ಬ್ರೇಕಿಂಗ್ ನ್ಯೂಸ್
05-09-25 12:34 pm Udupi Correspondent ಕ್ರೈಂ
ಉಡುಪಿ, ಸೆ.5 : ಒಂದೂವರೆ ವರ್ಷದ ಮಗುವಿನೊಂದಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಂತ್ಯಸಂಸ್ಕಾರಕ್ಕೆ ಆಗಮಿಸಿದ ಹೆರಂಜೆ ನಿವಾಸಿ, 16 ವರ್ಷಗಳ ಹಿಂದಿನ ಕೊಲೆಯತ್ನ ಪ್ರಕರಣದಲ್ಲಿ ಶಿಕ್ಷೆಯಾಗಿದ್ದ ಸುಭಾಷ್ ನಾಯ್ಕನನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ್ದು, ಜೈಲಿಗೆ ಹಾಕಲಾಗಿದೆ.
2009ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಭಾಷ್ ನಾಯ್ಕನನ್ನು 2012ರಲ್ಲಿ ಜಿಲ್ಲಾ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ಶಿಕ್ಷೆ ವಿಧಿಸಿತ್ತು. ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ, 13 ವರ್ಷಗಳ ವಿಚಾರಣೆ ಬಳಿಕ 2025ರ ಜುಲೈನಲ್ಲಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಇದರ ಬೆನ್ನಲ್ಲೇ ಬಂಧನ ಭೀತಿಯಿಂದ ಸುಭಾಷ್ ನಾಯ್ಕ ನಾಪತ್ತೆಯಾಗಿದ್ದ. ಮನೆಯಲ್ಲಿ ಪತ್ನಿ ಸುಶ್ಮಿತಾ ಮತ್ತು ಮಗು ಇಬ್ಬರೇ ಇದ್ದು ಸುಭಾಷ್ ನಾಯ್ಕಗೆ ವಾರೆಂಟ್ ನೋಟಿಸ್ ಬರುತ್ತಿತ್ತು. ಇದರಿಂದ ಮನನೊಂದು ಗಂಡನಿಗೆ 12 ವರ್ಷ ಶಿಕ್ಷೆಯಾಗಿದೆ, ತನಗೆ ಇನ್ನಾರು ಗತಿಯೆಂದು ಸುಶ್ಮಿತಾ ಸೋಮವಾರ ತನ್ನ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಂಗಳವಾರ ಉಡುಪಿ ತಾಲೂಕು ತಹಸೀಲ್ದಾರ್ ಪಿ.ಆರ್.ಗುರುರಾಜ ಸಮ್ಮುಖದಲ್ಲಿ ಮಣಿಪಾಲದಲ್ಲಿ ಮರಣೋತ್ತರ ಪ್ರಕ್ರಿಯೆ ನಡೆಸಿ ಬಳಿಕ ಆರೂರು ಗ್ರಾಮ ಪಂಚಾಯಿತಿ ರುದ್ರಭೂಮಿಯಲ್ಲಿ ತಾಯಿ- ಮಗುವಿನ ಅಂತ್ಯಸಂಸ್ಕಾರ ನಡೆಸಲಾಯಿತು. ಈ ಸಂದರ್ಭ ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದ ಸುಭಾಷ್ ನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. 16 ವರ್ಷಗಳ ಹಿಂದೆ ನೆರೆಮನೆಯ ವ್ಯಕ್ತಿಯ ಮೇಲೆ ಹಲ್ಲೆಗೈದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಸುಭಾಷ್ ಗೆ ಗರಿಷ್ಠ 12 ವರ್ಷಗಳ ಶಿಕ್ಷೆ ನೀಡಲಾಗಿತ್ತು.
In a tragic turn of events in Brahmavar, a man who had come to attend the funeral of his wife and child was arrested by the police in connection with a 16-year-old attempt-to-murder case.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am