ಬ್ರೇಕಿಂಗ್ ನ್ಯೂಸ್
03-09-25 05:40 pm Bangalore Correspondent ಕ್ರೈಂ
ಬೆಂಗಳೂರು, ಸೆ 03 : ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಪ್ರಜೆಯನ್ನ ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಚಿಕೋಜಿ ಹೇಡಾಹಾ ಬಂಧಿತ ಆರೋಪಿ.
ಬಂಧಿತನಿಂದ 2 ಕೆ.ಜಿ 36 ಗ್ರಾಂ ಎಂಡಿಎಂಎ, ₹3 ಸಾವಿರ ನಗದು, ತೂಕದ ಯಂತ್ರ, ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ₹2.30 ಕೋಟಿ ಎಂದು ಅಂದಾಜಿಸಲಾಗಿದೆ.

ಬಾಗಲೂರಿನ ಸಂತೆ ವೃತ್ತದ ಬಳಿ ಆರೋಪಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಬ್ಯುಸಿನೆಸ್ ವೀಸಾ ಪಡೆದು 2011ರಲ್ಲಿ ಆರೋಪಿ ಭಾರತಕ್ಕೆ ಬಂದಿದ್ದ. ವೀಸಾ ಅವಧಿ ಮುಕ್ತಾಯವಾಗಿದ್ದರೂ ಬೆಂಗಳೂರಿನಲ್ಲೇ ನೆಲಸಿದ್ದ. ಅಪರಿಚಿತ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸುತ್ತಿದ್ದ ಆರೋಪಿ, ನಗರದ ಹೊರವಲಯದ ಕಾಲೇಜು ಹಾಗೂ ಪೇಯಿಂಗ್ ಗೆಸ್ಟ್ ಬಳಿ ಮಾರಾಟ ಮಾಡುತ್ತಿದ್ದ. ಈ ಹಿಂದೆಯೂ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದಾಗ ಚಿಕೋಜಿ ಹೇಡಾಹಾನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆತ ಕಾರಾಗೃಹದಿಂದ ಹೊರಬಂದ ಬಳಿಕ ಅದೇ ಕೃತ್ಯ ಮುಂದುವರಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Bagalur Police have arrested a Nigerian national who had entered India on a business visa but was allegedly involved in the illegal sale of narcotic substances in the city. The accused, identified as Chigozie Hedaha, was caught with a large quantity of drugs. During the operation, police seized 2.036 kg of MDMA, ₹3,000 in cash, a weighing machine, and a two-wheeler. The total value of the seized drugs is estimated at ₹2.3 crore.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm