ಬ್ರೇಕಿಂಗ್ ನ್ಯೂಸ್
05-09-25 12:34 pm Udupi Correspondent ಕ್ರೈಂ
ಉಡುಪಿ, ಸೆ.5 : ಒಂದೂವರೆ ವರ್ಷದ ಮಗುವಿನೊಂದಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಂತ್ಯಸಂಸ್ಕಾರಕ್ಕೆ ಆಗಮಿಸಿದ ಹೆರಂಜೆ ನಿವಾಸಿ, 16 ವರ್ಷಗಳ ಹಿಂದಿನ ಕೊಲೆಯತ್ನ ಪ್ರಕರಣದಲ್ಲಿ ಶಿಕ್ಷೆಯಾಗಿದ್ದ ಸುಭಾಷ್ ನಾಯ್ಕನನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ್ದು, ಜೈಲಿಗೆ ಹಾಕಲಾಗಿದೆ.
2009ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಭಾಷ್ ನಾಯ್ಕನನ್ನು 2012ರಲ್ಲಿ ಜಿಲ್ಲಾ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ಶಿಕ್ಷೆ ವಿಧಿಸಿತ್ತು. ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ, 13 ವರ್ಷಗಳ ವಿಚಾರಣೆ ಬಳಿಕ 2025ರ ಜುಲೈನಲ್ಲಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಇದರ ಬೆನ್ನಲ್ಲೇ ಬಂಧನ ಭೀತಿಯಿಂದ ಸುಭಾಷ್ ನಾಯ್ಕ ನಾಪತ್ತೆಯಾಗಿದ್ದ. ಮನೆಯಲ್ಲಿ ಪತ್ನಿ ಸುಶ್ಮಿತಾ ಮತ್ತು ಮಗು ಇಬ್ಬರೇ ಇದ್ದು ಸುಭಾಷ್ ನಾಯ್ಕಗೆ ವಾರೆಂಟ್ ನೋಟಿಸ್ ಬರುತ್ತಿತ್ತು. ಇದರಿಂದ ಮನನೊಂದು ಗಂಡನಿಗೆ 12 ವರ್ಷ ಶಿಕ್ಷೆಯಾಗಿದೆ, ತನಗೆ ಇನ್ನಾರು ಗತಿಯೆಂದು ಸುಶ್ಮಿತಾ ಸೋಮವಾರ ತನ್ನ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಂಗಳವಾರ ಉಡುಪಿ ತಾಲೂಕು ತಹಸೀಲ್ದಾರ್ ಪಿ.ಆರ್.ಗುರುರಾಜ ಸಮ್ಮುಖದಲ್ಲಿ ಮಣಿಪಾಲದಲ್ಲಿ ಮರಣೋತ್ತರ ಪ್ರಕ್ರಿಯೆ ನಡೆಸಿ ಬಳಿಕ ಆರೂರು ಗ್ರಾಮ ಪಂಚಾಯಿತಿ ರುದ್ರಭೂಮಿಯಲ್ಲಿ ತಾಯಿ- ಮಗುವಿನ ಅಂತ್ಯಸಂಸ್ಕಾರ ನಡೆಸಲಾಯಿತು. ಈ ಸಂದರ್ಭ ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದ ಸುಭಾಷ್ ನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. 16 ವರ್ಷಗಳ ಹಿಂದೆ ನೆರೆಮನೆಯ ವ್ಯಕ್ತಿಯ ಮೇಲೆ ಹಲ್ಲೆಗೈದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಸುಭಾಷ್ ಗೆ ಗರಿಷ್ಠ 12 ವರ್ಷಗಳ ಶಿಕ್ಷೆ ನೀಡಲಾಗಿತ್ತು.
In a tragic turn of events in Brahmavar, a man who had come to attend the funeral of his wife and child was arrested by the police in connection with a 16-year-old attempt-to-murder case.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm