್ ಗಣಪತಿ ಅವರಿಗೆ ಎಸ್ಬಿಐ ಮುಂಬೈ ಶಾಖೆಯಿಂದ ವಿವರಣೆ ಕೇಳಲಾಗಿತ್ತು. ಮಲ್ಪೆ ಎಸ್ಬಿಐ ಶಾಖೆಯಿಂದ ಮಾಡಲಾಗಿದ್ದ ಹಣ ವರ್ಗಾವಣೆಗೆ ಸಂಬಂಧಿಸಿ ದಾಖಲೆಗಳನ್ನು ಆ.26ರಂದು ಮುಂಬೈ ಮುಖ್ಯ ಕಚೇರಿಗೆ ಮ್ಯಾನೇಜರ್ ಸಲ್ಲಿಸಿದ್ದರು.
ಆದರೆ ಈ ಬಗ್ಗೆ ಫೈನಾನ್ಸ್ ಕಂಪನಿಯಲ್ಲಿ ವ್ಯವಹರಿಸಿದಾಗ, ನಾವು ಯಾವುದೇ ಇ-ಮೇಲ್ ಸಂದೇಶ ಕಳುಹಿಸಿಲ್ಲ ಎಂದು ಉತ್ತರ ಬಂದಿತ್ತು. ಕಂಪನಿಯಿಂದ ಹಣ ವರ್ಗಾವಣೆಗೆ ಸಂಬಂಧಿಸಿ ಮಲ್ಪೆ ಎಸ್ಬಿಐ ಶಾಖೆಗೆ ಯಾವುದೇ ಮನವಿ ಕಳುಹಿಸಿಲ್ಲ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಎಸ್ ಬಿಐ ಶಾಖೆಯ ಮ್ಯಾನೇಜರ್ ತನಿಖೆ ನಡೆಸಿದಾಗ ಅವ್ಯವಹಾರ ಪತ್ತೆಯಾಗಿದೆ.
ಮಲ್ಪೆ ಶಾಖೆಯ ಈ ಹಿಂದೆ ಮ್ಯಾನೇಜರ್ ಆಗಿದ್ದ ಮೀರಾ ಪಲ್ಲವಿ ಟಿ.ಎಚ್. ಎಂಬವರು ಹಾಗೂ ಇತರರೊಂದಿಗೆ ಸೇರಿ ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿರುವುದು ಪತ್ತೆಯಾಗಿದೆ. ಆ.11ರಿಂದ 22ರ ಅವಧಿಯಲ್ಲಿ ಒಟ್ಟು 73 ಲಕ್ಷ ರೂ. ಹಣ ವರ್ಗಾಯಿಸಿ ಸ್ವಂತಕ್ಕೆ ಬಳಸಿಕೊಂಡಿರುವುದು ಪತ್ತೆಯಾಗಿದೆ. ಆಮೂಲಕ ಬ್ಯಾಂಕಿಗೆ ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿದ ಆರೋಪದಲ್ಲಿ ಹಿಂದಿನ ಮ್ಯಾನೇಜರ್ ಪಲ್ಲವಿ ಮತ್ತು ಖಾತೆದಾರರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A major financial fraud has come to light at the State Bank of India (SBI) Malpe branch, where the bank’s own staff, including the former branch manager, are accused of forging documents and fraudulently transferring ₹73 lakh to multiple personal accounts under the pretext of a housing finance transaction.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm