ಬ್ರೇಕಿಂಗ್ ನ್ಯೂಸ್
02-09-25 11:22 am Mangalore Correspondent ಕ್ರೈಂ
ಮಂಗಳೂರು, ಸೆ.2 : ಫಳ್ನೀರ್ ನಲ್ಲಿ ಆಟೋ ಚಾಲಕನೊಬ್ಬ ತನ್ನ ಮೇಲೆ ತಾನೇ ಹಲ್ಲೆ ಮಾಡಿಕೊಂಡು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾಗಿ ಸುಳ್ಳು ಸುದ್ದಿ ಹಬ್ಬಿಸಿರುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.
ಆಗಸ್ಟ್ 31ರ ಭಾನುವಾರ ರಾತ್ರಿ ಬಶೀರ್ ಎನ್ನುವ ಹೆಸರಿನ ಆಟೋ ಚಾಲಕ ಮೂತ್ರ ಮಾಡಲೆಂದು ಫಳ್ನೀರ್ ನಲ್ಲಿ ಆಟೋ ನಿಲ್ಲಿಸಿದ್ದಾಗ ತನ್ನ ಮೇಲೆ ತಂಡವೊಂದು ಹಲ್ಲೆ ನಡೆಸಿದೆ ಎಂದು ಸುದ್ದಿ ಹಬ್ಬಿಸಿದ್ದರು. ಅಲ್ಲದೆ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದರ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ತೆರಳಿ ಆಟೋ ಚಾಲಕನ ಹೇಳಿಕೆ ಪಡೆದು ಕೇಸು ದಾಖಲಿಸಿದ್ದರು. ಬ್ಯಾರಿ ಭಾಷೆ ಮಾತನಾಡುತ್ತಿದ್ದವರು ನೀನು ಪೊಲೀಸರಿಗೆ ಮಾಹಿತಿ ನೀಡ್ತಿಯಲ್ವಾ ಎಂದು ಹೇಳಿ ಹಲ್ಲೆ ನಡೆಸಿದ್ದಾಗಿ ಬಶೀರ್ ತಿಳಿಸಿದ್ದರು. ಇದರಂತೆ, ಹಲ್ಲೆ ನಡೆಸಿದವರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದರು.
ತನಿಖೆಯ ಸಂದರ್ಭದಲ್ಲಿ ಬಶೀರ್ ಹಲ್ಲೆಯಾದ ಜಾಗವನ್ನು ತೋರಿಸುವಲ್ಲಿ ಎಡವಿದ್ದಾರೆ. ಸಿಸಿಟಿವಿಯಲ್ಲಿ ಪೊಲೀಸರು ಚೆಕ್ ಮಾಡಿದ್ದು ಸ್ಥಳದಲ್ಲಿ ಹಲ್ಲೆ ನಡೆದಿದ್ದು ಕಂಡುಬರಲಿಲ್ಲ. ಹೀಗಾಗಿ ದೂರುದಾರನನ್ನು ಮತ್ತಷ್ಟು ತನಿಖೆ ನಡೆಸಿದಾಗ ಸುಳ್ಳು ದೂರು ನೀಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಈ ಹಿಂದೆ ಪೊಲೀಸರಿಗೆ ಮಾಹಿತಿ ಕೊಟ್ಟ ವಿಚಾರದಲ್ಲಿ ಕೆಲವರು ಬೆದರಿಕೆ ಹಾಕಿದ್ದರು. ಇದರಿಂದಾಗಿ ಅವರು ದಾಳಿ ಮಾಡುತ್ತಾರೆಂಬ ಭಯ ಇದ್ದುದರಿಂದ ಅದಕ್ಕು ಮೊದಲೇ ದಾಳಿಯ ನಾಟಕ ಮಾಡಿದ್ದೇನೆ ಎಂದು ಹೇಳಿದ್ದಾನೆ.
ತಾನೇ ಹೊಟ್ಟೆಯ ಭಾಗಕ್ಕೆ ಸ್ವಲ್ಪ ತಿವಿದು ಗಾಯ ಮಾಡಿಕೊಂಡಿದ್ದು ಯಾರೋ ಹಲ್ಲೆ ನಡೆಸಿದ್ದಾರೆಂದು ಹೇಳಿದ್ದ. ಪೊಲೀಸ್ ತನಿಖೆಯಲ್ಲಿ ನೈಜ ವಿಷಯ ತಿಳಿಯುತ್ತಲೇ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ಹಾಕಿದ್ದಾರೆ. ಸುಳ್ಳು ಭಾರೀ ವೇಗದಲ್ಲಿ ಓಡುತ್ತದೆ, ಸತ್ಯ ಕುಂಟುತ್ತಾ ಬಂದು ಎದುರು ನಿಲ್ಲುತ್ತದೆ. ಈ ವಿಚಾರದಲ್ಲು ಅದೇ ರೀತಿ ಆಗಿದೆ. ಆಟೋ ಚಾಲಕನಿಗೆ ಹಲ್ಲೆಯೆಂದು ಭಾರೀ ವೇಗದಲ್ಲಿ ಸುದ್ದಿ ಓಡಿತ್ತು. ಒಂದ್ವೇಳೆ, ಹಿಂದುಗಳು ಹಲ್ಲೆ ಮಾಡಿದ್ದಾರೆಂದು ಆತ ಹೇಳಿರುತ್ತಿದ್ದರೆ ಪರಿಸ್ಥಿತಿ ಬೇರೆಯೇ ಆಗುತ್ತಿತ್ತು. ಜಾಲತಾಣದಲ್ಲಿ ವಿಭಿನ್ನ ರೀತಿಯಲ್ಲಿ ಸುದ್ದಿ ಓಡುತ್ತಿತ್ತು. ಪೊಲೀಸರ ವಿಚಾರಣೆಯಲ್ಲಿ ಹಲ್ಲೆಯೇ ಆಗಿಲ್ಲ ಎನ್ನುವ ನೈಜ ವಿಷಯ ಗೊತ್ತಾಗಿದೆ. ಸುದ್ದಿ ಹಂಚಿಕೊಳ್ಳುವಾಗ ಸಾರ್ವಜನಿಕರು ಜಾಗ್ರತೆ ವಹಿಸಬೇಕು ಎಂದು ಸುಧೀರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
In a dramatic twist, police investigations have revealed that an auto driver in Falnir faked an assault on himself and spread false claims of being attacked by a group. On the night of August 31, the driver, identified as Basheer, had stopped his auto in Falnir, allegedly to relieve himself. He later told police that a group accosted and assaulted him, claiming he was passing information to the police.
02-09-25 06:22 pm
Bangalore Correspondent
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
Man sets woman on fire, Bangalore: ತನ್ನನ್ನು ಬ...
01-09-25 10:53 pm
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 04:44 pm
Mangalore Correspondent
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
02-09-25 04:31 pm
Mangalore Correspondent
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm