ಬ್ರೇಕಿಂಗ್ ನ್ಯೂಸ್
26-12-20 09:29 am Mangaluru Correspondent ಕ್ರೈಂ
ಉಳ್ಳಾಲ, ಡಿ.26: ಸ್ಕೂಟರಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರಿಗೆ ಪಲ್ಸರ್ ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಇರಿದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಕುತ್ತಾರು ಪದವಿನ ಬಳಿಯ ಅಡು ಎಂಬಲ್ಲಿ ನಡೆದಿದೆ.
ಸೇವಂತಿ ಗುಡ್ಡೆಯ ಆದಿತ್ಯ (23) ಮತ್ತು ಪಂಡಿತ್ ಹೌಸ್ ಶಿವಾಜಿನಗರದ ನಿವಾಸಿ ಪವನ್(22) ಇರಿತಕ್ಕೊಳಗಾದ ಯುವಕರು. ಅದೃಷ್ಟವಶಾತ್ ಇಬ್ಬರು ಕೂಡ ಸಣ್ಣ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದಿತ್ಯ ಅವರ ತಮ್ಮ ಅನೀಷ್ ಎಂಬಾತ ರಾಣಿಪುರಕ್ಕೆ ಕೇಟರಿಂಗ್ ಕೆಲಸಕ್ಕೆ ತೆರಳಿದ್ದು ಅವನನ್ನು ವಾಪಸ್ ಕರೆತರಲು ಆದಿತ್ಯ ಸ್ನೇಹಿತ ಪವನ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಣಿಪುರಕ್ಕೆ ತೆರಳಿದ್ದಾರೆ. ಪವನ್ ವಾಹನ ಚಲಾಯಿಸುತ್ತಿದ್ದು ಆದಿತ್ಯ ಹಿಂಬಂದಿ ಕೂತಿದ್ದರೆನ್ನಲಾಗಿದೆ. ಸುಮಾರು 9.30 ಗಂಟೆ ಹೊತ್ತಿಗೆ ಋಷಿವನದ ಬಳಿಯ ಅಡು ಎಂಬಲ್ಲಿಗೆ ತಲುಪಿದಾಗ ಹಿಂದಿನಿಂದ ಬಂದ ಪಲ್ಸರ್ ಬೈಕಲ್ಲಿದ್ದ ಇಬ್ಬರು ದುಷ್ಕರ್ಮಿಗಳು ಆದಿತ್ಯರ ಬೆನ್ನು , ಪವನ್ ಅವರ ತೋಳಿಗೆ ಇರಿದು ರಾಣಿಪುರದ ಕಡೆಗೆ ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೆಲವು ವರ್ಷಗಳ ಹಿಂದೆ ಉಳ್ಳಾಲ ಪ್ರದೇಶದಲ್ಲಿ ಅಪರಿಚಿತ ಕಪ್ಪು ಪಲ್ಸರ್ ನಲ್ಲಿ ಬರುತ್ತಿದ್ದ ದುಷ್ಕರ್ಮಿಗಳಿಂದ ಸರಣಿ ಇರಿತಗಳಾಗಿದ್ದವು. ಇದೀಗ ಮತ್ತೆ ಅದೇ ರೀತಿಯ ಪಲ್ಸರ್ ಬೈಕ್ ಗುಮ್ಮ ಈ ಪ್ರದೇಶದಲ್ಲಿ ಜಾಗೃತಗೊಂಡಿದ್ದು ಅಶಾಂತಿ ಸೃಷ್ಟಿಸಲು ಸಂಚು ನಡೆಸುತ್ತಿದೆ. ಉಳ್ಳಾಲ ಪೊಲೀಸರು ಕೇಸು ದಾಖಲಿಸಿ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.
Two young men who were travelling by a motorbike in Ullal, Mangalore were stabbed by a gang which approached them in another motorbike from behind and caused an accident before stabbing them.
16-03-25 12:11 pm
Bangalore Correspondent
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 02:05 pm
Mangalore Correspondent
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
16-03-25 07:27 pm
Mangalore Correspondent
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm