ಬ್ರೇಕಿಂಗ್ ನ್ಯೂಸ್
05-09-25 12:34 pm Udupi Correspondent ಕ್ರೈಂ
ಉಡುಪಿ, ಸೆ.5 : ಒಂದೂವರೆ ವರ್ಷದ ಮಗುವಿನೊಂದಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಂತ್ಯಸಂಸ್ಕಾರಕ್ಕೆ ಆಗಮಿಸಿದ ಹೆರಂಜೆ ನಿವಾಸಿ, 16 ವರ್ಷಗಳ ಹಿಂದಿನ ಕೊಲೆಯತ್ನ ಪ್ರಕರಣದಲ್ಲಿ ಶಿಕ್ಷೆಯಾಗಿದ್ದ ಸುಭಾಷ್ ನಾಯ್ಕನನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ್ದು, ಜೈಲಿಗೆ ಹಾಕಲಾಗಿದೆ.
2009ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಭಾಷ್ ನಾಯ್ಕನನ್ನು 2012ರಲ್ಲಿ ಜಿಲ್ಲಾ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ಶಿಕ್ಷೆ ವಿಧಿಸಿತ್ತು. ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ, 13 ವರ್ಷಗಳ ವಿಚಾರಣೆ ಬಳಿಕ 2025ರ ಜುಲೈನಲ್ಲಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಇದರ ಬೆನ್ನಲ್ಲೇ ಬಂಧನ ಭೀತಿಯಿಂದ ಸುಭಾಷ್ ನಾಯ್ಕ ನಾಪತ್ತೆಯಾಗಿದ್ದ. ಮನೆಯಲ್ಲಿ ಪತ್ನಿ ಸುಶ್ಮಿತಾ ಮತ್ತು ಮಗು ಇಬ್ಬರೇ ಇದ್ದು ಸುಭಾಷ್ ನಾಯ್ಕಗೆ ವಾರೆಂಟ್ ನೋಟಿಸ್ ಬರುತ್ತಿತ್ತು. ಇದರಿಂದ ಮನನೊಂದು ಗಂಡನಿಗೆ 12 ವರ್ಷ ಶಿಕ್ಷೆಯಾಗಿದೆ, ತನಗೆ ಇನ್ನಾರು ಗತಿಯೆಂದು ಸುಶ್ಮಿತಾ ಸೋಮವಾರ ತನ್ನ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಂಗಳವಾರ ಉಡುಪಿ ತಾಲೂಕು ತಹಸೀಲ್ದಾರ್ ಪಿ.ಆರ್.ಗುರುರಾಜ ಸಮ್ಮುಖದಲ್ಲಿ ಮಣಿಪಾಲದಲ್ಲಿ ಮರಣೋತ್ತರ ಪ್ರಕ್ರಿಯೆ ನಡೆಸಿ ಬಳಿಕ ಆರೂರು ಗ್ರಾಮ ಪಂಚಾಯಿತಿ ರುದ್ರಭೂಮಿಯಲ್ಲಿ ತಾಯಿ- ಮಗುವಿನ ಅಂತ್ಯಸಂಸ್ಕಾರ ನಡೆಸಲಾಯಿತು. ಈ ಸಂದರ್ಭ ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದ ಸುಭಾಷ್ ನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. 16 ವರ್ಷಗಳ ಹಿಂದೆ ನೆರೆಮನೆಯ ವ್ಯಕ್ತಿಯ ಮೇಲೆ ಹಲ್ಲೆಗೈದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಸುಭಾಷ್ ಗೆ ಗರಿಷ್ಠ 12 ವರ್ಷಗಳ ಶಿಕ್ಷೆ ನೀಡಲಾಗಿತ್ತು.
In a tragic turn of events in Brahmavar, a man who had come to attend the funeral of his wife and child was arrested by the police in connection with a 16-year-old attempt-to-murder case.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm